ಪದ್ಮನಾಭಸ್ವಾಮಿ ದೇವಾಲಯಕ್ಕೆ ಯೇಸುದಾಸ್ ಭೇಟಿ, ಅನುಮತಿ ನೀಡಿದ ದೇವಾಲಯ
Posted On September 20, 2017
0
ತಿರುವನಂತಪುರ: ವಿಜಯ ದಶಮಿ ಹಿನ್ನೆಲೆಯಲ್ಲಿ ಖ್ಯಾತ ಹಿನ್ನೆಲೆ ಗಾಯಕ ಕೆ.ಜೆ. ಯೇಸುದಾಸ್ ಅವರು ಕೇರಳದ ಅನಂತ ಪದ್ಮನಾಭಸ್ವಾಮಿ ದೇವಾಲಯಕ್ಕೆ ಸೆ.30ರಂದು ಭೇಟಿ ಮಾಡಲಿದ್ದಾರೆ.
ಭೇಟಿ ಮಾಡುವ ಕುರಿತು ದೇವಾಲಯದ ಆಡಳಿತ ಮಂಡಳಿಗೆ ಯೇಸುದಾಸ್ ಮನವಿ ಮಾಡಿದ್ದಲ್ಲದೇ, ತಮಗೆ ಹಿಂದುತ್ವದಲ್ಲಿ ನಂಬಿಕೆ ಇದೆ ಎಂದೂ ಸಹ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಭೇಟಿ ನೀಡುವುದಕ್ಕೆ ದೇವಾಲಯ ಆಡಳಿತ ಮಂಡಳಿ ಸಹ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.
“ಯೇಸುದಾಸ್ ಅವರು ಕ್ರೈಸ್ತ ಧರ್ಮೀಯರೇ ಆಗಿರಬಹುದು. ಆದರೆ ಅವರು ಹಿಂದುತ್ವದಲ್ಲಿ ನಂಬಿಕೆ ಇದೆ ಎಂದು ತಿಳಿಸಿದ್ದಾರೆ. ಹಿಂದುತ್ವದಲ್ಲಿ ನಂಬಿಕೆಯಿರುವ ಯಾರಾದರೂ ದೇವಾಲಯಕ್ಕೆ ಭೇಟಿ ನೀಡಬಹುದು. ಹಾಗಾಗಿ ಅವರಿಗೆ ಅನುಮತಿ ನೀಡಲಾಗಿದೆ” ದೇವಾಲಯದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.
Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
February 12, 2026









