• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!

Tulunadu News Posted On September 16, 2025
0


0
Shares
  • Share On Facebook
  • Tweet It

ನಾಯಿಗಳಿಗೂ ಜೈಲು ಶಿಕ್ಷೆನಾ? ಇಂತಹದೊಂದು ವಿನೂತನ ಐಡಿಯಾ ಉತ್ತರ ಪ್ರದೇಶದಲ್ಲಿ ಜಾರಿಗೆ ಬರಲಿದೆ. ಯುಪಿಯ ಪ್ರಯಾಗರಾಜ್ ನಲ್ಲಿ ಬೀದಿನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅವುಗಳು ಜನರನ್ನು ಕಚ್ಚುವ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಆದ್ದರಿಂದ ನಾಯಿಗಳಿಗೆ ಶಿಕ್ಷೆ ನೀಡಬೇಕು ಎಂದು ರಾಜ್ಯ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಮೃತ್ ಅಭಿಜಿತ್ ಅವರು ಹೊರಡಿಸಿದ ಆದೇಶದ ಪ್ರಕಾರ ಬೀದಿ ನಾಯಿ ಎರಡು ಬಾರಿ ಜನರನ್ನು ಕಚ್ಚಿದರೆ, ಅದಕ್ಕೆ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ.

ಈ ನಿಯಮವೂ ಹಿಂಸಾತ್ಮಕವಾಗಿ ವರ್ತಿಸಿ ಜನರ ಪ್ರಾಣದ ಮೇಲೆ ಆಟವಾಡುವ ಪ್ರಾಣಿಗಳಿಗೆ ಅನ್ವಯಿಸುತ್ತದೆ. ಯೋಗಿ ಸರಕಾರದ ಈ ಆದೇಶವು ಬೀದಿನಾಯಿಗಳ ಸಮಸ್ಯೆಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಯಾವುದೇ ಒಂದು ನಾಯಿ ಮೊದಲ ಬಾರಿಗೆ ಯಾರನ್ನಾದರೂ ಕಚ್ಚಿದರೆ ಆ ನಾಯಿಗೆ 10 ದಿನಗಳ ಶಿಕ್ಷೆ ವಿಧಿಸಲಾಗುತ್ತದೆ. ಶಿಕ್ಷೆ ಯಾವ ಸ್ವರೂಪದಲ್ಲಿ ಇರುತ್ತದೆ ಎಂದರೆ ಆ ನಾಯಿಯನ್ನು ಪ್ರಾಣಿಗಳ ಜನನ ನಿಯಂತ್ರಣ ಕೇಂದ್ರ (ಎಬಿಸಿ ಕೇಂದ್ರ) ಯಲ್ಲಿ ಇರಿಸಲಾಗುತ್ತದೆ. ಇಲ್ಲಿ ನಾಯಿಗೆ ಚಿಕಿತ್ಸೆ ನೀಡಿ, ವೀಕ್ಷಣೆಯಡಿ ಇರಿಸಲಾಗುತ್ತದೆ. ಎಬಿಸಿ ಕೇಂದ್ರದಲ್ಲಿ ಆಂಟಿ-ರೇಬಿಸ್ ಲಸಿಕೆಗಳನ್ನು ನೀಡಿ ನಾಯಿಯ ಆರೋಗ್ಯ ಮತ್ತು ನಡವಳಿಕೆಯನ್ನು ಪರಿಶೀಲಿಸಲಾಗುತ್ತದೆ. 10 ದಿನಗಳ ನಂತರ ಬಿಡುಗಡೆಯಾಗುವ ಮೊದಲು ನಾಯಿಯ ದೇಹದಲ್ಲಿ ಮೈಕ್ರೋಚಿಪ್ ಅಳವಡಿಸಲಾಗುತ್ತದೆ. ಈ ಚಿಪ್ ಮೂಲಕ ನಾಯಿಯ ನಡವಳಿಕೆಯನ್ನು ಮೇಲ್ವಿಚಾರಣೆ ಮಾಡಬಹುದು. ನಾಯಿಯ ಸಂಪೂರ್ಣ ವಿವರಗಳನ್ನು ಫಾರ್ಮ್‌ನಲ್ಲಿ ನೋಂದಾಯಿಸಿ, ವೀಡಿಯೊ ರೆಕಾರ್ಡಿಂಗ್ ಮೂಲಕ ಚಟುವಟಿಕೆಗಳನ್ನು ದಾಖಲಿಸಲಾಗುತ್ತದೆ. ಒಂದು ವೇಳೆ ಆ ನಾಯಿ ಎರಡನೇ ಬಾರಿಗೆ ಕಚ್ಚಿದರೆ ಜೀವಾವಧಿ ಶಿಕ್ಷೆಯಾಗುತ್ತದೆ. ಈಗಾಗಲೇ ಮೊದಲನೇ ಬಾರಿಗೆ ಕಚ್ಚಿ ಎಬಿಸಿ ಕೇಂದ್ರಕ್ಕೆ ಹೋಗಿ ಬಂದ ನಾಯಿ ಮತ್ತೊಮ್ಮೆ ಯಾರನ್ನಾದರೂ ಕಚ್ಚಿದರೆ, ಮೂರು ಸದಸ್ಯರ ತಂಡವು ತನಿಖೆ ನಡೆಸುತ್ತದೆ. 

ಈತಂಡದಲ್ಲಿ ಜಾನುವಾರು ಅಧಿಕಾರಿ, ಸ್ಥಳೀಯ ಸಂಸ್ಥೆಯ ಪ್ರತಿನಿಧಿ ಮತ್ತು ಸೊಸೈಟಿ ಫಾರ್ ಪ್ರಿವೆನ್ಷನ್ ಆಫ್ ಕ್ರೂಯೆಲ್ಟಿ ಟು ಅನಿಮಲ್ಸ್ (ಎಸ್‌ಪಿಸಿಎ) ಸದಸ್ಯರು ಇರುತ್ತಾರೆ. ಈ ತಂಡವು ನಾಯಿ ದಾಳಿ ಮಾಡಲು ಪ್ರೇರೇಪಿಸಲ್ಪಟ್ಟಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುತ್ತದೆ. ಯಾವುದೇ ಪುರಾವೆಗಳಿಲ್ಲದಿದ್ದರೆ, ನಾಯಿಯನ್ನು ಜೀವಾವಧಿ ಎಬಿಸಿ ಕೇಂದ್ರದಲ್ಲಿ ಇರಿಸಲಾಗುತ್ತದೆ. ಇದು ನಾಯಿಗೆ ಜೀವಮಾನ ಶಿಕ್ಷೆಯಂತಿದೆ. ಈ ಶಿಕ್ಷೆಯಿಂದ ಬಿಡುಗಡೆಯಾಗಲು, ಯಾರಾದರೂ ಅಧಿಕೃತವಾಗಿ ದತ್ತು ಪಡೆದಾಗ ಮಾತ್ರ ಸಾಧ್ಯ.

ಈ ನಿಯಮವು ದೇಶದ ಇತರ ರಾಜ್ಯಗಳಿಗೆ ಮಾದರಿಯಾಗಬಹುದು. ಉತ್ತರ ಪ್ರದೇಶದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚು ಇರುವುದರಿಂದ ಈ ಆದೇಶವು ಮಹತ್ವದ್ದು. ದೇಶದಲ್ಲಿ 1.5 ಕೋಟಿ ಬೀದಿ ನಾಯಿಗಳಿದ್ದು, ಅವುಗಳಿಂದ ರೇಬೀಸ್ ಮತ್ತು ಕಡಿತ ಪ್ರಕರಣಗಳು ಹೆಚ್ಚಾಗಿವೆ. ಸುಪ್ರೀಂ ಕೋರ್ಟ್ ಕೂಡ ಈ ಸಮಸ್ಯೆಯ ಬಗ್ಗೆ ಚಿಂತೆ ವ್ಯಕ್ತಪಡಿಸಿದ್ದು, ಡೆಲ್ಹಿಯಲ್ಲಿ ನಾಯಿಗಳನ್ನು ಆಶ್ರಯಕ್ಕೆ ಕಳುಹಿಸುವಂತೆ ಆದೇಶ ನೀಡಿದೆ. ಯೋಗಿ ಸರ್ಕಾರದ ಈ ಕ್ರಮವು ಜನಸುರಕ್ಷತೆಯನ್ನು ಉನ್ನತೀಕರಿಸುತ್ತದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search