• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ

Tulunadu News Posted On August 23, 2025
0


0
Shares
  • Share On Facebook
  • Tweet It

21 ವರ್ಷಗಳ ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಮುಖಕ್ಕೆ 17 ಹೊಲಿಗೆಗಳನ್ನು ಹಾಕಬೇಕಾಗಿ ಬಂದಿರುವ ಘಟನೆ ಉತ್ತರಪ್ರದೇಶದ ಕಾನಪುರದಲ್ಲಿ ನಡೆದಿದೆ. ಆಕೆ ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದಾಗ ದಾರಿಯಲ್ಲಿ ಬೀದಿನಾಯಿಗಳು ಆಕೆಯ ಮೇಲೆ ದಾಳಿ ಮಾಡಿವೆ. ಇದರಿಂದ ಅವಳ ಮುಖದ ಮೇಲೆ ಆಳವಾದ ಗಾಯಗಳಾಗಿವೆ. ಪರಿಸ್ಥಿತಿ ಹೇಗಿತ್ತು ಎಂದರೆ ವೈದ್ಯರಿಗೆ ಅವಳ ಮುಖದ ಗಾಯಗಳನ್ನು ಹೊಲಿಯಲು 17 ಹೊಲಿಗೆಗಳನ್ನು ಹಾಕಬೇಕಾಯಿತು.

ಇಂತಹ ಪರಿಸ್ಥಿತಿ ಭಾರತದ ಯಾವುದೋ ರಾಜ್ಯದ ಯಾವುದೋ ಒಂದು ಭಾಗದಲ್ಲಿ ಮಾತ್ರವಲ್ಲ, ದೇಶದ ಎಲ್ಲಾ ಕಡೆ ಇಂತಹ ಪರಿಸ್ಥಿತಿ ಉದ್ಭವವಾಗಿದೆ. ಬೀದಿನಾಯಿಗಳ ಸಂಖ್ಯೆ ವಿಪರೀತವಾಗಿದೆ. ಎಲ್ಲಿಯ ಮಟ್ಟಿಗೆ ಅಂದರೆ ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತರಿಗೆ ವ್ಯಕ್ತಿಯೊಬ್ಬ ಕೆನ್ನೆಗೆ ಬಾರಿಸುವ ಮಟ್ಟಿಗೆ ಈ ವಿಷಯ ಬೆಳೆದಿದೆ. ಸುಪ್ರೀಂ ಕೋರ್ಟ್ ಕೂಡ ಈ ವಿಷಯದಲ್ಲಿ ಬೀದಿನಾಯಿಗಳ ಪರ ಸಾಫ್ಟ್ ಕಾರ್ನರ್ ಹೊಂದಿದಂತೆ ಕಾಣುತ್ತಿದೆ. ಇದರಿಂದ ಮಕ್ಕಳು, ವೃದ್ಧರು ಹಾಗೂ ಕಾಲೇಜು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಭಯಪಡುವ ಹಾಗಿದೆ. ಇನ್ನು ಮುಂಜಾನೆ ವಾಕಿಂಗ್ ಹೋಗುವವರು, ರಾತ್ರಿ ಕೆಲಸ ಮುಗಿಸಿ ಲೇಟಾಗಿ ಮನೆಗೆ ಬರುವವರಿಗೂ ಈ ಬೀದಿನಾಯಿಗಳ ಕಾಟ ಹೇಳತೀರದು. ಪುಟ್ಟ ಮಕ್ಕಳು ಪಕ್ಕದ ರಸ್ತೆಯ ಅಂಗಡಿಗೆ ಹೋಗಿ ಸಾಮಾನು ತೆಗೆದುಕೊಂಡು ಬರುವಾಗ ಅಂತವರ ಮೇಲೆ ದಾಳಿ ಮಾಡಿರುವ ಅನೇಕ ಘಟನೆಗಳು ನಡೆದಿವೆ. ಇದರಿಂದ ಮಕ್ಕಳನ್ನು ಒಂಟಿಯಾಗಿ ಹೊರಗೆ ಕಳುಹಿಸಲು ಪೋಷಕರು ಹೆದರುವ ಪರಿಸ್ಥಿತಿ ಇದೆ.

ಹೀಗೆ ಬೀದಿನಾಯಿಗಳು ದಾಳಿ ಮಾಡಿ ಆಸ್ಪತ್ರೆಯಲ್ಲಿ ಮುಖಕ್ಕೆ 17 ಹೊಲಿಗೆಗಳನ್ನು ಹಾಕಿಕೊಂಡು ಮಲಗಿರುವ ವೈಷ್ಣವಿಯ ಅಂಕಲ್ ಮಾತನಾಡಿ ” ಅವಳು ಏನನ್ನು ತಿನ್ನುವ ಪರಿಸ್ಥಿತಿಯಲ್ಲಿ ಇಲ್ಲ. ಅವಳ ಮುಖ ಕೂಡ ಅಲುಗಾಡಿಸಲು ಆಗುತ್ತಿಲ್ಲ. ಅವಳ ಬಾಯಿಗೆ ದ್ರವ ಆಹಾರ ನೀಡಲಾಗುತ್ತಿದೆ” ಎಂದು ಬಹಳ ನೋವಿನಿಂದ ಹೇಳಿದ್ದಾರೆ. ಈ ಬೀದಿನಾಯಿಗಳು ಜನಸಾಮಾನ್ಯರನ್ನೇ ಗುರಿ ಮಾಡಿ ದಾಳಿ ಮಾಡುವುದರಿಂದ ಹೆಚ್ಚಿನ ತೊಂದರೆಯಾಗುವುದು ರಸ್ತೆಯಲ್ಲಿ ನಡೆದುಕೊಂಡು ಹೋಗುವವರಿಗೆ. ಇದರ ಕಷ್ಟ ಕಾರಿನಲ್ಲಿ ಹೋಗುವವರಿಗೆ, ಸೆಲೆಬ್ರಿಟಿಗಳಿಗೆ ಗೊತ್ತಾಗುವುದಿಲ್ಲ. ಅಂತವರು ನಾಯಿ ಪ್ರೀತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ತೋರಿಸುತ್ತಾ, ಅವುಗಳ ವಿರುದ್ಧ ಏನು ಕ್ರಮ ಕೂಡ ತೆಗೆದುಕೊಳ್ಳುವುದು ಸರಿಯಲ್ಲ ಎನ್ನುವಂತಹ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಆದರೆ ಗ್ರೌಂಡ್ ರಿಯಾಲಿಟಿಯೇ ಬೇರೆ ಇದೆ ಎನ್ನುವುದು ಅಕ್ಷರಶ: ನಡೆದುಕೊಂಡು ಹೋಗುವವರಿಗೆ ಮಾತ್ರ ಗೊತ್ತು.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search