• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ

Tulunadu News Posted On September 5, 2025
0


0
Shares
  • Share On Facebook
  • Tweet It

ಕರ್ನಾಟಕ ಒಂದಲ್ಲ ಒಂದು ಕಾರಣಕ್ಕೆ ಆಗಾಗ ದೇಶದಲ್ಲಿ ವಿಶಿಷ್ಟ ರೀತಿಯಲ್ಲಿ ಸುದ್ದಿ ಮಾಡುವುದು ನಿಮಗೆ ಗೊತ್ತಿದೆ. ಅದನ್ನು ಹೆಮ್ಮೆಯಿಂದ ಹೇಳಿಕೊಳ್ಳುವುದಾ ಅಥವಾ ಇರಿಸುಮುರಿಸಾಗಿ ಸ್ವೀಕರಿಸುವುದಾ ಎನ್ನುವುದೇ ಈಗ ಇರುವ ವಿಷಯ. ಈಗ ಅಂತಹುದೇ ಮತ್ತೊಂದು ಕಾರಣಕ್ಕೆ ಕರ್ನಾಟಕ ಸುದ್ದಿಯಾಗಿದೆ. ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ (ಎಡಿಆರ್) ವರದಿಯ ಪ್ರಕಾರ, ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶ್ರೀಮಂತ ಸಚಿವರಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಸಲ್ಲಿಸಿದ ಪ್ರಮಾಣಪತ್ರಗಳ ಆಧಾರದ ಮೇಲೆ ಈ ಪಟ್ಟಿಯನ್ನು ಮಾಡಲಾಗಿದೆ. ಅಲ್ಲದೇ, ಕರ್ನಾಟಕವು ನೂರು ಕೋಟಿಗಿಂತ ಹೆಚ್ಚು ಆಸ್ತಿ ಹೊಂದಿರುವ ಎಂಟು ಸಚಿವರನ್ನು ಹೊಂದಿದೆ ಎಂದು ವರದಿ ತಿಳಿಸಿದೆ.

ದೇಶದ 27 ವಿಧಾನಸಭೆಗಳು, 3 ಕೇಂದ್ರಾಡಳಿತ ಪ್ರದೇಶಗಳು‌ ಮತ್ತು ಕೇಂದ್ರದ 652 ಸಚಿವರ ಪೈಕಿ 643 ಸಚಿವರು ಚುನಾವಣಾ ಸಂದರ್ಭದಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರಗಳನ್ನು ವಿಶ್ಲೇಷಿಸಲಾಗಿದೆ. ಅಷ್ಟೇ ಅಲ್ಲದೆ ಕರ್ನಾಟಕವು ನೂರು ಕೋಟಿಗಿಂತ ಹೆಚ್ಚು ಆಸ್ತಿ ಇರುವ ಎಂಟು ಸಚಿವರನ್ನು ಹೊಂದಿದೆ. ಆಂಧ್ರ ಪ್ರದೇಶವು ನಂತರದ ಸ್ಥಾನದಲ್ಲಿದೆ.

ಆಂಧ್ರ ಪ್ರದೇಶದಲ್ಲಿ ಆರು ಮತ್ತು ಮಹಾರಾಷ್ಟ್ರದಲ್ಲಿ ನಾಲ್ಕು ಮಂದಿ ಕೋಟಿಗಿಂತ ಹೆಚ್ಚು ಆಸ್ತಿ ಇರುವ ಸಚಿವರು ಇದ್ದಾರೆ. ಅರುಣಾಚಲ ಪ್ರದೇಶ, ದೆಹಲಿ, ಹರಿಯಾಣ ಮತ್ತು ತೆಲಂಗಾಣದಲ್ಲಿ ತಲಾ ಇಬ್ಬರು, ಗುಜರಾತ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ಪಂಜಾಬ್‌ನಲ್ಲಿ ತಲಾ ಒಬ್ಬ ಕೋಟ್ಯಾಧಿಪತಿ ಮಂತ್ರಿಯಿದ್ದಾರೆ. ಕೇಂದ್ರ ಸರ್ಕಾರದಲ್ಲಿ, 72 ಕೇಂದ್ರ ಮಂತ್ರಿಗಳಲ್ಲಿ ಆರು (8%) ಮಂದಿ ಕೋಟ್ಯಾಧಿಪತಿಗಳಾಗಿದ್ದಾರೆ ಎಂದು ವರದಿ ಹೇಳಿದೆ.

ದೇಶದ ಅತ್ಯಂತ ಶ್ರೀಮಂತ ಮಂತ್ರಿ ಎಂದರೆ ಟಿಡಿಪಿ ಪಕ್ಷದ ಡಾ. ಚಂದ್ರಶೇಖರ್ ಪೆಮ್ಮಸಾನಿ. ಅವರು ಆಂಧ್ರ ಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದ ಸದಸ್ಯರು. ಅವರು 5,705 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.

ಚಂದ್ರಶೇಖರ ಪೆಮ್ಮಸಾನಿ (ಕೇಂದ್ರ ಸಚಿವ-ಟಿಡಿಪಿ) – 5,705 ಕೋಟಿ ರೂ
ಡಿಕೆ ಶಿವಕುಮಾರ್ (ಕಾಂಗ್ರೆಸ್)- 1,413 ಕೋಟಿ. ರೂ
ಚಂದ್ರಬಾಬು ನಾಯ್ಡು (ಟಿಡಿಪಿ)- 971 ಕೋಟಿ.ರೂ
ನಾರಾಯಣ ಪೊಂಗೂರು (ಟಿಡಿಪಿ)- 824 ಕೋಟಿ ರೂ
ಸುರೇಶ್ ಬಿ.ಎಸ್( ಕಾಂಗ್ರೆಸ್)- 648 ಕೋಟಿ ರೂ

ಪಕ್ಷಗಳ ಪ್ರಕಾರ ನೋಡಿದರೆ, ಬಿಜೆಪಿಯಲ್ಲಿ ಅತಿ ಹೆಚ್ಚು ಕೋಟ್ಯಾಧಿಪತಿ ಮಂತ್ರಿಗಳು ಇದ್ದಾರೆ. ಅವರಲ್ಲಿ 14 ಮಂದಿ ಕೋಟ್ಯಾಧಿಪತಿಗಳಾಗಿದ್ದಾರೆ. ಆದರೆ ಇದು ಅವರ ಒಟ್ಟು ಮಂತ್ರಿಗಳಲ್ಲಿ ಕೇವಲ 4% ಮಾತ್ರ. ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ. ಅವರ 61 ಮಂತ್ರಿಗಳಲ್ಲಿ 11 (18%) ಮಂದಿ ಕೋಟ್ಯಾಧಿಪತಿಗಳಾಗಿದ್ದಾರೆ. ಟಿಡಿಪಿ ಪಕ್ಷದ 23 ಮಂತ್ರಿಗಳಲ್ಲಿ 6 ಮಂದಿ (26%) ಕೋಟ್ಯಾಧಿಪತಿಗಳಾಗಿದ್ದಾರೆ. ಆಮ್ ಆದ್ಮಿ ಪಾರ್ಟಿ, ಜನಸೇನಾ ಪಾರ್ಟಿ, ಜೆಡಿ(ಎಸ್), ಎನ್‌ಸಿಪಿ ಮತ್ತು ಶಿವಸೇನಾ ಪಕ್ಷಗಳಲ್ಲೂ ಕೋಟ್ಯಾಧಿಪತಿ ಮಂತ್ರಿಗಳಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search