• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

Tulunadu News Posted On September 11, 2025
0


0
Shares
  • Share On Facebook
  • Tweet It

ಬೆಂಗಳೂರಿನ ಬಾಲಕಿಯೊಬ್ಬಳು ಹೈದ್ರಾಬಾದಿನಲ್ಲಿರುವ ಅಕ್ಕನ ಮನೆಗೆ ಹೋಗಿದ್ದಳು. ಅಲ್ಲಿಂದ ಹಿಂತಿರುಗುವಾಗ ಆಕೆಯ ಅಕ್ಕ ಖಾಸಗಿ ಬಸ್ಸೊಂದರಲ್ಲಿ ತಂಗಿಯನ್ನು ಕೂರಿಸಿ ತಾಯಿಗೆ ಫೋನ್ ಮಾಡಿ ಬಸ್ಸಿನಲ್ಲಿ ಕಳುಹಿಸುತ್ತಿರುವ ವಿಷಯ ಹೇಳಿದ್ದಾಳೆ. ಮೊಬೈಲ್ ಚಾರ್ಜ್ ಮುಗಿದ ಕಾರಣ ಬಸ್ಸಿನ ಚಾಲಕನ ಬಳಿ ದಾರಿಯಲ್ಲಿ ಮೊಬೈಲ್ ಚಾರ್ಜ್ ಹಾಕಲು ಬಾಲಕಿ ಹೇಳಿದ್ದಾಳೆ. ಕೆಲವು ನಿಮಿಷಗಳ ಬಳಿಕ ಹುಡುಗಿ ಮೊಬೈಲ್ ಕೇಳಿದ್ದಾಳೆ. ಆಗ ಸಹ ಚಾಲಕ ಮುತ್ತು ಕೊಟ್ಟರೆ ಮಾತ್ರ ಮೊಬೈಲ್ ನೀಡುವುದಾಗಿ ಹೇಳಿದ್ದಾನೆ. ಅಷ್ಟೇ ಅಲ್ಲದೇ ಹುಡುಗಿ ಮಲಗಿದ್ದಾಗ ಆಕೆಯ ಸೀಟ್ ಬಳಿ ಬಂದು ಲೈಂಗಿಕವಾಗಿ ಕಾಡಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದರೂ ರಾತ್ರಿ ಪದೇ ಪದೇ ಬಂದು ಲೈಂಗಿಕ ಕಿರುಕುಳ ನೀಡಿದ್ದಾನೆ. ಈತನ ಕಿರುಕುಳ ತಾಳಲಾರದೇ ಬಾಲಕಿ ಕರೆ ಮಾಡಿ ತನ್ನ ತಾಯಿಗೆ ನಡೆದ ಘಟನೆಯನ್ನು ವಿವರಿಸಿದ್ದಾಳೆ.
ಗುರುವಾರ ಬೆಳಿಗ್ಗೆ ಬಸ್ಸು ಬೆಂಗಳೂರಿನ ಬಸವೇಶ್ವರ ನಗರಕ್ಕೆ ಬರುತ್ತಿದ್ದಂತೆ ಸಹ ಚಾಲಕ ಆರೀಫ್ ನನ್ನು ಕೆಳಗೆ ಇಳಿಸಿ ತಾಯಿ ಮತ್ತು ಆಕೆಯ ಅಣ್ಣ ಪ್ರಶ್ನಿಸಿದ್ದಾರೆ.
ಆಗ ಆರೀಫ್ ಕೈ ಮುಗಿದು ತಪ್ಪಾಗಿದೆ ಎಂದು ಅವಲತ್ತುಕೊಂಡಿದ್ದಾನೆ. ನಂತರ ಆತನ ಬಟ್ಟೆಯನ್ನು ಬಿಚ್ಚಿ ಚೆನ್ನಾಗಿ ಹೊಡೆದಿದ್ದಾರೆ. ಆತ ಧರಿಸಿದ ಎಲ್ಲಾ ಬಟ್ಟೆ ತೆಗೆದು ಬೆತ್ತಲೆಗೊಳಿಸಲು ಮುಂದಾದಾಗ ಪೊಲೀಸರು ಸ್ಥಳಕ್ಕೆ ಆಗಮಿಸಿ ತಾಯಿಯನ್ನು ತಡೆದು ಆತನನ್ನು ವಶಕ್ಕೆ ಪಡೆದಿದ್ದಾರೆ.


ಮಾಧ್ಯಮಗಳ ಜೊತೆ ಮಾತನಾಡಿದ ಬಾಲಕಿಯ ತಾಯಿ, ಹೈದ್ರಾಬಾದಿನಲ್ಲಿರುವ ನನ್ನ ಮಗಳ ಮನೆಗೆ ಇವಳು ಹೋಗಿದ್ದಳು. ರಾತ್ರಿ ಮಗಳು ಫೋನ್ ಮಾಡಿ ತಂಗಿಯನ್ನು ಬಸ್ಸಿನಲ್ಲಿ ಹತ್ತಿಸಿದ್ದೇನೆ ಎಂದು ಹೇಳಿದ್ದಳು. ಆದರೆ ಆತ ಮಗಳಿಗೆ ಬಸ್ಸಿನಲ್ಲಿ ಕೊಡಬಾರದ ಕಿರುಕುಳ ನೀಡಿದ್ದಾನೆ. ಅದನ್ನು ಇಲ್ಲಿ ಹೇಳಲು ಅಸಹ್ಯವಾಗುತ್ತಿದೆ. ಪೊಲೀಸರು ಏನು ಕ್ರಮ ಕೈಗೊಳ್ಳುತ್ತಾರೋ ಗೊತ್ತಿಲ್ಲ. ನಾನು ಮಾತ್ರ ಈತನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಹೀಗೆ ಯಾವುದೋ ಚಾಲಕರು ಮಾಡುವ ದುಷ್ಟ ಕೃತ್ಯಗಳಿಂದ ಎಲ್ಲಾ ಚಾಲಕರ ಮೇಲೆ ಸಂಶಯದ ದೃಷ್ಟಿ ಅಥವಾ ರಾತ್ರಿ ಹೊತ್ತಿನಲ್ಲಿ ಹೆಣ್ಣುಮಗಳನ್ನು ಒಂಟಿಯಾಗಿ ಕಳುಹಿಸಲು ಹೆದರಿಕೆ ಆಗುವುದು ಸಹಜ. ಬೇರೆ ಪ್ರಯಾಣಿಕರು ಇರುತ್ತಾರೆ ಆದರೆ ನಿಜ. ಆದರೆ ಇಂತಹ ಚಾಲಕ, ನಿರ್ವಾಹಕರಿಂದ ಹೆಣ್ಣುಮಕ್ಕಳಿಗೆ ತೊಂದರೆ ಆದರೆ ಎನ್ನುವ ಆತಂಕ ಇದ್ದೇ ಇರುತ್ತದೆ. ಆದ್ದರಿಂದ ಇಂತಹ ದುರುಳರಿಗೆ ಯೋಗ್ಯ ಶಿಕ್ಷೆ ಆದರೆ ಆಗ ಸಮಾಜದಲ್ಲಿರುವ ಇಂತಹ ನೀಚ ಮನಸ್ಸಿನವರಿಗೆ ಒಂದು ಎಚ್ಚರಿಕೆಯ ಸಂದೇಶ ನೀಡಿದಂತೆ ಆಗುತ್ತದೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search