• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿಕೃತ ಕಾಮಿಯ ದಾಹಕ್ಕೆ ಬಲಿಯಾದ ಬಾಲಕ

TNN Correspondent Posted On September 9, 2017
0


0
Shares
  • Share On Facebook
  • Tweet It

ದೆಹಲಿ : ಅಂತಾರಾಷ್ಟ್ರೀಯ ಶಾಲೆಯೊಂದರ ಎರಡನೇ ತರಗತಿಯಲ್ಲಿ ಓದುತ್ತಿದ್ದ ಏಳು ವರ್ಷದ ಬಾಲಕ ಬೆಳಗ್ಗೆ ಶಾಲೆ ಬಂದ ಕೂಡಲೇ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆ ತೆರಳುತ್ತಾನೆ. ಆದರೆ ಆತ ಜೀವಂತವಾಗಿ ಹಿಂದಿರುಗುವುದಿಲ್ಲ. ಅಬ್ಬಾ ಎಂಥ ಭಯಾನಕತೆ ಅಲ್ವಾ?

ಹೌದು ಈ ಘಟನೆ ನಡೆದಿದ್ದು ಶುಕ್ರವಾರ ಬೆಳಗ್ಗೆ ದೆಹಲಿ ಸಮೀಪದ ಗುರುಗ್ರಾಮದಲ್ಲಿ. ಆ ಏಳು ವರ್ಷದ ಬಾಲಕ ರ್ಯಾನ್ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿ ಪ್ರದ್ಯುಮ್ನ ಠಾಕೂರ್.

ಸುಮಾರು ಎಂಟು ಗಂಟೆಗೆ ಪ್ರದ್ಯುಮ್ನನ ಸಹಪಾಠಿಯೊಬ್ಬ ಶೌಚಾಲಯಕ್ಕೆ ಹೋದಾಗ ಅಲ್ಲಿ ರಕ್ತಮಡುವಿನಲ್ಲಿ ಬಿದ್ದಿರುವ ಪ್ರದ್ಯುಮ್ನನನ್ನು ನೋಡಿ ಕಿರುಚಿಕೊಂಡು ಶಾಲೆಯ ಪ್ರಾಂಶುಪಾಲೆ ನೀರ್ಜಾ ಅವರಿಗೆ ತಿಳಿಸುತ್ತಾನೆ. ಶಾಲಾ ಸಿಬ್ಬಂದಿಯಲ್ಲಿ ಒಟ್ಟುಗೂಡಿ ಪೊಲೀಸರಿಗೆ ಫೋನಾಯಿಸುತ್ತಾರೆ. ಪ್ರದ್ಯುಮ್ನನನ್ನು ಆಸ್ಪತ್ರೆಗೂ ಕರೆದೊಯ್ಯುತ್ತಾರೆ. ಆದರೆ ಅಷ್ಟರಲ್ಲಾಗಲೇ ಬಾಲಕ ಸತ್ತು ಒಂಡು ಗಂಟೆಯಾಗಿರುತ್ತದೆ.

ಖಾಸಗಿ ಕಂಪೆನಿ ಉದ್ಯೋಗಿಯಾಗಿರುವ ಪ್ರದ್ಯುಮ್ನನ ತಂದೆಯ ಸಹದ್ಯೋಗಿಗಳು ಮತ್ತು ಸಂಬಂಧಿಗಳು ಆಸ್ಪತ್ರೆಗೆ ದೌಡಾಯಿಸಿ ವಿಷಯ ತಿಳಿದು ಆಕ್ರೋಶ ವ್ಯಕ್ತಪಡಿಸುತ್ತಾರೆ. ಘಟನೆ ನಡೆದ ರ್ಯಾನ್ ಅಂತಾರಾಷ್ಟ್ರೀಯ ಶಾಲೆ ಹಾಗೂ ಪೊಲೀಸ್ ಉಪನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಾರೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಗುರುಗ್ರಾಮದ ಪೊಲೀಸರು ಶೀಘ್ರವಾಗಿ ಹಂತಕರ ಸೆರೆಗೆ ಜಾಲ ಬೀಸುತ್ತಾರೆ. ಶುಕ್ರವಾರ ಸಂಜೆಯೊಳಗೆ ಅವರ ತನಿಖೆಯಲ್ಲಿ ಸೆರೆಬಿದ್ದವರು ಬಸ್ ಕಂಡಕ್ಟರ್, ಬಸ್ ಡ್ರೈವರ್ ಹಾಗೂ ಇವರಿಬ್ಬರೂ ಆಪ್ತನಾದ ಶಾಲಾ ಸಿಬ್ಬಂದಿ.

ಯಾರೂ ಇರದನ್ನು ನೋಡಿ ಲೈಂಗಿಕ ತೃಷೆಗೆ ಬಳಸಲು ಮುಂದಾದ
ಪೊಲೀಸರ ಕೈಚಳಕದಿಂದ ಸತ್ಯ ಹೊರಬೀಳುತ್ತದೆ. ಬಸ್ ಕಂಡಕ್ಟರ್ ಅಶೋಕ್ ಕುಮಾರ್ ಬಾಲಕನ ಕೊಲೆ ಮಾಡಿದ್ದಾಗಿ ಒಪ್ಪಿಕೊಳ್ಳುತ್ತಾನೆ. ಶೌಚಾಲಯಕ್ಕೆ ಹೋದಾಗ ಅಲ್ಲಿ ಪ್ರದ್ಯುಮ್ನನನ್ನು ನೋಡಿದೆ. ಯಾರೂ ಇರದೇ ಇರುವುದನ್ನು ಗಮನಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಆತನನ್ನು ಬಿಗಿಯಾಗಿ ತಬ್ಬಿ ಮುದ್ದಾಡಿದೆ. ಆದರೆ ಬಾಲಕ ಕಿರುಚಾಡ ತೊಡಗಿದ. ಹೆದರಿಕೆಯಿಂದ ನನ್ನ ಜೇಬಿನಲ್ಲಿದ್ದ ಚಾಕುವಿನಿಂದ ಆತನ ಕುತ್ತಿಗೆ ಸೀಳಿದೆ ಎಂದು ಅಶೋಕ್ ಕೃತ್ಯವನ್ನು ವಿವರಿಸಿದ್ದಾನೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search