• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಓವರ್‍ಟೇಕ್ ಕಿಲ್ಲರ್ ಇನ್ನು ಜೀವನಪರ್ಯಂತ ಜೈಲಲ್ಲಿ!

TNN Correspondent Posted On September 7, 2017
0


0
Shares
  • Share On Facebook
  • Tweet It

ಪಟನಾ : ಪರೀಕ್ಷೆ ಮುಗಿಸಿದ ಸಂಭ್ರಮಕ್ಕೆ ಸ್ನೇಹಿತರೊಂದಿಗೆ ಭಾರೀ ಮೋಜು-ಮಸ್ತಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಸ್ವಿಫ್ಟ್ ಕಾರೊಂದು ತನ್ನ ಕಾರನ್ನು ಓವರ್‍ಟೇಕ್ ಮಾಡಿದ್ದಕ್ಕಾಗಿ ಓವರ್‍ಸ್ಪೀಡ್‍ನಿಂದ ಹಿಂಬಾಲಿಸಿ ಅದನ್ನು ಅಡ್ಡಗಟ್ಟಿ ಚಾಲಕನಿಗೆ ಗುಂಡು ಹಾರಿಸಿ ಕೊಂದಿದ್ದ ರಾಕಿ ಯಾದವ್‍ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ ಮೇನಲ್ಲಿ ನಡೆದ ಘಟನೆಯ ಕೂಲಂಕುಷ ವಿಚಾರಣೆ ನಡೆಸಿದ್ದ ಗಯಾ ಜಿಲ್ಲಾ ನ್ಯಾಯಾಲಯ ಬುಧವಾರ ಮಹತ್ವದ ತೀರ್ಪು ನೀಡಿದೆ. ಹತ್ಯೆ ಮಾಡಿ ತನ್ನ ಅಪ್ಪ ಭೂಗತ ಪಾತಕಿ ಬಿಂದಿ ಯಾದವ್‍ಗೆ ರಾಕಿ ಕರೆಮಾಡಿದ್ದ. ಮಗನ ರಕ್ಷಣೆಗೆಂದು ಬಿಂದಿ ತನ್ನ ಗ್ಯಾರೇಜ್‍ನಲ್ಲಿ ಅಡಗಿಸಿಟ್ಟಿದ್ದ. ರಾಕಿ ತಾಯಿ ಮನೋರಮಾ ದೇವಿ ಉಚ್ಚಾಟಿತ ಜೆಡಿಯು ಎಂಎಲ್‍ಸಿಯಾಗಿದ್ದು, ಆಕೆಯು ತನ್ನ ಪ್ರಭಾವ ಬಳಸಿ ಮಗನನ್ನು ರಕ್ಷಿಸಲು ಯತ್ನಿಸಿದ್ದು ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಬಿಂದಿ ಯಾದವ್‍ಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಜತೆಗೆ ಅಪರಾಧಿ ರಾಕಿಗೆ ರೂ. 1 ಲಕ್ಷ ಹಾಗೂ ಬಿಂದಿಗೆ ರೂ.50ಸಾವಿರ ದಂಡ ಹಾಕಿದೆ.

ಹತ್ಯೆಯಾದ 19 ವರ್ಷದ ಹೈಸ್ಕೂಲ್ ವಿದ್ಯಾರ್ಥಿ ಆದಿತ್ಯ ಸಚ್‍ದೇವ್ ಕುಟುಂಬ ನ್ಯಾಯಾಲಯದ ತೀರ್ಪು ಸ್ವಾಗತಿಸಿ, ಮಗನ ಆತ್ಮಕ್ಕೆ ಶಾಂತಿ ದೊರಕಿದೆ ಎಂದು ಸಮಾಧಾನಪಟ್ಟಿದೆ.

ಮೇ 10, 2016ರಂದು ನಡೆದ ಘಟನೆ ಬಳಿಕ ಸಚ್‍ದೇವ್ ಕುಟುಂಬ ನೀಡಿದ್ದ ದೂರು ಆಧರಿಸಿ ರಾಕಿಗೆ ಪಾರಾಗಲು ಕುಮ್ಮಕ್ಕು ನೀಡಿದ್ದ ಕಾರಣಕ್ಕೆ ಬಿಂದಿ ಯಾದವ್ ಹಾಗೂ ಮನೋರಮಾ ದೇವಿಯನ್ನು ಪೊಲೀಸರು ಬಂಧಿಸಿದ್ದರು. ಜಾಮಿನು ಪಡೆದು ಹೊರಬಂದಿದ್ದ ಮೂವರನ್ನು ಆ.31ರಂದು ಜಿಲ್ಲಾ ನ್ಯಾಯಾಲಯ ದೋಷಿಗಳೆಂದು ಹೇಳಿತ್ತು.

0
Shares
  • Share On Facebook
  • Tweet It


bindicar overtakerange roverrockyswift sachdevyadav


Trending Now
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 2
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 3
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 4
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 5
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು

  • Privacy Policy
  • Contact
© Tulunadu Infomedia.

Press enter/return to begin your search