• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವೈದ್ಯರ ಪ್ರಮಾದಕ್ಕೆ ಮೆದುಳು ರೋಗದಿಂದ ಬಳಲುತ್ತಿರುವ ದಿವ್ಯಾಳಿಗೆ ನೆರವು ಬೇಕಿದೆ!

Satish Acharya Posted On September 21, 2017
0


0
Shares
  • Share On Facebook
  • Tweet It

ಭಗವಂತ ನೀನು ಹೀಗೆಕೆ ಮಾಡಿದೆ ಎಂದು ಒಂದು ಕುಟುಂಬ ಕೇಳುತ್ತದೆ. ಯಾಕೆಂದರೆ ಹಾಡುತ್ತಾ ಕುಣಿಯುತ್ತಾ ಬಾಲ್ಯ ಕಳೆಯ ಬೇಕಿದ್ದ ಬಾಲಕಿಯ ಮೆದುಳು ,ಕೈ ಕಾಲು ಸ್ವಾಧೀನ ಕಿತ್ತುಕೊಂಡು ಹಾಸಿಗೆ ಹಿಡಿಯುವಂತೆ ಮಾಡಿದ ಹೃದಯ ವಿದ್ರಾವಕ ಘಟನೆ ನೋಡಿದರೆ ಎಂತಹವರ ಕರುಳು ಚುರುಕ್ ಎನ್ನದಿರದು.

ಎಲ್ಲಾ ಮಕ್ಕಳಂತೆ ಆಟವಾಡುತ್ತಾ , ನಲಿಯುತ್ತಾ ಶಾಲೆಯಲ್ಲಿ ಇರ ಬೇಕಾದ ದಿವ್ಯಾ (15)ಇಂದು ದೇಹ ಸ್ವಾಧೀನ ಕಳೆದುಕೊಂಡು ಬಡ ತಂದೆ ತಾಯಿಯ ಆಶ್ರಯದಲ್ಲಿ ದಿನ ಕಳೆಯ ಬೇಕಾಗಿದೆ.ಸುರತ್ಕಲ್ ಸಮೀಪದ ಚೊಕ್ಕಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಕೂಲಿ ಕಾರ್ಮಿಕ ಹರೀಶ್ ಪೂಜಾರಿ ದಂಪತಿಗಳ ಪ್ರಥಮ ಪುತ್ರಿ ದಿವ್ಯಾ ಹುಟ್ಟು ಸಂದರ್ಭ ಆಸ್ಪತ್ರೆಯಲ್ಲಿ ಆದ ಪ್ರಮಾದಕ್ಕೆ ದಿವ್ಯಾಳ ತಂದೆ ತಾಯಿ ಮಾತ್ರವಲ್ಲ, ಸ್ವತಃ ಅಂಗವೈಕಲ್ಯಕ್ಕೆ ಒಳಗಾಗಿ ಹೂವಿನಂತಹ ಬಾಳನ್ನು ದಿವ್ಯಾ ಕಳೆದುಕೊಂಡಿದ್ದಾಳೆ.

ಒಂದೆಡೆ ನರದ ಸಮಸ್ಯೆಯಿಂದ ಮೆದುಳು ಸ್ವಾಧೀನ ಕಳೆದುಕೊಂಡಿದ್ದರೆ ,ಇನ್ನೊಂದೆಡೆ ಕೈಕಾಲು ಸ್ವಾಧೀನವಿಲ್ಲದೆ ಇನ್ನೊಬ್ಬರ ನೆರವಿಲ್ಲದೆ ಓಡಾಡಲೂ ಆಗದ ಸ್ಥಿತಿಯಲ್ಲಿದ್ದಾಳೆ. ಮುಖದಲ್ಲಿ ಸದಾ ನಿಷ್ಕಲ್ಮಶ ನಗು. ತಂದೆ ತಾಯಿ , ಅಕ್ಕ ಎಂದು ಹೇಳುವುದನ್ನು ಬಿಟ್ಟರೆ ಬೇರೆ ಮಾತು ಬಾರದು. ಕೇವಲ ನಗುವಿನಲ್ಲಿಯೇ ಸಂತಸ ವ್ಯಕ್ತ ಪಡಿಸುತ್ತಾಳೆ.

ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿರುವುದರಿಂದ ಆಸ್ಪತ್ರೆಗೆ ನಿತ್ಯ ಹೋಗುವುದು ತಪ್ಪದು. ಒಂದು ಸಲ ಆಸ್ಪತ್ರೆಯ ಖರ್ಚು ಇಪ್ಪತ್ತು ಮೂವತ್ತು ಸಾವಿರ ರೂಪಾಯಿಗಳು. ಹರೀಶ್ ಅವರು ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದು ಇಬ್ಬರು ಪುತ್ರಿಯರನ್ನು ಸಲಹುವ ಜವಾಬ್ದಾರಿಯಿದೆ. ಸಾವಿರ ಸಾವಿರ ರೂಪಾಯಿಗಳನ್ನು ಖರ್ಚು ಮಾಡಿ ಚಿಕಿತ್ಸೆ ನೀಡುವ ಸ್ಥಿತಿಯಲ್ಲಿಲ್ಲ. ಈಗಾಗಲೇ ಲಕ್ಷಾಂತರ ಕೈ ಸಾಲ ಮಾಡಿ ಮಗಳಿಗೆ ಚಿಕಿತ್ಸೆ ಕೊಡಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ದಾನಿಗಳ , ಸಂಘ ಸಂಸ್ಥೆಗಳ ನೆರವು ಅಗತ್ಯವಿದೆ. ಸಹಾಯ ಮಾಡಲಿಚ್ಚಿಸುವವರು ದಿವ್ಯ ಎಂ.ಜಿ.ತುಳಸಿ ,Kulur Branch ಕಾರ್ಪೋರೇಶನ್ ಬ್ಯಾಂಕ್ ಖಾತೆ ಸಂಖ್ಯೆ 520101000001755 ಗೆ ನೀಡ ಬಹುದು. IFSC CODE: CORP0003140

0
Shares
  • Share On Facebook
  • Tweet It


Helping hand to Divya


Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Satish Acharya July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Satish Acharya July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search