• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!

Tulunadu News Posted On December 17, 2025
0


0
Shares
  • Share On Facebook
  • Tweet It

ಅಜಾನ್ ಸಮಯದಲ್ಲಿ ಲೌಡ್ ಸ್ವೀಕರ್ ಬಳಕೆಯಿಂದ ಉಂಟಾಗುತ್ತಿರುವ ಶಬ್ದದ ಪರ-ವಿರೋಧ ಚರ್ಚೆ ಬಹಳ ಕಾಲದಿಂದ ಆಗುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಈ ವಿಷಯ ಈ ಬಾರಿ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿಯೂ ಚರ್ಚೆಯಾಯಿತು. ಅಜಾನ್ ಸಮಯದಲ್ಲಿ ಡೆಸಿಬಲ್ ಮಿತಿ ಮೀರಿ ಲೌಡ್ ಸ್ವೀಕರ್ ಬಳಸುತ್ತಿರುವುದನ್ನು ನಿಯಂತ್ರಿಸಬೇಕೆಂಬ ಭಾರತೀಯ ಜನತಾ ಪಾರ್ಟಿಯ ಡಿ.ಎಸ್. ಅರುಣ್ ಅವರು ಪ್ರಶ್ನೆ ಕೇಳಿದ್ದರು. ಅವರ ಪ್ರಶ್ನೆಗೆ ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ದೀಪಾವಳಿಯ ಪಟಾಕಿ ಬಳಕೆ, ಹಬ್ಬ ಇತ್ಯಾದಿ ವೇಳೆ ಲೌಡ್ ಸ್ಪೀಕರ್ ಬಳಕೆ ವಿಷಯ ಪ್ರಸ್ತಾಪಿಸಿದ್ದು, ಕೆಲಕಾಲ ತೀವ್ರ ಮಾತಿನ ವಾಗ್ವಾದಕ್ಕೆ ಕಾರಣವಾಯಿತು.

ಆಜಾನ್ ವಿಷಯದಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಸಚಿವ ಖಂಡ್ರೆ ಹೇಳಿದಾಗ, ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಎದ್ದು ನಿಂತು ಸಚಿವರನ್ನು ಬೆಂಬಲಿಸಿ ಮಾತನಾಡತೊಡಗಿದರು.

ಚರ್ಚೆಯ ನಡುವೆ ವಿಧಾನ ಪರಿಷತ್ ಸದಸ್ಯ ಅರುಣ್ ” ಅಜಾನ್ ನಿಂದ ತೊಂದರೆಯಾಗುತ್ತದೆ ಎಂದು ದೂರು ಕೊಡುವ ಧೈರ್ಯ ಯಾರಿಗೂ ಇಲ್ಲ. ಯಾಕೆಂದರೆ ಇವರಿಗೆ ಸರಕಾರದ ಬೆಂಬಲ ಇದೆ. ಕಳೆದ ಎರಡೂವರೆ ವರ್ಷಗಳಿಂದ ಇದಕ್ಕೆ ಸರಕಾರದ ಬೆಂಬಲವಿದೆ” ಎಂದು ಹೇಳಿದ ಮಾತು ಕೆಲಕಾಲ ಮಾತಿನ ಚಕಮಕಿಗೆ ಕಾರಣವಾಯಿತು. ಈ ಮಧ್ಯೆ ಸಚಿವ ಈಶ್ವರ ಖಂಡ್ರೆ ಮಾತನಾಡಿ ದೀಪಾವಳಿಯ ಸಮಯದಲ್ಲಿ ಪಟಾಕಿ ಹೊಡೆಯುವುದರಿಂದ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಆಗುತ್ತದೆ ಎಂದು ಹೇಳತೊಡಗಿದರು. ಆಗ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದಸ್ಯರು ಕೇಳಿದ ಪ್ರಶ್ನೆಗೆ ಮಾತ್ರ ಉತ್ತರ ನೀಡಿ, ಬೇರೆ ವಿಷಯ ಪ್ರಸ್ತಾಪ ಬೇಡಾ ಎಂದು ಸಚಿವರಿಗೆ ಸಲಹೆ ನೀಡಿದರು.

 

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search