• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಯಾವುದೋ ಪ್ರಶ್ನೆಗೆ ಇನ್ಯಾವುದೋ ಉತ್ತರ ನೀಡುವ ರಾಹುಲ್ ಗಾಂಧಿಯಂತೆ ಆಗಿ ಬಿಟ್ರಾ ರಮಾನಾಥ ರೈ ಗಳು?

shrinatha maane Posted On September 23, 2017
0


0
Shares
  • Share On Facebook
  • Tweet It

ಭಾರತದ ಪ್ರಥಮ ಪ್ರಧಾನಿ ಎಂಬ ಮಹತ್ತರ ಜವಾಬ್ದಾರಿಯನ್ನು ಅರಿಯದೇ ತನ್ನ ಮೂರ್ಖತನದ ರೊಮ್ಯಾಂಟಿಕ್ ಐಡಿಯಾಗಳಿಂದ (ಇತಿಹಾಸಕಾರರೇ ಹೇಳಿರುವಂತೆ) ಚೀನಾ ಮುಂದೆ ತಲೆ ತಗ್ಗಿಸಿ ನಿಲ್ಲುವಂತೆ ಮಾಡಿದರಲ್ಲಾ ನೆಹರೂ! ಭಾರತೀಯರು ಎಷ್ಟು ನೋವನುಭವಿಸಿರಬೇಕು?
ಚಕ್ರವರ್ತಿಯವರು ಇದೇ ವಿಚಾರಕ್ಕೆ ಸಂಬಂಧಿಸಿದಂತೆ “ನೆಹರೂ ಪರದೆ ಸರಿಯಿತು” ಎಂಬ ಪುಸ್ತಕದಲ್ಲಿ ಹಾಗೂ ತಮ್ಮ ಭಾಷಣಗಳಲ್ಲಿ ನೆಹರೂ ಅವರನ್ನು ಪ್ರಶ್ನಿಸುತ್ತಾರೆಯೇ ಹೊರತು ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ ಪಾತ್ರದ ಬಗ್ಗೆಯಲ್ಲ.
ಚಕ್ರವರ್ತಿ ಸೂಲಿಬೆಲೆಯವರು ನೆಹರೂ ಆಡಳಿತದ ವೈಫಲ್ಯದಿಂದ ಭಾರತ ಎದುರಿಸಿದ ಅವಮಾನ, ಸಮಸ್ಯೆಗಳ ಉಗಮ, ಅನುಭವಿಸಿದ ನಷ್ಟ, ಕಳೆದುಕೊಂಡ ಭೂಮಿ, ಹೀಗೆ ಪ್ರಮುಖ ವಿಚಾರಗಳ ಬಗ್ಗೆ ಈ ಹಿಂದೆ ಎತ್ತಿರುವ ಪ್ರಶ್ನೆಗಳಿಗೆ ಸಮರ್ಥ ಉತ್ತರ ಕೊಟ್ಟಿದ್ದರೆ ರೈ ಯವರನ್ನು ಮೆಚ್ಚಬಹುದಾಗಿತ್ತು.
https://tulunadunews.com/wp-content/uploads/2017/09/whatsapp-video-2017-09-23-at-19.16.46.mp4
ಆದರೆ ನೆಹರೂ ಅವರನ್ನು ಈ ವಿಷಯದಲ್ಲಿ ಸಮರ್ಥಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದರಿತಿರುವ ರೈ ಯವರು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ನೆಹರೂ ಅವರನ್ನು ಟೀಕಿಸುವವರು ದೇಶದ್ರೋಹಿಗಳು ಎಂದು ಭಾಷಣ ಮಾಡಿ ಮಾಮರವೆಲ್ಲೋ ಕೋಗಿಲೆ ಎಲ್ಲೋ ಎಂಬಂತೆ ಸೇಫ್ ಗೇಮ್ ಆಡಿದ್ದಾರೆ..
ರಮಾನಾಥ ರೈಗಳು ಹೇಳುವ ಪ್ರಕಾರ “ಸ್ವಾತಂತ್ರ್ಯ ಹೋರಾಟಕ್ಕಾಗಿ ಹೋರಾಡಿ ಒಂದೇ ಒಂದು ದಿನ ಜೈಲಿನಲ್ಲಿದ್ದ ವ್ಯಕ್ತಿಯಾದರೂ ಸರಿ, ಅವರನ್ನು ಟೀಕಿಸುವವರು ದೇಶದ್ರೋಹಿಗಳಿಗೆ ಸಮ”.
ಇದು ಖಂಡಿತವಾಗಿಯೂ ಒಪ್ಪಿಕೊಳ್ಳುವ ಮಾತು.ಹಾಗಾದರೆ ವೀರ್ ಸಾವರ್ಕರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಅಂಡಮಾನಿನ ಜೈಲಿನಲ್ಲಿ ಚಿತ್ರ ಹಿಂಸೆ ಅನುಭವಿಸಿದವರು. ಅಂತಹವರನ್ನು ಟೀಕಿಸುತ್ತಿರುವುದು ಸ್ವತಃ  ಕಾಂಗ್ರೆಸ್ಸಿನ ಯುವರಾಜ ರಾಹುಲ್ ಗಾಂಧಿ. ಇವರಿಗೆ ದೇಶದ್ರೋಹಿಗಳ ಪಟ್ಟಿಯಲ್ಲಿ ಎಷ್ಟನೇ ಸ್ಥಾನ ಕೊಡಬಹುದು?
ಕಮ್ಯೂನಿಸ್ಟ್ ಬುದ್ಧಿಜೀವಿಗಳು ದಿನ ಬೆಳಗಾದರೆ ಸಾವರ್ಕರ್ ಅವರನ್ನು ಟೀಕಿಸುತ್ತಾರೆ. ಈ ದೇಶದ್ರೋಹಿಗಳನ್ನು ಏನು ಮಾಡಬಹುದು?
ರೈ ಯವರೇ ಇಷ್ಟೇ ಆಗಿದ್ದರೆ ನಿಮ್ಮದು ರಾಜಕೀಯ ಅಂದುಕೊಂಡು ಸುಮ್ಮನಾಗಬಹುದಿತ್ತು. ಆದರೆ ಚಕ್ರವರ್ತಿ ಸೂಲಿಬೆಲೆಯವರನ್ನು ಟೀಕಿಸುವ ಭರದಲ್ಲಿ ಕರ್ನಾಟಕ ರಾಜ್ಯದ ಒಂದು ಊರಿನ ಹೆಸರನ್ನು ಅವಮಾನಿಸಿದಿರಿ. ಸಾಲದ್ದಕ್ಕೆ ನೆರೆದಿದ್ದ ಜನರಿಂದಲೂ ಪದೇಪದೇ ಅವಮಾನಿಸಿ ಪ್ರಚಂಡ ದಿಗ್ವಿಜಯ ಸಾಧಿಸಿದಂತೆ ಗೆಲುವಿನ ನಗೆ ಬೀರಿದಿರಿ. ತಮ್ಮ ಹೆಸರು ಬಿ.ರಮಾನಾಥ ರೈ.  “ಬಿ” ಅಂದರೆ ಬೆಳ್ಳಿಪಾಡಿ ಎಂಬ ಊರಿನ ಹೆಸರು. ಅದೇ “ಬಿ”ಯನ್ನು ಉಪಯೋಗಿಸಿ ಅದೆಷ್ಟು ಅವಹೇಳನಕಾರಿ ಪದ ಪ್ರಯೋಗ ನಿಮ್ಮ ವಿರುದ್ಧವೂ ಮಾಡಬಹುದೆಂಬುದನ್ನು ಮರೆತು ಬಿಟ್ರಾ ಹೇಗೆ?
ರಮಾನಾಥ ರೈ ಗಳೇ ಈಗಾಗಲೇ ನಿಮ್ಮ ಹಿಂದೂ ವಿರೋಧಿ ನೀತಿಯಿಂದ ಸ್ವಕ್ಷೇತ್ರದಲ್ಲೇ ಜನ ರೊಚ್ಚಿಗೆದ್ದಿದ್ದಾರೆ. ಅದೂ ಸಾಲದೆಂಬಂತೆ ಸ್ವಪಕ್ಷದವರೇ ನಿಮ್ಮ ಗೃಹಮಂತ್ರಿ ಸ್ಥಾನಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಇವೆಲ್ಲದರ ಪರಿಣಾಮವೋ ಏನೋ, ನಿಮ್ಮನ್ನು ನಾಡಿಗೆ (ಗೃಹ ಸಚಿವ) ತರುವ ಬದಲು ಕಾಡಿನಲ್ಲೇ (ಅರಣ್ಯ ಸಚಿವ) ಇರಿಸಲಾಗಿದೆ.
ಬಂಟ್ವಾಳದ ನಕಲಿ ಹುಲಿ ಆದಷ್ಟು ಶೀಘ್ರದಲ್ಲಿ ವನವಾಸ ಮುಗಿಸಿ ನಾಡಿಗೆ ಬರುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥನೆ..
0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
shrinatha maane December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
shrinatha maane December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search