• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂಗಳ ಶಕ್ತಿ ದಮನ ಮಾಡುತ್ತಿರುವ ಸರಕಾರ:ಕಟೀಲ್

TNN Correspondent Posted On September 7, 2017


  • Share On Facebook
  • Tweet It

ಮಂಗಳೂರು: ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಮತ್ತು ಮತಾಂಧ ಸಂಘಟನೆಗಳಿಗೆ ಬೆಂಬಲ ನೀಡಿದ್ದರಿಂದ ರಾಜ್ಯದಲ್ಲಿ ಹಿಂದೂ ಸಂಘಟನೆಗಳು 12 ಕಾರ್ಯಕರ್ತರ ಹತ್ಯೆಯಾಗಿದೆ. ಆದರೂ ಇದುವರೆಗೆ ಒಬ್ಬರೇ ಒಬ್ಬ ಆರೋಪಿಗಳನ್ನು ಬಂಧಿಸಿಲ್ಲ. ಅಲ್ಲದೇ ಮತಾಂಧ ಸಂಘಟನೆಗಳಾದ, ಕೊಲೆಯಲ್ಲಿ ಕೆಎಫ್‌ಡಿ, ಪಿಎಫ್‌ಐ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದು ಬಂದರೂ ರಾಜ್ಯ ಸರಕಾರ ಕ್ರಮ ಕೈಗೊಂಡಿಲ್ಲ ಎಂದು ಸಂಸದ ನಳೀನ್ ಕುಮಾರ ಕಟೀಲ್ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರಿನ ಗಾಂಧಿ ವೃತ್ತದಲ್ಲಿ ನಡೆದ ಮಂಗಳೂರು ಚಲೋ ಸಮಾವೇಶದಲ್ಲಿ ಮಾತನಾಡಿ, ರಾಜ್ಯದಲ್ಲಿ 12 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಹತ್ಯೆಯ ಹಿಂದೆ ಮತಾಂಧ ಸಂಘಟನೆಗಳ ಕೈವಾಡ ಇರುವುದು ತನಿಖೆಯಿಂದ ತಿಳಿದು ಬಂದಿದೆ. ಆದರೂ ಸರಕಾರ ಮತಾಂಧ ಸಂಘಟನೆಗಳನ್ನು ನಿಷೇಧಿಸಿಲ್ಲ. ಬದಲಾಗಿ ಹಿಂದೂ ಹೋರಾಟಗಾರರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿದರು.
ಕರಾವಳಿ ಜಿಲ್ಲೆಯಲ್ಲಿ ಗೋ ಹಂತಕರು ರಾಜಾರೋಷವಾಗಿ ತಿರುಗುತ್ತಿದ್ದಾರೆ. ಅಲ್ಲಲ್ಲಿ ಪಿಎಫ್‌ಐ ಹಾಗೂ ಮತಾಂಧ ಸಂಘಟನೆಗಳು ಸಮಾಜ ದ್ರೋಹಿ ಕಾರ್ಯದಲ್ಲಿ ನಿರತವಾಗಿದ್ದರೂ ಹಿಂದೂಗಳ ವಿರುದ್ಧ ಸರಕಾರ ಸುಳ್ಳು ಪ್ರಕರಣ ದಾಖಲಿಸುತ್ತಿಿದೆ. ಆದ್ದರಿಂದ ಕರಾವಳಿ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಕೂಡಲೇ ಮತಾಂಧ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಸಂಸದ, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಪ್ರತಾಪ್ ಸಿಂಹ ಮಾತನಾಡಿ, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ಸಿದ್ದರಾಮಯ್ಯ ಸರಕಾರ ಕ್ರಮ ಕೈಗೊಳ್ಳದೇ ಹಿಂದೂಗಳನ್ನೇ ದಮನ ಮಾಡುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಹಿಂದೂಗಳ ಹತ್ಯೆಯಾದರೂ ಸರಕಾರ, ಪಿಎಫ್‌ಐ ಸೇರಿ ಮತಾಂಧ ಸಂಘಟನೆಗಳ ಮೇಲಿನ ಪ್ರಕರಣ ಹಿಂಪಡೆದು ಹಿಂಸಾ ಕಾರ್ಯಗಳಿಗೆ ಪ್ರೇರಣೆ ನೀಡುತ್ತಿದೆ. ಕೆಎಫ್‌ಡಿ, ಪಿಎಫ್‌ಐ ನಿಷೇಧಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷ ಮುಖಂಡರಾದ ಜಗದೀಶ ಶೆಟ್ಟರ್, ಕೆ.ಎಸ್.ಈಶ್ವರಪ್ಪ , ಪ್ರಮುಖರಾದ ಶೋಭಾ ಕರಂದ್ಲಾಜೆ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಸಿ.ಟಿ.ರವಿ, ಸುನಿಲ್ ಕುಮಾರ್ ಇದ್ದರು.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search