• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ

Tulunadu News Posted On September 11, 2025
0


0
Shares
  • Share On Facebook
  • Tweet It

ರಾಷ್ಟ್ರೀಯ ಹೆದ್ದಾರಿ 66 ಬೃಹತ್ ಹೊಂಡಕ್ಕೆ ಬಿದ್ದು ಸ್ಕೂಟರ್ ಸವಾರೆ ಮೃತಪಟ್ಟಿದ್ದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನೇರ ಹೊಣೆ. ಘಟನೆಯ ಬಗ್ಗೆ ಸಂಬಂಧಿಸಿದ ಜನಪ್ರತಿನಿಧಿಗಳು ಯಾಕೆ ಮೂಕರಾಗಿದ್ದಾರೆ? ಹೆದ್ದಾರಿ ಗುಂಡಿಗಳಿಗೆ ಇನ್ನೆಷ್ಟು ಜೀವ ಬಲಿಯಾಗಬೇಕು? ತಕ್ಷಣ ಹೆದ್ದಾರಿ ಶಾಶ್ವತ ರಿಪೇರಿ ಮಾಡಿ. ಇಲ್ಲದಿದ್ದರೆ ಬೃಹತ್ ಹೋರಾಟ ನಡೆಸಲಾಗುವುದು. ಕಾನೂನು ಹೋರಾಟಕ್ಕೂ ತಯಾರಾಗಿದ್ದೇವೆ ಎಂದು ಮಾಜಿ ಮೇಯರ್ ಶಶಿಧರ್ ಹೆಗ್ಡೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಗಳೊಂದಿಗೆ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದೆರಡು ವರ್ಷಗಳಿಂದ ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗಳಲ್ಲಿ ನಿರಂತರವಾಗಿ ಹೆದ್ದಾರಿ ದುರವಸ್ಥೆ ಕುರಿತು ಗಮನ ಸೆಳೆದು ಪರಿಹಾರ ಮಾರ್ಗೋಪಾಯಗಳನ್ನು ಸೂಚಿಸುತ್ತಲೇ ಬಂದಿದ್ದೇವೆ. ಆದರೆ ಪರಿಹಾರ ಕೆಲಸ ಆಗಿಲ್ಲ. ಈ ಕಾರಣದಿಂದಲೇ ಅಪಘಾತಕ್ಕೀಡಾಗಿ ಅನೇಕ ಮಂದಿ ಶಾಶ್ವತ ಅಂಗವಿಕಲರಾಗಿದ್ದಾರೆ. ಇನ್ನು ಕೆಲವು ಮಂದಿ ಸಾವಿಗೀಡಾಗಿದ್ದಾರೆ. ಸಂಬಂಧಿಸಿದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಹೆದ್ದಾರಿಗಾಗಿ ಕೋಟ್ಯಾಂತರ ಟೋಲ್ ಸಂಗ್ರಹ ಮಾಡುವಾಗ, ಆ ಮೊತ್ತದ ಅರ್ಧಾಂಶ ವ್ಯಯಿಸಿ ರಸ್ತೆ ನಿರ್ವಹಣೆ ಮಾಡಿದ್ದರೂ ಈ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ. ಟೋಲ್ ಸಂಗ್ರಹಿಸುವ ಹೆದ್ದಾರಿಯ ಅವ್ಯವಸ್ಥೆಗೆ ಸಂಬಂಧಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳು ಹೊಣೆ ಹೊರಲೇಬೇಕು ಎಂದು ಶಶಿಧರ್ ಹೆಗ್ಡೆ ಹೇಳಿದರು.

ಇನ್ನು ಮಾಜಿ ಕಾರ್ಪೋರೇಟರ್ ಎ.ಸಿ.ವಿನಯರಾಜ್ ಮಾತನಾಡಿ, ಬಿ.ಸಿ.ರೋಡ್ – ಸುರತ್ಕಲ್ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ವಾರ್ಷಿಕ 15 ರಿಂದ 20 ಕೋಟಿ ರೂ ಟೋಲ್ ಸಂಗ್ರಹ ನಡೆಯುತ್ತಿದೆ. 2008 ರಿಂದಲೂ ಟೋಲ್ ಸಂಗ್ರಹ ನಡೆಯುತ್ತದೆ. ಹೆದ್ದಾರಿ ನಿರ್ವಹಣೆಯನ್ನೇ ಮಾಡದೇ, ಹೊಂಡ ಗುಂಡಿಗಳಿಂದ ಕೂಡಿರುವಾಗ, ಈಗಾಗಲೇ ಸಂಗ್ರಹವಾದ ಟೋಲ್ ಹಣವನ್ನು ಎಲ್ಲಿಗೆ ಚೆಲ್ಲಿದ್ದೀರಿ? ಸಂಬಂಧಿಸಿದ ಅಧಿಕಾರಿಗಳ ಕೆಲಸ ಮಾಡುವಂತೆ ಮೇಲ್ವಿಚಾರಣೆ ಮಾಡಬೇಕಿದ್ದ ಸಂಸದರು, ಶಾಸಕರು ಎಲ್ಲಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಗಳಾದ ಅಬ್ದುಲ್ ರವೂಫ್, ಭಾಸ್ಕರ್ ಕೆ, ಲ್ಯಾನ್ಸಿಲಾಟ್ ಪಿಂಟೋ, ಅನಿಲ್ ಕುಮಾರ್, ಸಂಶುದ್ದೀನ್ ಬಂದರ್, ಸಂಶುದ್ದೀನ್ ಕುದ್ರೋಳಿ, ಅಶೋಕ್ ಡಿ.ಕೆ, ಎನ್ ಎಸ್ ಯುಐ ಅಧ್ಯಕ್ಷ ಸುಹಾನ್ ಆಳ್ವ ಇದ್ದರು.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search