• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಣೆಯಾಗಿದ್ದ ಐಟಿ ಅಧಿಕಾರಿ ಪುತ್ರ ಶರತ್ ಶವವಾಗಿ ಪತ್ತೆ

TNN Correspondent Posted On September 22, 2017
0


0
Shares
  • Share On Facebook
  • Tweet It

ಬೆಂಗಳೂರು: ನಾಪತ್ತೆಯಾಗಿದ್ದ ಐಟಿ ಇಲಾಖೆ ಅಧಿಕಾರಿ ಪುತ್ರ ಶರತ್ ಶುಕ್ರವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಈಡುಮಾಡಿದೆ. ಅಲ್ಲದೆ ಹಣಕ್ಕಾಗಿ ಶರತ್ ಸ್ನೇಹಿತರೇ ಅವರನ್ನು ಅಪಹರಿಸಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭಿಸಿದೆ.

ಕೆಲ ದಿನಗಳ ಹಿಂದೆ ಮನೆಯಿಂದ ಹೊರಗೆ ಹೋಗಿದ್ದ ಶರತ್ ಮನೆಗೆ ಬಂದಿರಲಿಲ್ಲ. ಈಗ ಕೆಂಗೇರಿ ಬಳಿಯ ದೊಡ್ಡ ಆಲದ ಮರ ಸಮೀಪದ ರಾಮೋಹಳ್ಳಿ ಕರೆಯಲ್ಲಿ ಶರತ್ ಶವ ಸಿಕ್ಕಿದೆ.

ಕೆರೆಯಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಣಕ್ಕಾಗಿ ಅಪಹರಿಸಿ, ಕೊಲೆ ಮಾಡಿ ಕೆರೆಯಲ್ಲಿ ಎಸೆದು ಹೋದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಶಾಲ್, ವಿನಯ್, ವಿಕ್ಕಿ, ಕರ್ಣ ಹಾಗೂ ಕಿರಣ್ ಬಂಧಿತರು ಎಂದು ಮೂಲಗಳು ತಿಳಿಸಿವೆ..

ಹೆಬ್ಬಾಳದ ಆದಾಯ ತೆರಿಗೆ ಕಚೇರಿಯಲ್ಲಿ ನಿರಂಜನ್ ಎಂಬವರು ಕೆಲಸ ನಿರ್ವಹಿಸುತ್ತಿದ್ದು ಉಳ್ಳಾಲದಲ್ಲಿ ವಾಸಿಸುತ್ತಿದ್ದಾರೆ. ಅವರ ಪುತ್ರ ಶರತ್ ಹೊಸ ಬೈಕ್ ಖರೀದಿಸಿದ ಕಾರಣ ಸೆ.12ರಂದು ಸಂಜೆ ಗೆಳೆಯರಿಗೆ ಸಿಹಿ ಹಂಚಿ ಬರುವೆ ಎಂದು ಹೋಗಿದ್ದ. ಬಳಿಕ ತಡರಾತ್ರಿಯಾದರೂ ಮನೆಗೆ ಬಂದಿರಲಿಲ್ಲ.

ನಂತರ ಶರತ್ ಮಾತನಾಡುತ್ತಿದ್ದ ವಿಡಿಯೋ ಒಂದು ಕುಟುಂಬಸ್ಥರಿಗೆ ರವಾನೆಯಾಗಿದ್ದು, ಅದರಲ್ಲಿ ಶರತ್, ತನ್ನನ್ನು ಯಾರೋ ಅಪಹರಣ ಮಾಡಿದ್ದು, 50 ಲಕ್ಷ ರು. ಬೇಡಿಕೆ ಇಟ್ಟಿದ್ದಾರೆ. ಪೊಲೀಸರಿಗೆ ದೂರು ನೀಡದೆ, ಹಣ ಕೊಟ್ಟು ಬಿಡಿಸಿಕೊಳ್ಳಿ ಎಂದು ತಿಳಿಸಿದ್ದರು.

ಆದರೂ ಅವರ ತಂದೆ ಸೆ.14ರಂದು ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ ಹಿನ್ನೆಲೆಯಲ್ಲಿ ಶರತ್ ಅವರನ್ನು ಕೊಲೆ ಮಾಡಿ ಕೆರೆಗೆ ಎಸೆದಿದ್ದಾರೆ ಎಂದು ತಿಳಿದುಬಂದಿದೆ.

 

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search