• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಂಗ್ರೆಸ್ ಸರಕಾರ ಕೊಲೆಗಳನ್ನು ಬಯಸುತ್ತಿದೆ, ವಿಚಾರವಾದಿಗಳಿಗೆ ಎಚ್ಚರ: ಕೆಪಿ ಶಶಿಕಲಾ

TNN Correspondent Posted On September 11, 2017
0


0
Shares
  • Share On Facebook
  • Tweet It

ಕೊಲ್ಲಂ: ಚುನಾವಣೆಗಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರವೇ ಕೊಲೆಗಳನ್ನು ಬಯಸುತ್ತಿದೆ. ಹುಸಿ ಜಾತ್ಯಾತೀತವಾದಿಗಳೇ ಎಚ್ಚರ ನಿಮ್ಮವರೇ ನಿಮ್ಮನ್ನು ಕೊಲ್ಲಬಹುದು. ಜೀವ ಉಳಿಸಿಕೊಳ್ಳಲು ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮ ಮಾಡಿ ಎಂದು ಕೇರಳದ ಹಿಂದೂ ಐಕ್ಯವಾದಿ ಸಂಘಟನೆ ಮುಖ್ಯಸ್ಥೆ, ಪ್ರಬಲ ಹಿಂದೂತ್ವವಾದಿ ಕೆ.ಪಿ.ಶಶಿಕಲಾ ಎಚ್ಚರಿಕೆ ನೀಡಿದ್ದಾರೆ.
ಬುದ್ದಿಜೀವಿಗಳೇ ಜೀವ ಉಳಿಸಿಕೊಳ್ಳುವ ಆಸೆಯಿದ್ದರೇ ಹಿಂದೂ ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮಮಾಡಿ. ಇಲ್ಲದಿದ್ದರೇ ನಿಮ್ಮವರೇ ನಿಮ್ಮನ್ನು ಕೊಲ್ಲಬಹುದು. ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಕೊಲೆಗಳು ಆಗುವುದನ್ನು ಬಯಸುತ್ತಿದೆ. ಅಲ್ಲದೇ ಗೌರಿ ಕೊಲೆಯಲ್ಲಿ ಅನುಕಂಪದ ವೋಟು ಪಡೆಯಲು ಕಾಂಗ್ರೆಸ್ ಹವಣಿಸುತ್ತಿದೆ. ಕೊಲೆಗಳನ್ನೇ ಬಂಡವಾಳ ಮಾಡಿಕೊಂಡು ಕಾಂಗ್ರೆಸ್ ಸರಕಾರ ಚುನಾವಣೆಯಲ್ಲಿ ವೋಟು ಪಡೆಯುವ ಉದ್ದೇಶ ಹೊಂದಿದೆ. ಗೌರಿಯಂತಹ ಸ್ವಾತಂತ್ರ್ಯ ಚಿಂತಕರು ತಮ್ಮ ಜೀವನ ಉಳಿಸಿಕೊಳ್ಳುವ ಆಸೆಯಿದ್ದರೇ ಹಿಂದೂ ದೇವರ ಮೊರೆಹೋಗಬೇಕು ಎಂದು ಹೇಳಿದ್ದಾರೆ.
ಆರ್‌ಎಸ್‌ಎಸ್ ಹಲವು ವಿರೋಧಗಳ ಮಧ್ಯೆ ವಿಶ್ವಾದ್ಯಂತ ಬೆಳೆಯುತ್ತಿದೆ. ವಿರುದ್ಧ ವಿಚಾರಧಾರೆಯವರ ಹತ್ಯಗಳನ್ನು ನಡೆಸಿ ಆರ್‌ಎಸ್‌ಎಸ್ ಬೆಳೆಸುವ ಗತಿ ಇಲ್ಲ. ಗೌರಿ ಲಂಕೇಶ್ ಜೀವನದ ಕೊನೆಯವರೆಗೂ ಬಲಪಂಥಿಯ ವಿಚಾರಧಾರೆಗಳನ್ನು ಕಟುವಾಗಿ ಟೀಕಿಸುತ್ತಿದ್ದರು. ಅವರ ಹತ್ಯೆಯಲ್ಲಿ ಬಲಪಂಥೀಯರ ಕೈವಾಡ ಇರಬಹುದು ಎಂಬ ಶಂಕೆ ಮೂಡುವುದು ಸಹಜ. ಆದರೆ ಅವರು ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹೋಗಿ ಗೌರಿ ಲಂಕೇಶ ಅದೇ ಸಂಘಟನೆಯ ಕೆಲವರ ವಿರೋಧ ಕಟ್ಟಿಕೊಂಡಿದ್ದರ ಮಾಹಿತಿ ಇದೆ. ಅವರೂ ಈ ಕೊಲೆಗಳನ್ನು ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಶಶಿಕಲಾ ಅವರ ಭಾಷಣ ಪ್ರಚೋದನಕಾರಿಯಾಗಿದೆ ಎಂದು ಪರವೂರ್ ಕಾಂಗ್ರೆಸ್ ಶಾಸಕ ವಿ.ಡಿ.ಸತೀಶನ್ ಪೊಲೀಸರಿಗೆ ದೂರು ನೀಡಿದ್ದು, ಶಶಿಕಲಾ ವಿರುದ್ಧ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search