• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

Tulunadu News Posted On December 17, 2025
0


0
Shares
  • Share On Facebook
  • Tweet It

ಜಗತ್ತು ಬದಲಾಗಿದೆ. ಆದರೆ ಹಿಂದೂ ಧಾರ್ಮಿಕ ವಿಧಾನಗಳು ಮಾತ್ರ ಇವತ್ತಿಗೂ ನಮ್ಮ ಹಿರಿಯರು ಪಾಲಿಸಿಕೊಂಡು ಬಂದ ಹಿಂದಿನ ರೀತಿಯಲ್ಲಿವೆ ಎನ್ನುವ ಸಮಾಧಾನವಿತ್ತು. ಆದರೆ ಈಗ ಅದು ಕೂಡ ಹೊಸ ತಂತ್ರಜ್ಞಾನದತ್ತ ಸರಿಯುತ್ತಿರುವುದು ಆಧುನಿಕ ಕಾಲಕ್ಕೆ ಹಿಡಿದ ದ್ಯೋತಕವಾಗಿದೆ.

ಆಹಾರ ಆನ್ ಲೈನ್, ವಸ್ತುಗಳು ಆನ್ ಲೈನ್ ಬಳಿಕ ಈಗ ಮದುವೆಗಳು ಕೂಡ ಆನ್ ಲೈನ್ ಆಗುತ್ತಿರುವುದು ಸೋಜಿಗ. ಅದಕ್ಕೆ ತಾಜಾ ಉದಾಹರಣೆ ಇತ್ತೀಚೆಗೆ ನಡೆದ ನಿಶ್ಚಿತಾರ್ಥವೊಂದರ ಘಟನೆ. ಉಡುಪಿ ಮೂಲದ ಮೇಘನಾ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಚಕ್ರಭಾವಿ ಗ್ರಾಮದ ಸುಹಾಸ್ ವಿಡಿಯೋ ಕಾಲದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವುದು ಹೊಸ ಬೆಳವಣಿಗೆ.

ಉಡುಪಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಈ ನಿಶ್ಚಿತಾರ್ಥ ನಡೆದಿದೆ. ವರನ ಅನುಪಸ್ಥಿತಿಯಲ್ಲಿ ಎರಡೂ ಕುಟುಂಬಗಳು ಈ ಶುಭ ಕಾರ್ಯವನ್ನು ನೆರವೇರಿಸಿವೆ. ಕೆನಡಾದಲ್ಲಿ ಕೆಲಸ ಮಾಡುತ್ತಿರುವ ಸುಹಾಸ್ ಗೆ ಭಾರತಕ್ಕೆ ಬರಲು ರಜೆ ಸಿಕ್ಕಿಲ್ಲ. ಜನವರಿ 7 ಹಾಗೂ 8 ಕ್ಕೆ ಮದುವೆ ನಿಗದಿಯಾಗಿದ್ದು, ಕುಟುಂಬಗಳು ವಿಡಿಯೋ ಕಾಲ್ ಮೂಲಕ ನಿಶ್ಚಿತಾರ್ಥ ಮಾಡಿ ಮುಗಿಸಿವೆ. ಬ್ರಾಹ್ಮಣ ಸಂಪ್ರದಾಯದಂತೆ ಎರಡೂ ಕುಟುಂಬಸ್ಥರು ನಿಶ್ಚಿತಾರ್ಥ ನೆರವೇರಿಸಿದ್ದಾರೆ.

ಎಲ್ ಇಡಿ ಸ್ಕ್ರೀನ್ ಗೆ ಆರತಿ ಬೆಳಗಿ, ಮಂತ್ರಾಕ್ಷತೆ ಹಾಕಿ ವಧು, ವರನಿಗೆ ಶುಭ ಕೋರಿದ್ದಾರೆ. ಕ್ಯಾಮೆರಾ ಮುಂದೆ ಯುವಕ – ಯುವತಿ ಉಂಗುರ ಹಾಕಿಕೊಂಡರು. ಒಟ್ಟಿನಲ್ಲಿ ಹೊಸ ಬದುಕನ್ನು ಆರಂಭಿಸಲು ನಿರ್ಧರಿಸಿರುವ ಜೋಡಿಗಳು ಹೊಸ ರೀತಿಯಲ್ಲಿ ಬದುಕನ್ನು ಆರಂಭಿಸಲು ತೀರ್ಮಾನಿಸಿರುವುದು ಹೊಸ ಬೆಳವಣಿಗೆ. ಮುಂದಿನ ದಿನಗಳಲ್ಲಿ ಇದು ಬೇರೆಯವರಿಗೂ ಮಾದರಿಯಾಗುತ್ತದಾ, ಅನಿವಾರ್ಯ ಸಂದರ್ಭದಲ್ಲಿ ಇದೊಂದು ದಾರಿಯಾಗುತ್ತಾ ಎನ್ನುವುದು ಕಾದು ನೋಡಬೇಕು.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search