• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ನೀವೂ ವಂಶ ರಾಜಕಾರಣದ ಫಲಾನುಭವಿಯೇ ಅಲ್ಲವೇ ರಾಹುಲ್ ಗಾಂಧಿ?

ಶ್ರೀಶೈಲ್ ಮಳ್ಳಿ, ಶಹಾಪುರ Posted On September 13, 2017
0


0
Shares
  • Share On Facebook
  • Tweet It

ಇದ್ದಿಲು ಮಸಿಗೆ ಹೇಳಿತ್ತಂತೆ, ನೀನು ಕಪ್ಪು ಎಂದು…

ರಾಹುಲ್ ಗಾಂಧಿ ಅವರು ಮಂಗಳವಾರ ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ನಿಂತು ಉಲಿದ ಮಾತು ಹೀಗಿದೆ, “ಭಾರತದಲ್ಲಿ ವಂಶರಾಜಕಾರಣದಿಂದ ರಾಜಕೀಯ ಅರಾಜಕತೆಯಂಥ ವಾತಾವರಣ ಸೃಷ್ಟಿಯಾಗಿದೆ’.

ಈ ಮಾತು ಕೇಳಿಯೇ, ಮೇಲಿನ ಉಕ್ತಿ ನೆನಪಾಗಿದ್ದು…

ನಿಜ ರಾಹುಲ್ ಗಾಂಧಿ ಅವರ ಮಾತುಗಳನ್ನು ದೇಶದ ಯಾರೂ ಸೀರಿಯಸ್ಸಾಗಿ ತೆಗೆದುಕೊಳ್ಳುವುದಿಲ್ಲ. ಹಾಗಂತ ರಾಹುಲ್ ಗಾಂಧಿ ಏನು ಬೇಕಾದರೂ ಮಾತನಾಡಬಹುದೆ? ಅದೂ ಅಂತಾರಾಷ್ಟ್ರೀಯ ಮಟ್ಟದಲ್ಲಿ. ಹೀಗೆ ಮಾತನಾಡಿಯೂ, ಯಾರ ಮರ್ಯಾದೆ ಹೋಯಿತು ಹೇಳಿ? ಅಷ್ಟಕ್ಕೂ ರಾಹುಲ್ ಗಾಂಧಿ ವಂಶರಾಜಕಾರಣದ ಫಲಾನುಭವಿಯೇ ಅಲ್ಲವೇ?

ಮೋತಿ ಲಾಲರ ಪ್ರಭಾವಿಯಿಂದ ಬಂದ ಜವಾಹರ ಲಾಲ್ ನೆಹರೂ ದೇಶದ ಪ್ರಧಾನಿಯಾದರೂ. ಲಾಲ್ ಬಹದ್ದೂರ್ ಶಾಸ್ತ್ರಿ ನಿಧನರಾದ ಬಳಿಕ ನೆಹರೂ ಪುತ್ರಿ ಎಂಬ ಕಾರಣಕ್ಕಾಗಿಯೇ ಇಂದಿರಾ ಗಾಂಧಿ ಪ್ರಧಾನಿಯಾದರು. ಇಂದಿರಾ ಪುತ್ರನಾಗಿದ್ದಕ್ಕೇ, ಎಲ್ಲೋ ಪೈಲಟ್ ಆಗಿದ್ದ ರಾಜೀವ್ ಗಾಂಧಿ ದೇಶದ ಚುಕ್ಕಾಣಿ ಹಿಡಿದರು. ಸಂಜಯ್ ಗಾಂಧಿಯೂ ರಾಜಕೀಯದ ಪಡಸಾಲೆಯಲ್ಲಿ ಹೊರಳಾಡಿದರು. ಇಂದಿರಾ ಸೊಸೆ ಎಂಬ ಕಾರಣಕ್ಕಾಗಿಯೇ, ಸೋನಿಯಾ ಕಾಂಗ್ರೆಸ್ ಅಧಿನಾಯಕಿಯಾದರು. ಇನ್ನು ಇಷ್ಟೆಲ್ಲ ಮಾತನಾಡುವ ರಾಹುಲ್ ಗಾಂಧಿ ಸೋನಿಯಾ ಹೊಟ್ಟೆಯಲ್ಲಿ ಹುಟ್ಟಿದ್ದಕ್ಕಾಗಿಯೇ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದಾರೆ. ಅದೇ ಕಾರಣಕ್ಕೇ ಮುಂದಿನ ಚುನಾವಣೆಯಲ್ಲಿ ನಾಯಕತ್ವ ವಹಿಸಲು ಸಿದ್ಧ ಎಂದಿದ್ದಾರೆ.

ರಾಹುಲ್ ಗಾಂಧಿ ಹೇಳಿದ್ದರಲ್ಲಿ ನಿಜ. ವಂಶ ರಾಜಕಾರಣದ ಪ್ರಭಾವದಿಂದಲೇ ದೇಶದಲ್ಲಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದರು. ನೆಹರೂ ಹಗರಣದ ಜನಕರಾದರು. ರಾಜೀವ್ ಗಾಂಧಿ ಬೊಫೋರ್ಸ್ ಹಗರಣದ ಉಡುಗೊರೆ ನೀಡಿದರು. ಸೋನಿಯಾ ಗಾಂಧಿ ಹಿಂಬಾಗಿಲಿನಿಂದಲೂ ದೇಶವನ್ನು ಆಳಬಹುದು ಎಂದು ತೋರಿಸಿದರು. ಕೊನೆಗೆ ರಾಹುಲ್ ಗಾಂಧಿ ವಂಶರಾಜಕಾರಣದ ಕುಡಿಯಾಗಿಯೂ ದೇಶದ ಜನರ ಎದುರು ಜೋಕರ್ ಎನಿಸಿದ್ದಂತೂ ಸುಳ್ಳಲ್ಲ.

ಆದರೆ, ವಿದೇಶಿ ವಿವಿ ವಿದ್ಯಾರ್ಥಿಗಳ ಎದುರು ಭಾರತದ ಘನತೆ ಎತ್ತಿ ಹಿಡಿಯಬೇಕಿದ್ದ ರಾಹುಲ್ ಗಾಂಧಿ, ದೇಶದ ಮರ್ಯಾದೆ ಕಳೆಯಲು ವಿಫಲ ಯತ್ನ ಮಾಡಿದ್ದು ದುರಂತ. ಬಡವನ ಮನೆಯಲ್ಲಿ ಹುಟ್ಟಿದ ಲಾಲ್ ಬಹದ್ದೂರ್ ಶಾಸ್ತ್ರಿ ಈ ದೇಶದ ಪ್ರಧಾನಿಯಾಗಲಿಲ್ಲವೇ? ಅವರು ನಿಮ್ಮ ಕಾಂಗ್ರೆಸ್ಸಿನವರೇ ಅಲ್ಲವೇ? ರಾಜ್ಯದ ದೇವೇಗೌಡರು, ಪಿ.ವಿ. ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿ, ಅಬ್ದುಲ್ ಕಲಾಂ, ಪ್ರಣಬ್ ಮುಖರ್ಜಿ, ರಾಮನಾಥ ಕೋವಿಂದ್, ವೆಂಕಯ್ಯ ನಾಯ್ಡು ವಂಶರಾಜಕಾರಣದ ಹಿನ್ನೆಲೆಯಿರದಿದ್ದರೂ ದೇಶದ ರಾಜಕೀಯದಲ್ಲಿ ಛಾಪು ಮೂಡಿಸಿಲ್ಲವೇ? ಇದೇಕೆ ರಾಹುಲ್ ಗಾಂಧಿಗೆ ಹೇಳಬೇಕು ಎನಿಸಲಿಲ್ಲ?

ಆದರೂ, ನಿಮ್ಮಂಥ ವಂಶರಾಜಕಾರಣದ ಕುಡಿಗಳಿಂದ ಬೇಸತ್ತೇ ಅಲ್ಲವೇ, ನಿಮ್ಮನ್ನು ತಿರಸ್ಕರಿಸಿ ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿಯನ್ನಾಗಿಸಿದ್ದು. ಇನ್ನಾದರೂ ದೇಶದ ಬಗ್ಗೆ ಗೌರವ ಇಟ್ಟುಕೊಂಡು ಮಾತನಾಡಿ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
ಶ್ರೀಶೈಲ್ ಮಳ್ಳಿ, ಶಹಾಪುರ July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
ಶ್ರೀಶೈಲ್ ಮಳ್ಳಿ, ಶಹಾಪುರ July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search