• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!

Tulunadu News Posted On October 22, 2025
0


0
Shares
  • Share On Facebook
  • Tweet It

ನಿರೀಕ್ಷೆಯಂತೆ ಕೇಂದ್ರ ಸರಕಾರದ ಜಿಎಸ್ಟಿ ಇಳಿಕೆ ದೇಶದ ವ್ಯಾಪಾರ, ವ್ಯವಹಾರದ ಮೇಲೆ ಸಕರಾತ್ಮಕ ಪರಿಣಾಮ ಬೀರಿದೆ. ನವರಾತ್ರಿಯಿಂದ ದೀಪಾವಳಿ ತನಕದ ಹಬ್ಬದ ಸೀಸನ್ ನಲ್ಲಿ ದೇಶದಲ್ಲಿ ಸುಮಾರು 5.40 ಲಕ್ಷ ಕೋಟಿ ಮೌಲ್ಯದ ವಸ್ತುಗಳು ಮಾರಾಟವಾಗಿವೆ. ಅದೇ ರೀತಿಯಲ್ಲಿ 65 ಸಾವಿರ ಕೋಟಿ ಮೌಲ್ಯದ ಸೇವೆಗಳನ್ನು ಈ ಅವಧಿಯಲ್ಲಿ ಗ್ರಾಹಕರು ಪಡೆದಿದ್ದಾರೆ. ಇದರೊಂದಿಗೆ ಸರಕು ಹಾಗೂ ಸೇವೆ ಎರಡನ್ನೂ ಸೇರಿಸಿ 6.05 ಲಕ್ಷ ಕೋಟಿ ರೂ ವಹಿವಾಟು ನಡೆದಿದೆ.

ದೇಶದ ರಿಟೇಲ್ ಮತ್ತು ಟ್ರೇಡಿಂಗ್ ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದ ವಸ್ತುಗಳ ಮಾರಾಟ ಆಗಿರುವುದು ಇದೇ ಮೊದಲು. ಇದು ದೇಶದ ಆರ್ಥಿಕತೆಯ ದಿಕ್ಕನ್ನು ಬದಲಾಯಿಸಿದ “ಹಬ್ಬದ ಸೀಸನ್” ಎಂದು ಹೇಳಲಾಗುತ್ತಿದೆ. 2024 ರ ನವರಾತ್ರಿಯಿಂದ ದೀಪಾವಳಿಯವರೆಗೆ 4.24 ಲಕ್ಷ ಕೋಟಿ ರೂ ಮೌಲ್ಯದ ವಸ್ತುಗಳು ಮಾರಾಟ ಆಗಿತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಶೇ 25 ರಷ್ಟು ವಸ್ತುಗಳ ಮಾರಾಟ ದಾಖಲಾಗಿದೆ ಎಂದು ಅಖಿಲ ಭಾರತ ವರ್ತಕರ ಒಕ್ಕೂಟದ (ಸಿಎಐಟಿ) ಸಮೀಕ್ಷಾ ವಿಭಾಗವಾದ ಸಿಐಎಟಿ ರಿಸರ್ಚ್ ಮತ್ತು ಟ್ರೇಡ್ ಡೆವಲಪ್ ಮೆಂಟ್ ಸೊಸೈಟಿ ಹೇಳಿದೆ.
ಈ ಒಟ್ಟು ಮಾರಾಟದಲ್ಲಿ ರೀಟೇಲ್ ಕ್ಷೇತ್ರದ ಪಾಲು ಶೇ 85 ರಷ್ಟಿದೆ. ಈ ಮೂಲಕ ಗೃಹ ಬಳಕೆ ವಸ್ತುಗಳು, ಸಿದ್ಧ ಉಡುಪುಗಳು ಮತ್ತು ನಿತ್ಯ ಬಳಕೆ ವಸ್ತುಗಳ ಖರೀದಿಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿರುವುದು ಸ್ಪಷ್ಟ.

ಈ ದೀಪಾವಳಿ ಖರೀದಿ ಕುರಿತು ಸಿಎಐಟಿ ನಡೆಸಿದ ಸರ್ವೆಯಲ್ಲಿ ಪಾಲ್ಗೊಂಡ ಶೇ 72 ರಷ್ಟು ಮಾರಾಟಗಾರರು ಖರೀದಿ ಭರಾಟೆ ಜೋರಾಗಲು ಜಿಎಸ್ ಟಿ ಕಡಿತವೇ ಮೂಲ ಕಾರಣ ಎಂದು ಹೇಳಿಕೊಂಡಿದ್ದಾರೆ. ಈ ಬಾರಿಯ ಹಬ್ಬದ ಸೀಸನ್ ನಲ್ಲಿ ಖರೀದಿ ಪ್ರಕ್ರಿಯೆ ಜೋರಾಗಲು ಗ್ರಾಮೀಣ ಮತ್ತು ಅರೆ ನಗರ ಮಾರುಕಟ್ಟೆಯಲ್ಲಿ ಭಾರೀ ಪ್ರಮಾಣದ ಬೇಡಿಕೆಯೂ ಮತ್ತೊಂದು ಪ್ರಮುಖ ಕಾರಣವಾಗಿದೆ. ದೇಶಾದ್ಯಂತ ಆಗಿರುವ ಮಾರಾಟದಲ್ಲಿ ಶೇ 28 ರಷ್ಟು ಪಾಲು ಈ ಮಾರುಕಟ್ಟೆಯದ್ದಾಗಿದೆ. ಈ ಮೂಲಕ ಈ ಪ್ರದೇಶದ ಜನರಲ್ಲಿ ಕೊಳ್ಳುವಿಕೆಯ ಶಕ್ತಿ ಹೆಚ್ಚಾಗಿರುವುದು ಮತ್ತು ಆರ್ಥಿಕ ಪರಿಸ್ಥಿತಿ ಸುಧಾರಿಸುವುದು ದೇಶದ ಆರ್ಥಿಕತೆಗೆ ಹೊಸ ಉತ್ತೇಜನ ನೀಡುವ ನಿರೀಕ್ಷೆ ಇದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search