• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಶೇಖರ್ ಕೋಟ್ಯಾನ್ ದಕ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ?

Satish Acharya Posted On September 30, 2017
0


0
Shares
  • Share On Facebook
  • Tweet It

ಪರಮೇಶ್ವರ್ ಅವರು ಮುಂದಿನ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಲಿ, ಭವಿಷ್ಯದಲ್ಲಿ ರಾಷ್ಟ್ರಪತಿಯಾಗಲಿ ಎಂದು ಹಾರೈಸಿದ್ರು ಬಿ ಜನಾರ್ಧನ ಪೂಜಾರಿ. ಹಾಗೇ ಪ್ರಧಾನಿ ಕೂಡ ಆಗಲಿ ಎಂದು ಹಾರೈಸಬಹುದಿತ್ತೇನೋ, ಆದರೆ ಹಾಗೆ ಹಾರೈಸಿದಂತೆ ಕಾಣಲಿಲ್ಲ. ಇದರ ಅರ್ಥ ಇಷ್ಟೇ. ಪ್ರಧಾನ ಮಂತ್ರಿಯಾಗುವುದಾದರೆ ಮತ್ತೆ ಕಾಂಗ್ರೆಸ್ ರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಬೇಕು. ಆ ಬಗ್ಗೆ ಪೂಜಾರಿಯವರಿಗೆ ಅನುಮಾನಗಳಿರಬಹುದು. ಇನ್ನು ಒಂದು ವೇಳೆ ಯಾವತ್ತಾದರೂ ಬಂದ್ರೂ ಕೂಡ ರಾಹುಲ್ ಗಾಂಧಿಯವರಷ್ಟು ಅರ್ಹ ವ್ಯಕ್ತಿ ಕಾಂಗ್ರೆಸ್ ನಲ್ಲಿ ಬೇರೆ ಯಾರೂ ಇಲ್ಲದೇ ಇರುವುದರಿಂದ ಪೂಜಾರಿಯವರು ಪರಮೇಶ್ವರ್ ಪ್ರಧಾನಿಯಾಗಲಿ ಎಂದು ಹೇಳಿರಲಿಕ್ಕಿಲ್ಲ.
ಪರಮೇಶ್ವರ್ ಅವರ ಮೇಲೆ ಪೂಜಾರಿಯವರಿಗೆ ಎಷ್ಟು ಪ್ರೀತಿ ಇದೆಯೋ ಗೊತ್ತಿಲ್ಲ, ಆದರೆ ಅವರಿಗೆ ಆದಷ್ಟು ಬೇಗ ಸಿದ್ಧರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು ಎನ್ನುವ ಆಸೆ ಇದೆ. ಆದ್ದರಿಂದ ಚುನಾವಣೆ ಆದ ಬಳಿಕ ಶಾಸಕಾಂಗ ಸಭೆಯಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎನ್ನುವ ಸಲಹೆ ಕೇಳಿ ನಂತರ ಅದಕ್ಕೆ ಹೈಕಮಾಂಡ್ ಒಪ್ಪಿಗೆ ಸಿಗಬೇಕು ಎನ್ನುವುದು ಗೊತ್ತಿದ್ದರೂ ಪೂಜಾರಿಯವರು ಪರಮೇಶ್ವರ್ ಸಿಎಂ ಆಗಲಿ ಎನ್ನುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಇನ್ನು ಜನಾರ್ಧನ ಪೂಜಾರಿಯವರಿಗೆ ಮುಂದಿನ ಬಾರಿ ಲೋಕಸಭೆಗೆ ಕಾಂಗ್ರೆಸ್ ಟಿಕೇಟ್ ಸಿಗುವುದು ನೂರಕ್ಕೆ ನೂರು ಸಾಧ್ಯವಿಲ್ಲದಿರುವುದರಿಂದ ಮತ್ತು ಪ್ರಸ್ತುತ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ಸಿನಿಂದ ಲೋಕಸಭೆಗೆ ಸಮರ್ಥ ಅಭ್ಯರ್ಥಿ ಇಲ್ಲದಿರುವುದರಿಂದ ಕಾಂಗ್ರೆಸ್ ಹೊಸ ಮುಖವೊಂದಕ್ಕೆ ಗಾಳ ಹಾಕಿದೆ. ಅವರ ಹೆಸರು ರಾಜಶೇಖರ್ ಕೋಟ್ಯಾನ್.
ಸಿನೆಮಾ ನಟ, ನಿರ್ಮಾಪಕ, ಬಿಲ್ಲವ ಮುಖಂಡ ರಾಜಶೇಖರ್ ಕೋಟ್ಯಾನ್ ಅವರನ್ನು ವಿದ್ಯುಕ್ತವಾಗಿ ಕಾಂಗ್ರೆಸ್ ಗೆ ಸೇರಿಸಿಕೊಂಡಿರುವ ಕಾಂಗ್ರೆಸ್ ಅವರಿಗೆ ದಕ್ಷಿಣ ಕನ್ನಡ ಲೋಕಸಭೆಗೆ ಟಿಕೇಟ್ ಕೊಡಲು ನಿರ್ಧರಿಸಿದೆ ಎಂದು ಪಕ್ಷದ ಒಳಗಿನ ಮೂಲಗಳಿಂದ ತಿಳಿದು ಬಂದಿದೆ. ಭರ್ಥಿ ಒಂದೂವರೆ ವರ್ಷ ಲೋಕಸಭಾ ಚುನಾವಣೆಗೆ ಸಮಯ ಇರುವುದರಿಂದ ಈಗಿನಿಂದಲೇ ತಯಾರಿ ನಡೆಸಲು ಅವರಿಗೆ ಸೂಚನೆ ಕೊಡಲಾಗಿದೆ ಎಂದು ಹೇಳಲಾಗುತ್ತಿದೆ. ಜನಾರ್ಧನ ಪೂಜಾರಿ ಬಿಟ್ಟು ಹೋಗಲಿರುವ ಸ್ಥಾನಕ್ಕೆ ರಾಜಶೇಖರ್ ಕೋಟ್ಯಾನ್ ಎಷ್ಟರಮಟ್ಟಿಗೆ ತಮ್ಮ ಪ್ರಭಾವ ತೋರಿಸಬಲ್ಲರು ಎನ್ನುವುದು ಬರುವ ದಿನಗಳಲ್ಲಿ ಗೊತ್ತಾಗಲಿದೆ. ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾಗಿ ಕಾಂಗ್ರೆಸ್ ನಿಂದ ಯಾರೂ ಗೆಲ್ಲದೆ ಎರಡು ದಶಕಗಳ ಮೇಲಾಗಿದೆ. ಹೀಗಿರುವಾಗ ಈಗ ಮತ್ತೆ ಜನರು ಕಾಂಗ್ರೆಸ್ಸಿಗೆ ಮಣೆ ಹಾಕುತ್ತಾರಾ ಎನ್ನುವುದು ಕಾಣುವ ಪ್ರಶ್ನೆ. ಮುಂದಿನ ಬಾರಿಯೂ ನರೇಂದ್ರ ಮೋದಿಯವರೇ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿರುವುದರಿಂದ ಮತ್ತು ಉಳಿದ ಒಂದೂವರೆ ವರ್ಷದಲ್ಲಿ ರಾಷ್ಟ್ರದ ಆರ್ಥಿಕ ಸ್ಥಿತ್ಯಂತರಗಳನ್ನು ಮರಳಿ ಟ್ರಾಕ್ ಗೆ ತಂದರೆ ಮೋದಿಯವರನ್ನು ಹಿಡಿಯುವುದು ಕಷ್ಟ. ಆಗ ಇದೇ ಫಲಿತಾಂಶ ಪುನರಾವರ್ತನೆ ಆದರೂ ಆಗಬಹುದು.

0
Shares
  • Share On Facebook
  • Tweet It


Rajshekhar Kotian


Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Satish Acharya March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Satish Acharya March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search