• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ದೇವಾಲಯ ತೆರವು, ಅದೇ ಮಸೀದಿಯಾಗಿದ್ದರೆ ಸಿದ್ದರಾಮಯ್ಯನವರು ಸುಮ್ಮನಿರುತ್ತಿದ್ದರೆ?

TNN Correspondent Posted On September 26, 2017
0


0
Shares
  • Share On Facebook
  • Tweet It

ಗೋವಾದ ಬೈನಾ ಬೀಚ್ ನಲ್ಲಿ ಮತ್ತೆ ಜೆಸಿಬಿ ಸದ್ದು ಕೇಳಿಸುತ್ತಿದೆ. ಕನ್ನಡಿಗರು ಅನಾಥರಾಗಿದ್ದಾರೆ. ಕನ್ನಡಿಗರು ಬಿಡಿ, ದೇವರಿರುವ ದೇವಾಲಯಗಳಿಗೇ ರಕ್ಷಣೆ ಇಲ್ಲದಂತಾಗಿದೆ.

ಇಷ್ಟಾದರೂ ಯಾರೊಬ್ಬರೂ ಬಾಯಿಬಿಡುತ್ತಿಲ್ಲ. ರಾಜ್ಯದ ಸಿದ್ದರಾಮಯ್ಯನವರೂ ಒಂದೂ ಮಾತನಾಡುತ್ತಿಲ್ಲ. ಕನ್ನಡಿಗರ, ಹಿಂದೂಗಳ, ದೇವಾಲಯಗಳ ರಕ್ಷಣೆ ಬಗ್ಗೆ ಗೋವಾ ಮುಖ್ಯಮಂತ್ರಿ ಜತೆ ಮಾತನಾಡುತ್ತಿಲ್ಲ.

ಏಕೆ…

ಏಕೆಂದರೆ ಅವರೆಲ್ಲರೂ ಹಿಂದೂಗಳು. ದೇವಾಲಯ ಹಿಂದೂಗಳವು, ದೇವರು ಹಿಂದೂ. ಅದೇ ಮಸೀದಿಯಾಗಿದ್ದರೆ, ಅಲ್ಲಿರುವರೆಲ್ಲರೂ ಮುಸ್ಲಿಮರು, ಅಲ್ಪಸಂಖ್ಯಾತರು ಆಗಿದ್ದರೆ ಇದೇ ಸಿದ್ದರಾಮಯ್ಯನವರು ಸುಮ್ಮನಾಗಿರುತ್ತಿದ್ದರೆ?

ಪರ ರಾಜ್ಯ ಬಿಡಿ ರಾಜ್ಯದಲ್ಲೇ, ಹಿಂದೂಗಳ, ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಆದರೂ ಸಿದ್ದರಾಮಯ್ಯನವರು ಯಾವುದೇ ಕ್ರಮ ಕೈಗೊಂಡಿಲ್ಲ.

ಆದರೆ ಇದೇ ಮುಖ್ಯಮಂತ್ರಿಯವರು ಹರಿಯಾಣದಲ್ಲಿ ಜುನೈದ್ ಖಾನ್ ಎಂಬ ಮುಸ್ಲಿಂ ಯುವಕನ ಹತ್ಯೆಯಾದರೆ ಕೇಂದ್ರ ಸರಕಾರದತ್ತ ಬೆರಳು ಮಾಡುತ್ತಾರೆ. ಮುಸ್ಲಿಮರ ಹತ್ಯೆಯಾದರೆ ಕರಳು ಚುರುಕ್ ಎನ್ನುತ್ತದೆ.

ಇದೇ ಇಬ್ಬಂದಿತನವೇ ಮುಖ್ಯಮಂತ್ರಿಯವರ ಬಂಡವಾಳವಾಗಿದೆ. ರಾಜ್ಯದಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾದರೂ ಅದಕ್ಕೆ ಸಿದ್ಧಾಂತವೇ ಕಾರಣ ಎಂದು ಷರಾ ಬರೆಯುತ್ತಾರೆ.

ರಾಜ್ಯದ ನೇತೃತ್ವ ವಹಿಸಿಕೊಂಡವರು, ಜಾತ್ಯತೀತ, ಧರ್ಮಾತೀತರಾಗಿ ನಡೆದುಕೊಳ್ಳಬೇಕು. ರಾಜ್ಯದ ಜನರ ರಕ್ಷಣೆ ಮಾಡಬೇಕು. ಆದರೆ ನಮ್ಮ ಮುಖ್ಯಮಂತ್ರಿ ಮಹೋದಯರು ಮಾತ್ರ, ಜಾತಿ, ಧರ್ಮದ ಆಧಾರದ ಮೇಲೆ ಯೋಜನೆ ಜಾರಿಗೊಳಿಸಲು ಮುಂದಾಗುತ್ತಾರೆ. ಇದಕ್ಕೆ ಶಾದಿ ಭಾಗ್ಯದಂತಹ ಯೋಜನೆಗಳೇ ಸಾಕ್ಷಿ.

ಗೋವಾದಲ್ಲಿ ಕನ್ನಡಗಿರ, ಹಿಂದೂ ದೇವಾಲಯಗಳ ಧ್ವಂಸಗೊಳಿಸಲಾಗುತ್ತಿದೆ. ಮುಖ್ಯಮಂತ್ರಿಯವರೇ ನಿಮಗೆ ಅಂತಃಕರಣ ಎಂಬುದಿದ್ದರೆ ಮೊದಲು ಅವರನ್ನು ರಕ್ಷಿಸಿ.

 

-ನವೀನ್ ಪೆಲ್ಲತಡ್ಕ, ಪತ್ರಿಕೋದ್ಯಮ ವಿದ್ಯಾರ್ಥಿ

 

 

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search