• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿಶ್ವಸಂಸ್ಥೆಯಲ್ಲಿ ಭಾರತದಿಂದ ಪಾಕಿಸ್ತಾನಕ್ಕೆ ಮುಖಭಂಗ: ಭಾರತದ ಟೊಮ್ಯಾಟೋ ಬೇಡ ಎಂದ ಪಾಕಿ

TNN Correspondent Posted On September 27, 2017
0


0
Shares
  • Share On Facebook
  • Tweet It

ಈ ಪಾಕಿಸ್ತಾನವೇ ಹೀಗೆ, ನೇರಾ ನೇರ ಯುದ್ಧ ಮಾಡುವುದಿಲ್ಲ. ಹುರುಳಿರುವ ವಾದ ಮಾಡುವುದಿಲ್ಲ. ಬೆಟ್ಟಕ್ಕೆ ನಾಯಿ ಬೊಗಳಿ ಸತ್ತಿತು ಎಂಬ ಮಾತಿನಂತೆ ಭಾರತದ ವಿರುದ್ಧ ಆಗಾಗ ಗುಟುರು ಹಾಕುತ್ತದೆ. ಗುರ್ ಎನ್ನುತ್ತದೆ. ನಾವೇನು ಸುಮ್ಮನೆ ಇರುತ್ತೇವೆಯೇ? ಪಾಕಿಸ್ತಾನದ ತಲೆಗೊಂದು ಮೊಟಕುತ್ತೇವೆ. ಆಗ ಪಾಕಿಸ್ತಾನ ತೋಯ್ದ ಕೋಳಿಯಂತಾಗುತ್ತದೆ. ಅದಾದ ಬಳಿಕ ಮತ್ತೆ ಕೈಲಾಗದ ನರಿಯಂತೆ ಮೆಲ್ಲಗೆ ಹಿಂಬಾಗಿಲಿನಿಂದ ಏನು ಕುತಂತ್ರ ಮಾಡಬೇಕು ಎಂದು ಹೊಂಚು ಹಾಕುತ್ತದೆ.

ಈ ಅದೇ ಪಾಕಿಸ್ತಾನ ಎಂಬ ಕಳ್ಳಬೆಕ್ಕು ಮತ್ತೊಂದು ಹೊಂಚು ಹಾಕಿದೆ.

ಹೌದು, ವಿಶ್ವಸಂಸ್ಥೆಯಲ್ಲಿ ಭಾರತದಿಂದ ಭಾರಿ ಮುಖಭಂಕ್ಕೀಡಾಗಿರುವ ಪಾಕಿಸ್ತಾನ ಈಗ ಭಾರತದಿಂದ ಟೊಮ್ಯಾಟೊ ಆಮದು ಮಾಡಿಕೊಳ್ಳುವುದಿಲ್ಲ ಎಂಬ ಮೊಂಡು ವಾದ ಮುಂದಿಟ್ಟಿದೆ. ಈ ಕುರಿತು ಆಹಾರ ಸಚಿವ ಸಿಕಂದರ್ ಹಯಾತ್ ಬೋಸನ್ ತಿಳಿಸಿದ್ದಾರೆ.

ಆದರೆ ಇಂಥ ಮೊಂಡು ಹಾಗೂ ಅಹಂಕಾರದ ನಿರ್ಧಾರದಿಂದ ಪಾಕಿಸ್ತಾನಕ್ಕೇ ನಷ್ಟ. ಏಕೆಂದರೆ ಸದ್ಯ ಪಾಕಿಸ್ತಾನದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೊ, ಈರುಳ್ಳಿ ಬೆಲೆ 300 ರೂಪಾಯಿಗೆ ಏರಿಕೆಯಾಗಿತ್ತು. ಇದನ್ನು ಸರಿದೂಗಿಸಲು ಪಾಕಿಸ್ತಾನ ಭಾರತದಿಂದ ಟೊಮ್ಯಾಟೊ, ಈರುಳ್ಳಿ ಆಮದು ಮಾಡಿಕೊಂಡು, 150-160 ರೂಪಾಯಿಗೆ ಕೆ.ಜಿ.ಯಂತೆ ಮಾರಾಟ ಮಾಡುತ್ತಿತ್ತು.

ಆದರೆ ಈಗ ಯಾವುದೋ ಕಾರಣಕ್ಕೆ ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಆದರೆ ಇದರಿಂದ ಪಾಕಿಸ್ತಾನಕ್ಕೇ ನಷ್ಟ ಎಂಬದನ್ನು ನೆರೆರಾಷ್ಟ್ರ ಮರೆತಂತಿದೆ. ಆದಾಗ್ಯೂ, ಈ ಆಮದು ಸ್ಥಗಿತದಿಂದ ಭಾರತಕ್ಕೇನು ನಷ್ಟವಿಲ್ಲದಿದ್ದರೂ, ದ್ವಿಪಕ್ಷೀಯ ಸಂಬಂಧ ಬಿಗಡಾಯಿಸುವ ಸಾಧ್ಯತೆಯಿದೆ.

 

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search