• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬಂಧಿಸಲು ಸಂಚು ಹೂಡಿದ್ದ ಸರಕಾರದ ಇರಾದೆ ಠುಸ್, ಗುರಿ ತಲುಪಿದ ಕೇಸರಿ ಪಡೆ

TNN Correspondent Posted On September 7, 2017
0


0
Shares
  • Share On Facebook
  • Tweet It

ಮಂಗಳೂರು: ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಬಿಜೆಪಿ ಯುವ ಮೋರ್ಚಾದ ಮಂಗಳೂರು ಚಲೋ ಬೈಕ್ ರ್ಯಾಲಿ ತಡೆಯಲು ಯಶಸ್ವಿಯಾಗಿದ್ದೇವೆ ಎಂದು ಬೀಗುತ್ತಿದ್ದ ರಾಜ್ಯ ಸರಕಾರಕ್ಕೆ ಬುಧವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಶಹಬ್ಬಾಸ್ ಹೇಳಿರುವ ಮಧ್ಯೆ ಗುರುವಾರ ಕೆಸರಿ ಪಡೆ ಸಿದ್ದರಾಮಯ್ಯ ಸರಕಾರಕ್ಕೆ ಸೆಡ್ಡು ಹೊಡೆದು, ಪೊಲೀಸ್ ಚಕ್ರವ್ಯೂಹ ಬೇಧಿಸಿ ಜ್ಯೋತಿ ವೃತ್ತದಲ್ಲಿ ಹಾಕಿದ್ದ ಬ್ಯಾರಿಕೇಡ್ ತೆಗೆದು ದಿಟ್ಟತನದಿಂದ ಹೆಜ್ಜೆ ಹಾಕುತ್ತಾ ಡಿ.ಸಿ.ಕಚೇರಿ ತಲುಪಿತು.

ಬುಡಮೇಲಾದ ಲೆಕ್ಕಾಚಾರ
ಒಂದೆಡೆ ಮಂಗಳೂರು ನಗರ ಪ್ರವೇಶಿಸುವ ಜಂಕ್ಷನ್‌ಗಳಾದ ಪಂಪುವೆಲ್, ನಂತೂರು, ಕೊಟ್ಟಾರ, ಹಂಪನಕಟ್ಟೆ , ಉಳ್ಳಾಲ, ಬಿ.ಸಿ ರೋಡ್ ಹೀಗೆ ಎಲ್ಲೆಡೆ ಬೆಳಗ್ಗೆಯಿಂದಲೇ ವಾಹನಗಳಲ್ಲಿ ಬರುವ ಕಾರ್ಯಕರ್ತರನ್ನು ಬಂಧಿಸಲಾಗುತ್ತಿತ್ತು. ಇನ್ನೇನಿದ್ದರೂ 500 ಕಾರ್ಯಕರ್ತರು ಜ್ಯೋತಿ ವೃತ್ತದಲ್ಲಿ ಸೇರಬಹುದು. ಅವರೆಲ್ಲರನ್ನು ಸುಲಭವಾಗಿ ಬಂಧಿಸಬಹುದು ಎಂದು ಪೊಲೀಸರು ಲೆಕ್ಕಾಚಾರ ಹಾಕಿದ್ದರು. ಆದರೆ ಒಂದೆಡೆ ಸಭೆ ಆರಂಭವಾದಂತೆ ಬ್ರಹತ್ ಪ್ರಮಾಣದಲ್ಲಿ ಕಾರ್ಯಕರ್ತರ ದಂಡು ಕೂಡಿತು. ಜ್ಯೋತಿ ವೃತ್ತದಲ್ಲಿ ಸಹಸ್ರಾರು ಕಾರ್ಯಕರ್ತ ಪಡೆ ಸೇರಿತು. ಸಹಸ್ರಾರು ಕಾರ್ಯಕರ್ತರನ್ನು ಬಂಧಿಸುವುದು ಪೋಲಿಸರಿಗೆ ಅಸಾಧ್ಯವಾಯಿತು. ಕೆಲವರನ್ನು ಜ್ಯೋತಿ ವ್ರತ್ತದಿಂದಲೇ ಬಂಧಿಸಲು ಸಾಧ್ಯವಾದರೂ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಪೋಲಿಸರು ಹಾಗೂ ಸಿ.ಆರ್.ಪಿ.ಎಫ್ ರಕ್ಷಣಾ ತುಕಡಿಯ ಸರ್ಪಗಾವಲು ದಾಟಿ ಮುನ್ನಡೆಯಿತು.

ಡಿ ಸಿ ಕಚೇರಿ ತಲುಪಿದ ಸಂಸದರ ಬೈಕ್
ಸಹಸ್ರಾರು ಕಾರ್ಯಕರ್ತರೂ ಕೂಡಿದ್ದ ರ್ಯಾಲಿಯಲ್ಲಿ ಜ್ಯೋತಿ ವೃತ್ತದಿಂದ ಕೆಲವು ಬೈಕ್ ಡಿ.ಸಿ. ಕಚೇರಿಯತ್ತ ಹೊರಟಿತು. ರಾಜ್ಯ ಬಿಜೆಪಿ ನಾಯಕರು ರ್ಯಾಲಿಗೆ ಚಾಲನೆ ನೀಡಿದರು. ಆದರೆ ಸ್ವಲ್ಪ ಮುಂದೆ ಸಾಗುವಾಗಲೇ ನೂರಾರು ಸಂಖ್ಯೆಯಲ್ಲಿದ್ದ ಪೋಲಿಸರು ಕೆಲವು ವಾಹನಗಳ ಬೀಗದ ಕೈ ತೆಗೆದು ಬೈಕ್ ತಡೆದರು. ಮಂಗಳೂರು ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ಬೈಕ್ ಡಿ.ಸಿ. ಕಚೇರಿ ತಲುಪಿಯೇ ಬಿಟ್ಟಿತು. ಇವರಿಗೆ ಇತರ ಬೈಕ್‌ಗಳಲ್ಲಿ ಪ್ರತಾಪ ಸಿಂಹ, ಸುನೀಲ್ ಕುಮಾರ್ ಕಾರ್ಕಳ ಹಾಗೂ ಇನ್ನಿತರ ಕಾರ್ಯಕರ್ತರು ಸಾಥ್ ನೀಡಿದರು.

ಒಂದೇ ವೇದಿಕೆಯಲ್ಲಿ ರಾಜ್ಯದ ಎಲ್ಲ ಬಿಜೆಪಿ ನಾಯಕರನ್ನು ಕಂಡ ಮಂಗಳೂರಿಗರು
ಹಲವು ವರ್ಷದ ಬಿಜೆಪಿ ನಾಯಕರಾದ ಯಡಿಯೂರಪ್ಪ, ಜಗದೀಶ ಶೆಟ್ಟರ್, ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಆರ್ ಅಶೋಕ್, ಕೆ.ಎಸ್.ಈಶ್ವರಪ್ಪ, ನಳಿನ್ ಕುಮಾರ್ ಕಟೀಲ್, ಪ್ರತಾಪ ಸಿಂಹ, ಸಿ.ಟಿ ರವಿ, ಸುನೀಲ್ ಕುಮಾರ್, ಅರವಿಂದ ಲಿಂಬಾವಳಿ, ಸುರೇಶ್ ಕುಮಾರ್ ಒಂದೇ ವೇದಿಕೆಯಲ್ಲಿ ಭಾಗವಹಿಸಿ, ಪ್ರತಿಭಟನೆಗೆ ಪ್ರೋತ್ಸಾಹಿಸಿದ್ದು ಬಿಜೆಪಿ ಪಾಳಯದಲ್ಲಿ ಹೊಸ ಹುಮ್ಮಸ್ಸು ಮೂಡಿಸಿತು.

ಆ್ಯಂಬುಲೆನ್ಸ್‌ ದಾರಿ ನೀಡಿ ಮಾನವಿಯತೆ ಮೆರೆದ ಕಾರ್ಯಕರ್ತರು
ಪ್ರತಿಭಟನೆಯ ಮಧ್ಯೆ ಮೂರು ಬಾರಿ ಆಂಬ್ಯುಲೆನ್‌ಸ್‌ ವಾಹನ ಬಂದಾಗ ನೂಕು ನುಗ್ಗಲಿನ ಮಧ್ಯೆಯೂ ಬಿಜೆಪಿ ಕಾರ್ಯಕರ್ತರು ದಾರಿಮಾಡಿಕೊಡುವ ಮೂಲಕ ಮಾನವೀಯತೆ ಮೆರೆದರು. ಇದಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಯಿತು.

ಗೃಹಮಂತ್ರಿಗಳಿಗೆ ಹಾಗೂ ರಾಜ್ಯಸರಕಾರಕ್ಕೆ ಬುಧವಾರ ಶಹಬ್ಬಾಸ್ ಗಿರಿ ಹೇಳಿದ್ದ ವೇಣುಗೋಪಾಲ್ ಗುರುವಾರ ರ್ಯಾಲಿ ತಡೆಯಲು ವಿಫಲರಾಗಿರುವ ಪೊಲೀಸ್ ಇಲಾಖೆ ಮತ್ತು ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಯೇ? ಮಂಗಳೂರಿನ ಇಬ್ಬರು ಉಸ್ತುವಾರಿ ಸಚಿವರು ಮಂಗಳೂರು ಚಲೋ ಕುರಿತು ರಾಜ್ಯ ಸರಕಾರಕ್ಕೆ ಯಾವ ರೀತಿಯ ಸಮಜಾಯಿಷಿ ನೀಡುತ್ತಾರೆ ಎಂಬುದು ಪ್ರಶ್ನಾರ್ಹ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search