• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಂಗ್ರೆಸ್ ಸರಕಾರ ಕೊಲೆಗಳನ್ನು ಬಯಸುತ್ತಿದೆ, ವಿಚಾರವಾದಿಗಳಿಗೆ ಎಚ್ಚರ: ಕೆಪಿ ಶಶಿಕಲಾ

TNN Correspondent Posted On September 11, 2017
0


0
Shares
  • Share On Facebook
  • Tweet It

ಕೊಲ್ಲಂ: ಚುನಾವಣೆಗಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರವೇ ಕೊಲೆಗಳನ್ನು ಬಯಸುತ್ತಿದೆ. ಹುಸಿ ಜಾತ್ಯಾತೀತವಾದಿಗಳೇ ಎಚ್ಚರ ನಿಮ್ಮವರೇ ನಿಮ್ಮನ್ನು ಕೊಲ್ಲಬಹುದು. ಜೀವ ಉಳಿಸಿಕೊಳ್ಳಲು ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮ ಮಾಡಿ ಎಂದು ಕೇರಳದ ಹಿಂದೂ ಐಕ್ಯವಾದಿ ಸಂಘಟನೆ ಮುಖ್ಯಸ್ಥೆ, ಪ್ರಬಲ ಹಿಂದೂತ್ವವಾದಿ ಕೆ.ಪಿ.ಶಶಿಕಲಾ ಎಚ್ಚರಿಕೆ ನೀಡಿದ್ದಾರೆ.
ಬುದ್ದಿಜೀವಿಗಳೇ ಜೀವ ಉಳಿಸಿಕೊಳ್ಳುವ ಆಸೆಯಿದ್ದರೇ ಹಿಂದೂ ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮಮಾಡಿ. ಇಲ್ಲದಿದ್ದರೇ ನಿಮ್ಮವರೇ ನಿಮ್ಮನ್ನು ಕೊಲ್ಲಬಹುದು. ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಕೊಲೆಗಳು ಆಗುವುದನ್ನು ಬಯಸುತ್ತಿದೆ. ಅಲ್ಲದೇ ಗೌರಿ ಕೊಲೆಯಲ್ಲಿ ಅನುಕಂಪದ ವೋಟು ಪಡೆಯಲು ಕಾಂಗ್ರೆಸ್ ಹವಣಿಸುತ್ತಿದೆ. ಕೊಲೆಗಳನ್ನೇ ಬಂಡವಾಳ ಮಾಡಿಕೊಂಡು ಕಾಂಗ್ರೆಸ್ ಸರಕಾರ ಚುನಾವಣೆಯಲ್ಲಿ ವೋಟು ಪಡೆಯುವ ಉದ್ದೇಶ ಹೊಂದಿದೆ. ಗೌರಿಯಂತಹ ಸ್ವಾತಂತ್ರ್ಯ ಚಿಂತಕರು ತಮ್ಮ ಜೀವನ ಉಳಿಸಿಕೊಳ್ಳುವ ಆಸೆಯಿದ್ದರೇ ಹಿಂದೂ ದೇವರ ಮೊರೆಹೋಗಬೇಕು ಎಂದು ಹೇಳಿದ್ದಾರೆ.
ಆರ್‌ಎಸ್‌ಎಸ್ ಹಲವು ವಿರೋಧಗಳ ಮಧ್ಯೆ ವಿಶ್ವಾದ್ಯಂತ ಬೆಳೆಯುತ್ತಿದೆ. ವಿರುದ್ಧ ವಿಚಾರಧಾರೆಯವರ ಹತ್ಯಗಳನ್ನು ನಡೆಸಿ ಆರ್‌ಎಸ್‌ಎಸ್ ಬೆಳೆಸುವ ಗತಿ ಇಲ್ಲ. ಗೌರಿ ಲಂಕೇಶ್ ಜೀವನದ ಕೊನೆಯವರೆಗೂ ಬಲಪಂಥಿಯ ವಿಚಾರಧಾರೆಗಳನ್ನು ಕಟುವಾಗಿ ಟೀಕಿಸುತ್ತಿದ್ದರು. ಅವರ ಹತ್ಯೆಯಲ್ಲಿ ಬಲಪಂಥೀಯರ ಕೈವಾಡ ಇರಬಹುದು ಎಂಬ ಶಂಕೆ ಮೂಡುವುದು ಸಹಜ. ಆದರೆ ಅವರು ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹೋಗಿ ಗೌರಿ ಲಂಕೇಶ ಅದೇ ಸಂಘಟನೆಯ ಕೆಲವರ ವಿರೋಧ ಕಟ್ಟಿಕೊಂಡಿದ್ದರ ಮಾಹಿತಿ ಇದೆ. ಅವರೂ ಈ ಕೊಲೆಗಳನ್ನು ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಶಶಿಕಲಾ ಅವರ ಭಾಷಣ ಪ್ರಚೋದನಕಾರಿಯಾಗಿದೆ ಎಂದು ಪರವೂರ್ ಕಾಂಗ್ರೆಸ್ ಶಾಸಕ ವಿ.ಡಿ.ಸತೀಶನ್ ಪೊಲೀಸರಿಗೆ ದೂರು ನೀಡಿದ್ದು, ಶಶಿಕಲಾ ವಿರುದ್ಧ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search