• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆ ರಿಸರ್ವೇಶನ್ ಚಾರ್ಟ್ ಯುಗಾಂತ್ಯ, ಇನ್ಮೇಲೆ ಡಿಜಿಟಲ್

TNN Correspondent Posted On September 19, 2017
0


0
Shares
  • Share On Facebook
  • Tweet It

ಬೆಂಗಳೂರು : ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಮೂರು ತಿಂಗಳಿನಿಂದ ನಡೆಸಿದ ಪ್ರಯೋಗ ಸಫಲವಾಗಿದ್ದರಿಂದ ದೇಶಾದ್ಯಂತ ರೈಲುಗಳಲ್ಲಿ ರಿಸರ್ವೇಷನ್ ಚಾರ್ಟ್ ಹಾಕುವುದಕ್ಕೆ ಇಲಾಖೆ ತಿಲಾಂಜಲಿ ಹಾಡಲಿದೆ. ಇದರಿಂದ ಪೇಪರ್ ಬಳಕೆಯನ್ನು ನಿಯಂತ್ರಿಸಿದಂತಾಗುತ್ತದೆ ಎಂದು ರೈಲ್ವೆ ಇಲಾಖೆ ಕಾರಣ ನೀಡಿದೆ.

ನ.8,2016ರಿಂದ ಬೆಂಗಳೂರು ವಿಭಾಗದಲ್ಲಿ ಚಾರ್ಟ್‍ಗಾಗಿ ಪೇಪರ್ ಬಳಸುವುದನ್ನು ಕೈಬಿಡಲಾಗಿತ್ತು. ಪರ್ಯಾಯವಾಗಿ ಎಸ್‍ಎಮ್‍ಎಸ್, ನಿಲ್ದಾಣಗಳಲ್ಲಿ ಡಿಜಿಟಲ್ ಡಿಸ್ಪ್ಲೇ ಚಾರ್ಟ್‍ಗಳು, ಸಹಾಯವಾಣಿ 139ನಲ್ಲಿ ತುರ್ತು ಸ್ಪಂದನೆ ಮಾರ್ಗಗಳನ್ನು ಪ್ರಯಾಣಿಕರ ಅನುಕೂಲಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ 60 ಲಕ್ಷ ರೂ. ಇಲಾಖೆಗೆ ಉಳಿತಾಯವಾಗಿದೆ ಎಂದು ಬೆಂಗಳೂರು ವಿಭಾಗದ ವಾಣಿಜ್ಯ ವ್ಯವಸ್ಥಾಪಕ ಶ್ರೀಧರ ಮೂರ್ತಿ ತಿಳಿಸಿದ್ದಾರೆ.

ಯಶವಂತಪುರ ನಿಲ್ದಾಣದಿಂದ ಹೊರಡುವ ರೈಲುಗಳಲ್ಲಿಯೂ ಪ್ರಯೋಗ ನಡೆಸಲಾಗಿತ್ತು.

ಬರ್ತ್ ಖಾತ್ರಿಯಾದರೆ ಟಿಕೆಟ್‍ನಲ್ಲಿಯೇ ಸೀಟಿನ ಸಂಖ್ಯೆ ಉಲ್ಲೇಖ. ಇಲ್ಲವಾದಲ್ಲಿ ವೇಟಿಂಗ್ ಪ್ರಯಾಣಿಕರಿಗೆ ಖಾತ್ರಿಯಯಾದ ಕೂಡಲೇ ಎಸ್‍ಎಮ್‍ಎಸ್‍ನಿಂದ ಮಾಹಿತಿ, ಖಾತ್ರಿ ಕುರಿತು ತಿಳಿಯಲು 24 ಗಂಟೆ ಸೇವೆಯ ಸಹಾಯವಾಣಿ 139 ಪರ್ಯಾಯ ಮಾರ್ಗಗಳನ್ನು ರೈಲ್ವೆ ವ್ಯವಸ್ಥೆ ಮಾಡಿತ್ತು. ಮುಂಬೈನ ಶಿವಾಜಿ ಛತ್ರಪತಿ ಟರ್ಮಿನಸ್, ಚೆನ್ನೈನ ಸೆಂಟ್ರಲ್, ಕೋಲ್ಕತಾದ ಹೌರಾ ರೈಲ್ವೆ ನಿಲ್ದಾಣ, ದೆಹಲಿಯ ಹಜರತ್ ನಿಜಾಮುದ್ದೀನ್ ನಿಲ್ದಾಣಗಳಲ್ಲಿಯೂ ಪ್ರಾಯೋಗಿಕವಾಗಿ ರಿಸರ್ವೇಷನ್ ಚಾರ್ಟ್ ಬಳಕೆ ನಿಲ್ಲಿಸಲಾಗಿತ್ತು.

0
Shares
  • Share On Facebook
  • Tweet It


bengaluruchartrailwayreservation


Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
You may also like
ತೃತೀಯ ಲಿಂಗಿಗಳ ಅಭ್ಯುದಯ ನೀತಿಗೆ ಸಂಪುಟ ಅಸ್ತು
October 27, 2017
ಸಿಐಡಿ ಕ್ಲೀನ್‍ಚಿಟ್ ಪಡೆದಿದ್ದ ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐನಿಂದ ಪ್ರಕರಣ ದಾಖಲು
October 27, 2017
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸೋಲಿಸಿದ ರಮ್ಯ, ಟ್ವೀಟ್ ಹೆಚ್ಚಳಕ್ಕೆ ಕಳ್ಳದಾರಿ?
October 22, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search