• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಕ್ಯಾಬಿನೆಟಿನಲ್ಲಿ ಚರ್ಚಿಸಿ ಧರ್ಮಸ್ಥಳ ಕೇಸ್ ನಿರ್ಧಾರ: ಸಂತ ನಿಯೋಗಕ್ಕೆ ಅಮಿತ್ ಶಾ ಭರವಸೆ!

Tulunadu News Posted On September 4, 2025
0


0
Shares
  • Share On Facebook
  • Tweet It

ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಎಲ್ಲಾ ಕಡೆ ಸಾಕಷ್ಟು ಚರ್ಚೆಯಾಗುತ್ತಿದ್ದಂತೆ ಈಗ ವಿವಿಧ ಮಠಾಧೀಶರು ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದಾರೆ. ಪಂಚಮಸಾಲಿ ಲಿಂಗಾಯತ ಮಠದ ವಚನಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರನ್ನು ಒಳಗೊಂಡು ಎಂಟು ಸ್ವಾಮೀಜಿಗಳ ಸಂತ ನಿಯೋಗವು ದೆಹಲಿಗೆ ತೆರಳಿದೆ. ಅಲ್ಲಿ ಅವರು ರಾಷ್ಟ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಹಿಂದೂಗಳು, ಹಿಂದೂ ಧಾರ್ಮಿಕ ಕೇಂದ್ರಗಳು ಹಾಗೂ ಹಿಂದೂ ಮಠಾಧೀಶರ ಮೇಲೆ ಪದೇ ಪದೇ ದಾಳಿ ಆಗುತ್ತಿದೆ. ಆರಾರು ತಿಂಗಳ ಅಂತರದಲ್ಲಿ ಷಡ್ಯಂತ್ರ ರಚಿಸಿ ಅವಹೇಳನ ಕೃತ್ಯಗಳನ್ನು ನಡೆಸಲಾಗುತ್ತಿದೆ. ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದೆ. ಹೀಗಾಗಿ ಸೂಕ್ತ ತನಿಖೆ ಆಗಬೇಕು ಎಂದು ಸ್ವಾಮೀಜಿಗಳು ಆಗ್ರಹಿಸಿದ್ದಾರೆ.

ಸ್ವಾಮೀಜಿಗಳ ಮನವಿಯನ್ನು ಓದಿ, ಕೇಳಿ ಸಂತರ ನಿಯೋಗಕ್ಕೆ ಭರವಸೆ ನೀಡಿರುವ ಅಮಿತ್ ಶಾ ” ಧರ್ಮಸ್ಥಳದ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ನಾನೇ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಧರ್ಮಸ್ಥಳ ಪ್ರಕರಣದ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಸುತ್ತೇವೆ. ಅದರ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ. ಈ ಮೂಲಕ ಇಂದಲ್ಲ ನಾಳೆ ಕೇಂದ್ರ ಸರಕಾರ ಧರ್ಮಸ್ಥಳ ಪ್ರಕರಣದಲ್ಲಿ ಏನಾದರೂ ಕ್ರಮ ಕೈಗೊಳ್ಳುವ ಸುಳಿವು ನೀಡಿದೆ. ಈಗಾಗಲೇ ಇಡಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಅಗತ್ಯವಾಗಿ ಬೇಕಾಗಿರುವ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ. ಇತ್ತ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಈ ಪ್ರಕರಣ ನೀಡಲು ಭಾಜಪಾ ಮುಖಂಡರು ಒತ್ತಾಯಿಸುತ್ತಿದ್ದಾರೆ. ಇನ್ನೊಂದು ಕಡೆಯಿಂದ ಸಂತರು ಹೋಗಿ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸುವ ಮೂಲಕ ಇದು ಇನ್ನೊಂದು ಹಂತವನ್ನು ತಲುಪಿದಂತಾಗಿದೆ.

0
Shares
  • Share On Facebook
  • Tweet It




Trending Now
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
Tulunadu News September 6, 2025
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
Tulunadu News September 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ
    • ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ
    • ಜಿಎಸ್ ಟಿ ಮಾಸ್ಟರ್ ಸ್ಟೋಕ್: ಬಿಹಾರ ಚುನಾವಣೆಯಲ್ಲಿ ಎನ್ ಡಿಎಗೆ ಲಾಭ ಆಗಲಿದೆಯಾ?
    • ಕ್ಯಾಬಿನೆಟಿನಲ್ಲಿ ಚರ್ಚಿಸಿ ಧರ್ಮಸ್ಥಳ ಕೇಸ್ ನಿರ್ಧಾರ: ಸಂತ ನಿಯೋಗಕ್ಕೆ ಅಮಿತ್ ಶಾ ಭರವಸೆ!
    • ಬೆಂಗಳೂರು ಕಾಲ್ತುಳಿತ : 3 ತಿಂಗಳ ಬಳಿಕ ಕೊಹ್ಲಿ ಸಂತಾಪ!
    • 39 ನೇ ವಯಸ್ಸಿನಲ್ಲಿ ವಿಶ್ವದ ನಂ 1 ಆಲ್ ರೌಂಡರ್ ಆಗಿ ಜಿಂಬಾಬ್ವೆಯ ಸಿಕಂದರ್ ರಾಝಾ!
  • Popular Posts

    • 1
      ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • 2
      ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • 3
      ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • 4
      ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • 5
      ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ

  • Privacy Policy
  • Contact
© Tulunadu Infomedia.

Press enter/return to begin your search