• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

Tulunadu News Posted On January 2, 2026
0


0
Shares
  • Share On Facebook
  • Tweet It

ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಅವರಿಗೆ ಈಗ 70 ವರ್ಷ ವಯಸ್ಸು. ಇತ್ತೀಚೆಗಷ್ಟೇ ಅವರು ಕೆಲವು ದಿನಗಳ ಕಾಲ ಹಾಸಿಗೆ ಹಿಡಿದು ಮಲಗಿಬಿಟ್ಟಿದ್ದರು. ನಡೆಯುವುದು ಬಿಡಿ, ಬೆರಳು ಅಲುಗಾಡಿಸಲು ಕೂಡ ಕಷ್ಟ ಎನ್ನುವಷ್ಟರ ಮಟ್ಟಿಗೆ ಅವರಿಗೆ ಅನಾರೋಗ್ಯ ಕಾಡಿತ್ತು. ಚಿಕುನ್ ಗುನ್ಯಾ ಕಾಯಿಲೆ ಅವರ ದೇಹವನ್ನು ಹಿಂಡಿ ಹಿಪ್ಪೆ ಮಾಡಿಬಿಟ್ಟಿತ್ತು. ಅದಾಗಿ ಚಿಕಿತ್ಸೆಯ ಬಳಿಕ ಸುರೇಶ್ ಕುಮಾರ್ ಅರೋಗ್ಯವಾಗಿದ್ದಾರೆ. ಯಾವ ಲೆವೆಲ್ಲಿಗೆ ಗುಣಮುಖರಾಗಿದ್ದಾರೆ ಎಂದರೆ ಇತ್ತೀಚೆಗೆ ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲಿಂಗ್ ಮಾಡಿಕೊಂಡು ಹೋಗಿದ್ದಾರೆ.

ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸುಮಾರು 702 ಕಿಲೋ ಮೀಟರ್ ಇದೆ. ಇವರು 2024 ರಲ್ಲಿಯೇ ಹೀಗೊಂದು ಸೈಕಲ್ ಯಾತ್ರೆ ಮಾಡಬೇಕೆಂದು ಯೋಚನೆ ಹಾಕಿದ್ದರು. ಅವರು ಐದು ದಶಕಗಳ ಹಿಂದೆ ಒಮ್ಮೆ ಹೀಗೆ ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ತುಳಿದ ನೆನಪಿಗಾಗಿ ಇನ್ನೊಮ್ಮೆ ಅದೇ ರೀತಿ ಹೋಗಿ ಬರೋಣ ಎಂದು ನಿರ್ಧರಿಸಿದ್ದರು. ಆದರೆ 2024 ಅಗಸ್ಟ್ ನಲ್ಲಿ ಅವರಿಗೆ ಕಾಯಿಲೆ ಬಂದು ಯೋಜನೆ ಕೈಬಿಟ್ಟಿದ್ದರು. 2025 ಮಾರ್ಚ್ ನಲ್ಲಿ ಅವರು ಮತ್ತೇ ಚೇತರಿಸಿಕೊಳ್ಳುತ್ತಿದ್ದಂತೆ ತಮ್ಮ ಸೈಕಲಿಂಗ್ ಯೋಜನೆಯನ್ನು ಅನುಷ್ಟಾನಕ್ಕೆ ತರಲು ಮುಂದಾಗಿದ್ದರು. ಅದರಂತೆ ಕಾಲ ಕೂಡಿ ಬಂದು 12 ಗೆಳೆಯರೊಂದಿಗೆ ಯಾತ್ರೆ ಶುರು ಮಾಡಿಯೇ ಬಿಟ್ಟರು. ಡಿಸೆಂಬರ್ 23 ರಂದು ಆರಂಭವಾದ ಈ ಯಾತ್ರೆಯ ಮೊದಲ ದಿನ ಎಂಟೂವರೆ ಗಂಟೆಯಲ್ಲಿ 157 ಕಿಲೋ ಮೀಟರ್ ಸೈಕಲಿಂಗ್ ಮಾಡಿದ್ದಾರೆ. ಎರಡನೇಯ ದಿನ 159 ಕಿಲೋಮೀಟರ್ 8.3 ಗಂಟೆಯಲ್ಲಿ ಮೂರನೇ ದಿನ 155 ಕಿಲೋ ಮೀಟರ್ ಸಂಚರಿಸಿದ್ದಾರೆ. ನಾಲ್ಕನೇ ದಿನ 156 ಕಿಲೋ ಮೀಟರ್ ಹಾಗೂ ಕೊನೆಯ ದಿನ ನಾಲ್ಕು ಗಂಟೆಯಲ್ಲಿ 73 ಕಿಲೋ ಮೀಟರ್ ಪೆಡಲ್ ತುಳಿದು ಯಾತ್ರೆ ಸಂಪನ್ನಗೊಳಿಸಿದ್ದಾರೆ.

ಇದು ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಹೇಳಿರುವ ಮಾಜಿ ಸಚಿವ ಸುರೇಶ್ ಕುಮಾರ್ ಸೈಕಲಿಂಗ್ ತಮ್ಮ ನೆಚ್ಚಿನ ಹವ್ಯಾಸವಾಗಿದ್ದು, ರಾಜಕೀಯಕ್ಕೆ ಬಂದಾಗ ಇದಕ್ಕೆ ಬ್ರೇಕ್ ನೀಡಿದ್ದೆ. ಈಗ ಮತ್ತೇ ಇದನ್ನು ಆರಂಭಿಸಿ, ಆರೋಗ್ಯ ಮತ್ತು ಆತ್ಮವಿಶ್ವಾಸವನ್ನು ಮರಳಿಗಳಿಸಿದಂತಾಗಿದೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಸುರೇಶ್ ಕುಮಾರ್ ಅವರ ಈ ನಡೆ ಹಲವರಿಗೆ ಸ್ಫೂರ್ತಿಯನ್ನು ಉಂಟು ಮಾಡಿದೆ. ಕಾಯಿಲೆಗೆ ಹೆದರಿ, ವಯಸ್ಸಿಗೆ ಹೆದರಿ ಕೂರುವುದಕ್ಕಿಂತ ಇಂತಹ ಧೈರ್ಯದ ನಡೆಯಿಂದ ಸುರೇಶ್ ಕುಮಾರ್ ಅವರು ಹಲವರಿಗೆ ಮಾದರಿಯಾಗಿದ್ದಾರೆ.

 

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search