• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವೈದ್ಯರ ಪ್ರಮಾದಕ್ಕೆ ಮೆದುಳು ರೋಗದಿಂದ ಬಳಲುತ್ತಿರುವ ದಿವ್ಯಾಳಿಗೆ ನೆರವು ಬೇಕಿದೆ!

Satish Acharya Posted On September 21, 2017
0


0
Shares
  • Share On Facebook
  • Tweet It

ಭಗವಂತ ನೀನು ಹೀಗೆಕೆ ಮಾಡಿದೆ ಎಂದು ಒಂದು ಕುಟುಂಬ ಕೇಳುತ್ತದೆ. ಯಾಕೆಂದರೆ ಹಾಡುತ್ತಾ ಕುಣಿಯುತ್ತಾ ಬಾಲ್ಯ ಕಳೆಯ ಬೇಕಿದ್ದ ಬಾಲಕಿಯ ಮೆದುಳು ,ಕೈ ಕಾಲು ಸ್ವಾಧೀನ ಕಿತ್ತುಕೊಂಡು ಹಾಸಿಗೆ ಹಿಡಿಯುವಂತೆ ಮಾಡಿದ ಹೃದಯ ವಿದ್ರಾವಕ ಘಟನೆ ನೋಡಿದರೆ ಎಂತಹವರ ಕರುಳು ಚುರುಕ್ ಎನ್ನದಿರದು.

ಎಲ್ಲಾ ಮಕ್ಕಳಂತೆ ಆಟವಾಡುತ್ತಾ , ನಲಿಯುತ್ತಾ ಶಾಲೆಯಲ್ಲಿ ಇರ ಬೇಕಾದ ದಿವ್ಯಾ (15)ಇಂದು ದೇಹ ಸ್ವಾಧೀನ ಕಳೆದುಕೊಂಡು ಬಡ ತಂದೆ ತಾಯಿಯ ಆಶ್ರಯದಲ್ಲಿ ದಿನ ಕಳೆಯ ಬೇಕಾಗಿದೆ.ಸುರತ್ಕಲ್ ಸಮೀಪದ ಚೊಕ್ಕಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಕೂಲಿ ಕಾರ್ಮಿಕ ಹರೀಶ್ ಪೂಜಾರಿ ದಂಪತಿಗಳ ಪ್ರಥಮ ಪುತ್ರಿ ದಿವ್ಯಾ ಹುಟ್ಟು ಸಂದರ್ಭ ಆಸ್ಪತ್ರೆಯಲ್ಲಿ ಆದ ಪ್ರಮಾದಕ್ಕೆ ದಿವ್ಯಾಳ ತಂದೆ ತಾಯಿ ಮಾತ್ರವಲ್ಲ, ಸ್ವತಃ ಅಂಗವೈಕಲ್ಯಕ್ಕೆ ಒಳಗಾಗಿ ಹೂವಿನಂತಹ ಬಾಳನ್ನು ದಿವ್ಯಾ ಕಳೆದುಕೊಂಡಿದ್ದಾಳೆ.

ಒಂದೆಡೆ ನರದ ಸಮಸ್ಯೆಯಿಂದ ಮೆದುಳು ಸ್ವಾಧೀನ ಕಳೆದುಕೊಂಡಿದ್ದರೆ ,ಇನ್ನೊಂದೆಡೆ ಕೈಕಾಲು ಸ್ವಾಧೀನವಿಲ್ಲದೆ ಇನ್ನೊಬ್ಬರ ನೆರವಿಲ್ಲದೆ ಓಡಾಡಲೂ ಆಗದ ಸ್ಥಿತಿಯಲ್ಲಿದ್ದಾಳೆ. ಮುಖದಲ್ಲಿ ಸದಾ ನಿಷ್ಕಲ್ಮಶ ನಗು. ತಂದೆ ತಾಯಿ , ಅಕ್ಕ ಎಂದು ಹೇಳುವುದನ್ನು ಬಿಟ್ಟರೆ ಬೇರೆ ಮಾತು ಬಾರದು. ಕೇವಲ ನಗುವಿನಲ್ಲಿಯೇ ಸಂತಸ ವ್ಯಕ್ತ ಪಡಿಸುತ್ತಾಳೆ.

ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿರುವುದರಿಂದ ಆಸ್ಪತ್ರೆಗೆ ನಿತ್ಯ ಹೋಗುವುದು ತಪ್ಪದು. ಒಂದು ಸಲ ಆಸ್ಪತ್ರೆಯ ಖರ್ಚು ಇಪ್ಪತ್ತು ಮೂವತ್ತು ಸಾವಿರ ರೂಪಾಯಿಗಳು. ಹರೀಶ್ ಅವರು ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದು ಇಬ್ಬರು ಪುತ್ರಿಯರನ್ನು ಸಲಹುವ ಜವಾಬ್ದಾರಿಯಿದೆ. ಸಾವಿರ ಸಾವಿರ ರೂಪಾಯಿಗಳನ್ನು ಖರ್ಚು ಮಾಡಿ ಚಿಕಿತ್ಸೆ ನೀಡುವ ಸ್ಥಿತಿಯಲ್ಲಿಲ್ಲ. ಈಗಾಗಲೇ ಲಕ್ಷಾಂತರ ಕೈ ಸಾಲ ಮಾಡಿ ಮಗಳಿಗೆ ಚಿಕಿತ್ಸೆ ಕೊಡಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ದಾನಿಗಳ , ಸಂಘ ಸಂಸ್ಥೆಗಳ ನೆರವು ಅಗತ್ಯವಿದೆ. ಸಹಾಯ ಮಾಡಲಿಚ್ಚಿಸುವವರು ದಿವ್ಯ ಎಂ.ಜಿ.ತುಳಸಿ ,Kulur Branch ಕಾರ್ಪೋರೇಶನ್ ಬ್ಯಾಂಕ್ ಖಾತೆ ಸಂಖ್ಯೆ 520101000001755 ಗೆ ನೀಡ ಬಹುದು. IFSC CODE: CORP0003140

0
Shares
  • Share On Facebook
  • Tweet It


Helping hand to Divya


Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Satish Acharya January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Satish Acharya January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search