• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಧಾನಿ ಮೋದಿಯಿಂದ ರಾಮಾಯಣ ಕುರಿತ ಅಂಚೆ ಚೀಟಿ ಬಿಡುಗಡೆ

TNN Correspondent Posted On September 25, 2017


  • Share On Facebook
  • Tweet It

ಲಖನೌ: ಭಾರತೀಯ ಅಂಚೆ ಇದೇ ಮೊದಲ ಬಾರಿಗೆ ರಾಮಯಣದ ಅಂಶ ಸಾರುವ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ.

ಇತ್ತೀಚೆಗೆ ವಾರಣಾಸಿಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ತುಳಸಿ ಮಾನಸ ಮಂದಿರದಲ್ಲಿ ಅಂಚೆ ಚೀಟಿ ಬಿಡುಗಡೆಗೊಳಿಸಿದ್ದಾರೆ.

ಬಳಿಕ ಮಾತನಾಡಿ, “ಭಗವಾನ್ ರಾಮನ ಜೀವನ ಶೈಲಿ ಹಾಗೂ ಅವರ ಜೀವನ ಶೈಲಿ ಎಲ್ಲರಿಗೂ ಸ್ಫೂರ್ತಿದಾಯಕ. ಮಹಾತ್ಮ ಗಾಂಧೀಜಿ ಅವರು ಸಹ ರಾಮನ ತತ್ತ್ವಗಳನ್ನು ಅಳವಡಿಸಿಕೊಂಡಿದ್ದರು’ ಎಂದು ತಿಳಿಸಿದರು.

ನಾನು ಪ್ರಧಾನಿಯ ನಿವಾಸ ಅಥವಾ ವಿಜ್ಞಾನ ಮಂದಿರದಲ್ಲಿ ಅಂಚೆ ಚೀಟಿಗಳನ್ನು ಬಿಡುಗಡೆಗೊಳಿಸಬಹುದಾಗಿತ್ತು. ಆದರೆ ನವರಾತ್ರಿಯಂಥ ಸಂದರ್ಭದಲ್ಲಿ ತುಳಸಿ ಮಾನಸ ಮಂದಿರದಲ್ಲಿ ಬಿಡುಗಡೆ ಮಾಡುವುದಕ್ಕಿಂತ ಬೇರೆ ಪ್ರಾಶಸ್ತ್ಯವಾದ ಸ್ಥಳ ಇಲ್ಲ. ಹಾಗಾಗಿ ದೇವಾಲಯದಲ್ಲಿ ಬಿಡುಗಡೆಗೊಳಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನವರಾತ್ರಿ ಹಾಗೂ ವಿಜಯ ದಶಮಿ ರಾಮನ ಜೀವನದಲ್ಲಿ ಮಹತ್ತರ ಪಾತ್ರ ನಿರ್ವಹಿಸಿರುವುದರಿಂದ, ಈ ಸಂದರ್ಭದಲ್ಲಿ ರಾಮಾಯಣದ ಕುರಿತ ಅಂಚೆ ಚೀಟಿ ಬಿಡುಗಡೆಗೊಳಿಸುತ್ತಿರುವುದು ಸಂತಸ ತಂದಿದೆ ಎಂದಿದ್ದಾರೆ.

ಅಂಚೆ ಚೀಟಿಗಳು ಬರೀ ಚೀಟಿಗಳಲ್ಲ ಅಥವಾ ಪತ್ರ ತಲುಪಲು ಇರುವ ಗುರುತುಗಳಲ್ಲ. ಅವು ದೇಶದ ಇತಿಹಾಸ, ಪರಂಪರೆ, ಸಂಪ್ರದಾಯ, ಮೌಲ್ಯಗಳನ್ನು ಸಾರುವ ಪ್ರತೀಕಗಳು ಎಂದು ಅಭಿಪ್ರಾಯಪಟ್ಟಿದ್ದಾರೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search