• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

Tulunadu News Posted On November 11, 2025
0


0
Shares
  • Share On Facebook
  • Tweet It

ಇದು ನಿಜಕ್ಕೂ ಆಶ್ಚರ್ಯಕರ ಸಂಗತಿ. ನಾವು ಅಪರೂಪಕ್ಕೊಮ್ಮೆ ನಮ್ಮ ಮನೆಯ ಅಥವಾ ಅಂಗಡಿಯ ಹಳೆಯ ವಸ್ತುಗಳನ್ನು ಗುಜರಿ ಅವರಿಗೆ ನೀಡಿ ನೂರೋ, ಸಾವಿರನೋ ಸಂಪಾದಿಸಿ ಅದನ್ನೇ ಲಾಭ ಎಂದು ಅಂದುಕೊಂಡಿರುತ್ತೇವೆ. ಗುಜರಿಯವನ ಬಳಿ ಒಂದಿಷ್ಟು ಚೌಕಾಶಿ ಮಾಡಿ ಹತ್ತಿಪ್ಪತ್ತು ರೂಪಾಯಿ ಜಾಸ್ತಿ ಗಳಿಸಿದರೆ ನಮ್ಮ ಖುಷಿಗೆ ಪಾರವೇ ಇಲ್ಲ. ಆದರೆ ಹಳೆಯ ಕಡತಗಳನ್ನು ಗುಜರಿಗೆ ನೀಡುವ ಮೂಲಕ ಸರಕಾರಗಳು ಕೋಟಿ ಕೋಟಿ ಹಣ ಸಂಪಾದಿಸುತ್ತವೆ ಎನ್ನುವುದನ್ನು ನೋಡುವಾಗ ನಿಜಕ್ಕೂ ಸೋಜಿಗವಾಗುತ್ತದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಳೆದ ತಿಂಗಳು ನಡೆಸಿದ ಬೃಹತ್ ಸ್ವಚ್ಛತಾ ಅಭಿಯಾನ 5.0 ಅಡಿಯಲ್ಲಿ, ಸರಕಾರಿ ಕಚೇರಿಗಳಲ್ಲಿದ್ದ ಅನುಪಯುಕ್ತ ವಸ್ತುಗಳನ್ನು ಮಾರಾಟ ಮಾಡಿದ್ದು, ಅದರಿಂದ 800 ಕೋಟಿ ರೂ ಆದಾಯ ಗಳಿಸಿದೆ. ಈ ಮೊತ್ತವು 2023 ರಲ್ಲಿ ಇಸ್ರೋದ ಯಶಸ್ವಿ ಚಂದ್ರಯಾನ -3 ಯೋಜನೆಗೆ ವೆಚ್ಚವಾಗಿದ್ದ 615 ಕೋಟಿ ರೂಗಳಿಗಿಂರ ಅಧಿಕ ಎನ್ನುವುದು ಎಲ್ಲರಿಗೂ ಹುಬ್ಬೇರಿಸುವಂತೆ ಮಾಡಿದೆ.

ಸುಮಾರು 11.58 ಲಕ್ಷ ಕಚೇರಿಗಳಲ್ಲಿ ಅಕ್ಟೋಬರ್ 2 ರಿಂದ ಅಕ್ಟೋಬರ್ 31 ರ ನಡುವೆ ನಡೆದ ಸ್ವಚ್ಚತಾ ಕಾರ್ಯದಲ್ಲಿ ಸುಮಾರು 29 ಲಕ್ಷ ಕಡತ ವಿಲೇವಾರಿ ಮಾಡಲಾಗಿದೆ. ಜತೆಗೆ, ಉಪಯೋಗವಿಲ್ಲದ ದಾಖಲೆಗಳು, ಎಲೆಕ್ಟ್ರಾನಿಕ್ ತ್ಯಾಜ್ಯ, ಪೀಠೋಪಕರಣ, ವಾಹನ, ಯಂತ್ರೋಪಕರಣಗಳನ್ನು ಗುಜರಿಗೆ ಹಾಕಲಾಗಿದೆ. ಈ ವೇಳೆ 232 ಲಕ್ಷ ಚದರ ಅಡಿಯಲ್ಲಿ ಹರಡಿದ್ದ ವಸ್ತುಗಳನ್ನು ತೆರವುಗೊಳಿಸಲಾಗಿದೆ. ಈ ಪ್ರಮಾಣದಲ್ಲಿ ಕಚೇರಿಯನ್ನು ತೆರವುಗೊಳಿಸಿದ್ದು ಇದೇ ಮೊದಲು. 2021 ರಲ್ಲಿ ಈ ವಿಶಿಷ್ಟ ಅಭಿಯಾನವನ್ನು ಆರಂಭಿಸಲಾಗಿತ್ತು. ಅದರ ನಂತರ ಕೇಂದ್ರ ಸರಕಾರ ಸುಮಾರು 4100 ಕೋಟಿ ರೂ ಹಣ ಗಳಿಸಿದೆ. ಇದನ್ನು ಎಲ್ಲಾ ರಾಜ್ಯಗಳು ಅನುಷ್ಠಾನಕ್ಕೆ ತರುವ ಮೂಲಕ ಸ್ವಚ್ಚತೆಯಿಂದ ಆದಾಯ ಗಳಿಸುವತ್ತ ಗಮನ ಹರಿಸುವುದು ಉತ್ತಮ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search