• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

Tulunadu News Posted On January 23, 2026
0


0
Shares
  • Share On Facebook
  • Tweet It

ಕಳೆದ ವರ್ಷ ಎಪ್ರಿಲ್ ನಲ್ಲಿ ಕುಡುಪು ಸಮೀಪದ ಭಟ್ರ ಕಲ್ಲುರ್ತಿ ದೇವಸ್ಥಾನದ ಸನಿಹದಲ್ಲಿರುವ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ವೇಳೆ ಮೈದಾನಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಎಂದು ಆರೋಪಿಸಿ ಮೈದಾನದಲ್ಲಿ ಆಡುತ್ತಿದ್ದ, ಕ್ರಿಕೆಟ್ ಆಟ ವೀಕ್ಷಿಸುತ್ತಿದ್ದ ಜನರು ಸೇರಿ ಗುಂಪು ದಾಳಿ ಮಾಡಿ ಆ ಯುವಕನಿಗೆ ಹಲ್ಲೆ ಮಾಡಿದ ಪರಿಣಾಮ ಆ ವ್ಯಕ್ತಿಯ ಸಾವು ಸಂಭವಿಸಿತ್ತು. ನಂತರ ಆ ಮೃತ ವ್ಯಕ್ತಿಯನ್ನು ಆಶ್ರಫ್ ಎಂದು ಗುರುತಿಸಲಾಗಿ, ಆತ ಕೇರಳದ ವಯನಾಡು ಜಿಲ್ಲೆಯ ಪುಲ್ಲಪಳ್ಳಿ ಮೂಲದವನು ಎಂದು ಪೊಲೀಸರು ಮಾಹಿತಿ ಕಲೆ ಹಾಕಿದ್ದರು. ಈ ಘಟನೆಯ ಸಂಬಂಧ ಘಟನೆ ನಡೆದ ಪ್ರದೇಶದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಹತ್ತಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿತ್ತು. ಇದರಲ್ಲಿ ಮಂಗಳಾ ನಗರದ 33 ವರ್ಷದ ನಟೇಶ್ ಕುಮಾರ್ ನಾಲ್ಕನೇ ಆರೋಪಿ ಎಂದು ಉಲ್ಲೇಖಿಸಲಾಗಿತ್ತು.

ನಟೇಶ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಲಯ ಜಾಮೀನು ನೀಡಿದೆ. ಆರೋಪಿಯ ಪರವಾಗಿ ಬೆಂಗಳೂರಿನಲ್ಲಿರುವ ಉಚ್ಚ ನ್ಯಾಯಾಲಯದಲ್ಲಿ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ಇದು ಭಾರತೀಯ ದಂಡ ಸಂಹಿತೆಯ ಕಲಾಂ 304 (1) ಕೊಲೆಗೆ ಸಮನಾಗದ ಅಪರಾಧಿ ನರಹತ್ಯೆಯಾಗಿದೆ. ಇದು ಐಪಿಸಿ 302 ರ ಅಡಿಯಲ್ಲಿ ಬರುವುದಿಲ್ಲ ಎಂದು ವಾದ ಮಂಡಿಸಿದ್ದರು. ಆರೋಪಿ ನಟೇಶ್ ಕುಮಾರ್ 2025, ಎಪ್ರಿಲ್ 29 ರಿಂದಲೇ ನ್ಯಾಯಾಂಗ ಬಂಧನದಲ್ಲಿದ್ದು, ಆರೋಪಿ 6, 10, 12 ಹಾಗೂ 21 ಈಗಾಗಲೇ ಸೆಶನ್ಸ್ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು.

ಸರಕಾರಿ ಅಭಿಯೋಜಕರು ವಾದ ಮಂಡಿಸಿ ಆರೋಪಿ 3 ಹಾಗೂ 4 ಜೊತೆಗೂಡಿ ಮನೆಯಿಂದ ಮೆಣಸಿನ ಹುಡಿ ತಂದು ಮೃತನ ಕಣ್ಣುಗಳಿಗೆ ಹಾಗೂ ದೇಹದ ಮೇಲೆ ಎಸೆದಿದ್ದಾರೆ ಹಾಗೂ ಬೇರೆಯವರಿಗೂ ಹಲ್ಲೆ ಮಾಡಲು ಪ್ರೇರೆಪಿಸಿ ತಾವೂ ಹಲ್ಲೆ ಮಾಡಿದ್ದಾರೆ ಎಂದು ವಾದಿಸಿದ್ದರು. ಆದ್ದರಿಂದ ಗುರುತರ ಅಪರಾಧದಲ್ಲಿ ಭಾಗಿಯಾಗಿರುವುದರಿಂದ ಆರೋಪಿ ಸಂಖ್ಯೆ 4 ಜಾಮೀನು ಪಡೆಯಲು ಅರ್ಹನಲ್ಲ ಎಂದು ವಾದಿಸಿದ್ದರು.

ಎರಡೂ ಕಡೆಯ ವಾದ, ಪ್ರತಿವಾದವನ್ನು ಆಲಿಸಿದ ಮಾನ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರು ಆರೋಪಿಗೆ ಜಾಮೀನು ನೀಡಿದ್ದಾರೆ. ಅದರೊಂದಿಗೆ ಒಂದು ಲಕ್ಷ ರೂ ಬಾಂಡ್, ಒಬ್ಬ ಶ್ಯೂರಿಟಿ, ಸಾಕ್ಷಿದಾರರಿಗೆ ಪ್ರತ್ಯಕ್ಷ, ಪರೋಕ್ಷವಾಗಿ ಆಗಿ ಬೆದರಿಕೆ ಒಡ್ಡದಂತೆ ಮತ್ತು ನ್ಯಾಯಾಲಯದಲ್ಲಿ ಪ್ರಕರಣದ ಶೀಘ್ರ ವಿಲೇವಾರಿಗೆ ಸಹಕರಿಸುವಂತೆ ಸೂಚಿಸಲಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search