• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾ ಹೊರಹಾಕದಿದ್ದರೆ ದೇಶಕ್ಕೆ ಅಪಾಯ ಗ್ಯಾರೆಂಟಿ

TNN Correspondent Posted On September 19, 2017
0


0
Shares
  • Share On Facebook
  • Tweet It

ನವದೆಹಲಿ : ಅಕ್ರಮವಾಗಿ ದೇಶದೊಳಗೆ ನುಸುಳಿರುವ ರೋಹಿಂಗ್ಯಾ ಮುಸ್ಲಿಮರಿಂದ ರಾಷ್ಟ್ರೀಯ ಭದ್ರತೆಗೆ ಸವಾಲು ಎದುರಿಸುವಂತಾಗಿದೆ ಎಂದು ಸುಪ್ರೀಂಕೋರ್ಟ್‍ಗೆ ಕೇಂದ್ರ ಸರ್ಕಾರ ಸೋಮವಾರ ಅಫಿಡವಿಟ್ ಸಲ್ಲಿಸಿದೆ. ಪಾಕ್ ಪೋಷಿತ ಉಗ್ರ ಸಂಘಟನೆಗಳೊಂದಿಗೆ ಈಗಾಗಲೇ ವಲಸಿಗ ರೋಹಿಂಗ್ಯಾ ಮುಸ್ಲಿಮರು ನಂಟು ಹೊಂದಿದ್ದಾರೆ. ಮುಂದೆಯೂ ಅವರಿಗೆ ಯಾವುದೇ ಪರಿಶೀಲನೆ ರಹಿತ ಆಶ್ರಯ ಕಲ್ಪಿಸಿದರೆ ದೊಡ್ಡ ಅಪಾಯ ಕಾದಿದೆ ಎಂದು 15 ಪುಟಗಳ ವರದಿಯನ್ನು ಗೃಹ ಸಚಿವಾಲಯ ತ್ರಿಸದಸ್ಯ ಪೀಠಕ್ಕೆ ಸಲ್ಲಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪೀಠದಲ್ಲಿದ್ದರು. ಮ್ಯಾನ್ಮಾರ್‍ನಲ್ಲಿ ಬೌದ್ಧರು ಕಂಡಕಂಡಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ಕೊಚ್ಚುತ್ತಿರುವ ಬೆನ್ನಲ್ಲೇ ಗುಳೆಹೊರಟು ಬಾಂಗ್ಲಾದೇಶ ಮತ್ತು ಭಾರತದಲ್ಲಿ ಅಕ್ರಮವಾಗಿ ನುಸುಳಿ ಆಶ್ರಯ ಪಡೆದಿದ್ದಾರೆ. ಇವರನ್ನು ಗಡಿಪಾರು ಮಾಡದಂತೆ ವಿಶ್ವಸಂಸ್ಥೆ ಕೂಡ ಸೂಚಿಸಿತ್ತು. ಆದರೆ ಭಾರತ ಇದಕ್ಕೆ ಒಪ್ಪಿರಲಿಲ್ಲ. ಅ.3ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ.

ಏನಿದೆ ವರದಿಯಲ್ಲಿ ವಿವರಣೆ ?

>> ಯುಪಿಎ -2 ಅವಧಿಯಲ್ಲಿ ರೋಹಿಂಗ್ಯಾ ಮುಸ್ಲಿಮರ ಅಕ್ರ,ಮ ನುಸುಳುವಿಕೆ ಆರಂಭವಾಯಿತು.

>> ಏಜೆಂಟರ ಮೂಲಕ ಪಶ್ಚಿಮ ಬಂಗಾಳದ ಗಡಿ ಭಾಗ ಹರಿದಾಸಪುರ, ಹಿಲಿ ಮತ್ತು ತ್ರಿಪುರಾದ ಸೊನಾಮುರಾದಿಂದ ಅಕ್ರಮ ವಲಸಿಗರು ಮತ್ತು ರೋಹಿಂಗ್ಯಾ ಮುಸ್ಲಿಮರು ದೇಶದೊಳಕ್ಕೆ ನುಸುಳಿದ್ದಾರೆ.

>> ದೇಶದ ನಾಗರಿಕರ ಮೂಲಭೂತ ಮಾನವ ಹಕ್ಕಿನ ಮೇಲೆ ವಿದೇಶಿ ವಲಸಿಗರ ಅಕ್ರಮ ನುಸುಳುವಿಕೆಯಿಂದ ಕೆಟ್ಟ ಪರಿಣಾಮ.

>> ನಕಲಿ ಆಧಾರ್, ಪಾನ್ ಕಾರ್ಡ್‍ಗಳನ್ನು ರೋಹಿಂಗ್ಯಾ ಮುಸ್ಲಿಮರು ಪಡೆದುಕೊಂಡಿದ್ದಾರೆ.

>> ಐಎಸ್‍ಐ ಮತ್ತು ಐಸಿಸ್ ಜೊತೆಗೆ ನಿರಂತರ ಸಂಪರ್ಕಿದಲ್ಲಿದ್ದಾರೆ. ಜಮ್ಮು, ದಎಹಲಿ, ಹೈದರಾಬಾದ್, ಮೇವಾತ್‍ನಲ್ಲಿ ಸಕ್ರಿಯರಾಗಿದ್ದಾರೆ.

>> ರೋಹಿಂಗ್ಯಾಗೆ ಆಶ್ರಯ ನೀಡಿದರೆ ಈಶಾನ್ಯದಲ್ಲಿನ ಬೌದ್ಧರು ಸಿಡಿದೇಳಬಹುದು.

0
Shares
  • Share On Facebook
  • Tweet It


dalaiindialamamayanmarmodimuslimsmyanmarndarohingya


Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search