• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಂಗ್ರೆಸ್ ಸರಕಾರ ಕೊಲೆಗಳನ್ನು ಬಯಸುತ್ತಿದೆ, ವಿಚಾರವಾದಿಗಳಿಗೆ ಎಚ್ಚರ: ಕೆಪಿ ಶಶಿಕಲಾ

TNN Correspondent Posted On September 11, 2017
0


0
Shares
  • Share On Facebook
  • Tweet It

ಕೊಲ್ಲಂ: ಚುನಾವಣೆಗಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರವೇ ಕೊಲೆಗಳನ್ನು ಬಯಸುತ್ತಿದೆ. ಹುಸಿ ಜಾತ್ಯಾತೀತವಾದಿಗಳೇ ಎಚ್ಚರ ನಿಮ್ಮವರೇ ನಿಮ್ಮನ್ನು ಕೊಲ್ಲಬಹುದು. ಜೀವ ಉಳಿಸಿಕೊಳ್ಳಲು ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮ ಮಾಡಿ ಎಂದು ಕೇರಳದ ಹಿಂದೂ ಐಕ್ಯವಾದಿ ಸಂಘಟನೆ ಮುಖ್ಯಸ್ಥೆ, ಪ್ರಬಲ ಹಿಂದೂತ್ವವಾದಿ ಕೆ.ಪಿ.ಶಶಿಕಲಾ ಎಚ್ಚರಿಕೆ ನೀಡಿದ್ದಾರೆ.
ಬುದ್ದಿಜೀವಿಗಳೇ ಜೀವ ಉಳಿಸಿಕೊಳ್ಳುವ ಆಸೆಯಿದ್ದರೇ ಹಿಂದೂ ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮಮಾಡಿ. ಇಲ್ಲದಿದ್ದರೇ ನಿಮ್ಮವರೇ ನಿಮ್ಮನ್ನು ಕೊಲ್ಲಬಹುದು. ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಕೊಲೆಗಳು ಆಗುವುದನ್ನು ಬಯಸುತ್ತಿದೆ. ಅಲ್ಲದೇ ಗೌರಿ ಕೊಲೆಯಲ್ಲಿ ಅನುಕಂಪದ ವೋಟು ಪಡೆಯಲು ಕಾಂಗ್ರೆಸ್ ಹವಣಿಸುತ್ತಿದೆ. ಕೊಲೆಗಳನ್ನೇ ಬಂಡವಾಳ ಮಾಡಿಕೊಂಡು ಕಾಂಗ್ರೆಸ್ ಸರಕಾರ ಚುನಾವಣೆಯಲ್ಲಿ ವೋಟು ಪಡೆಯುವ ಉದ್ದೇಶ ಹೊಂದಿದೆ. ಗೌರಿಯಂತಹ ಸ್ವಾತಂತ್ರ್ಯ ಚಿಂತಕರು ತಮ್ಮ ಜೀವನ ಉಳಿಸಿಕೊಳ್ಳುವ ಆಸೆಯಿದ್ದರೇ ಹಿಂದೂ ದೇವರ ಮೊರೆಹೋಗಬೇಕು ಎಂದು ಹೇಳಿದ್ದಾರೆ.
ಆರ್‌ಎಸ್‌ಎಸ್ ಹಲವು ವಿರೋಧಗಳ ಮಧ್ಯೆ ವಿಶ್ವಾದ್ಯಂತ ಬೆಳೆಯುತ್ತಿದೆ. ವಿರುದ್ಧ ವಿಚಾರಧಾರೆಯವರ ಹತ್ಯಗಳನ್ನು ನಡೆಸಿ ಆರ್‌ಎಸ್‌ಎಸ್ ಬೆಳೆಸುವ ಗತಿ ಇಲ್ಲ. ಗೌರಿ ಲಂಕೇಶ್ ಜೀವನದ ಕೊನೆಯವರೆಗೂ ಬಲಪಂಥಿಯ ವಿಚಾರಧಾರೆಗಳನ್ನು ಕಟುವಾಗಿ ಟೀಕಿಸುತ್ತಿದ್ದರು. ಅವರ ಹತ್ಯೆಯಲ್ಲಿ ಬಲಪಂಥೀಯರ ಕೈವಾಡ ಇರಬಹುದು ಎಂಬ ಶಂಕೆ ಮೂಡುವುದು ಸಹಜ. ಆದರೆ ಅವರು ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹೋಗಿ ಗೌರಿ ಲಂಕೇಶ ಅದೇ ಸಂಘಟನೆಯ ಕೆಲವರ ವಿರೋಧ ಕಟ್ಟಿಕೊಂಡಿದ್ದರ ಮಾಹಿತಿ ಇದೆ. ಅವರೂ ಈ ಕೊಲೆಗಳನ್ನು ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಶಶಿಕಲಾ ಅವರ ಭಾಷಣ ಪ್ರಚೋದನಕಾರಿಯಾಗಿದೆ ಎಂದು ಪರವೂರ್ ಕಾಂಗ್ರೆಸ್ ಶಾಸಕ ವಿ.ಡಿ.ಸತೀಶನ್ ಪೊಲೀಸರಿಗೆ ದೂರು ನೀಡಿದ್ದು, ಶಶಿಕಲಾ ವಿರುದ್ಧ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search