• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಡೋಕ್ಲಾಂ ಗಡಿ ಬಿಕ್ಕಟ್ಟು ಬಳಿಕ ಮತ್ತೆ ಭಾರತದೊಂದಿಗೆ ಸ್ನೇಹ ಬೆಸೆಯಲು ಚೀನಾ ಇಂಗಿತ

TNN Correspondent Posted On October 1, 2017
0


0
Shares
  • Share On Facebook
  • Tweet It

ದೆಹಲಿ: ಸಿಕ್ಕಿಂನ ಡೊಕ್ಲಾಂ ಗಡಿಯಲ್ಲಿ 73 ದಿನ ಸೇನೆ ನಿಯೋಜಿಸಿ ಉಪಟಳ ಮಾಡಿದ್ದ ಚೀನಾಗೆ ಈಗ ಬುದ್ಧಿ ಬಂದಿದ್ದು, ಭಾರತದೊಂದಿಗೆ ಮತ್ತೆ ಹೊಸ ಅಧ್ಯಾಯದ ರೂಪದಲ್ಲಿ ಸ್ನೇಹ ಹಸ್ತ ಚಾಚಿದೆ.

ಭಾರತದಲ್ಲಿರುವ ಚೀನಾ ರಾಯಭಾರಿ ಲುವೋ ಜಾವೋಹೈ, ಚೀನಾ ಹಾಗೂ ಭಾರತ ಹಳೆಯ ಮುನಿಸು ಮರೆತು ಸ್ನೇಹದ ಹೊಸ ಅಧ್ಯಾಯ ತೆರೆಯಲು ಇದು ಸಕಾಲ ಎಂದು ಹೇಳಿದ್ದಾರೆ.

ಭಾರತ ಹಾಗೂ ಚೀನಾ ಹಲವು ಕ್ಷೇತ್ರಗಳಲ್ಲಿ ಏಳಿಗೆ ಸಾಧಿಸಲು ದ್ವಿಪಕ್ಷೀಯ ಸಂಬಂಧ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಈ ದಿಸೆಯಲ್ಲಿ ಎರಡೂ ದೇಶಗಳು ಮತ್ತೆ ಒಂದಾಗಿ ಅಭಿವೃದ್ಧಿ ಪಥದೆಡೆಗೆ ನಡೆಯುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಆದಾಗ್ಯೂ, ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಪ್ರಧಾನಿ ಕ್ಸಿ ಜಿನ್ ಪಿಂಗ್ ನಡುವೆ ಉತ್ತಮವಾಗಿ ಮಾತುಕತೆ ನಡೆದಿದ್ದು, ಇದು ಉಭಯ ರಾಷ್ಟ್ರಗಳ ನಡುವಿನ ಸೌಹಾರ್ದ ವೃದ್ಧಿಯ ಸಂಕೇತ ಎಂದಿದ್ದಾರೆ.

ಕಳೆದ ತಿಂಗಳು ಚೀನಾದಲ್ಲಿ ನಡೆದ ಶೃಂಗಸಭೆಯಲ್ಲಿ ನರೇಂದ್ರ ಮೋದಿ ಜಿನ್ ಪಿಂಗ್ ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು ಹಾಗೂ ಉಭಯ ರಾಷ್ಟ್ರಗಳ ಪರಸ್ಪರ ಸಹಕಾರ ನೀಡುವ ಕುರಿತು ಪ್ರಸ್ತಾಪಿಸಿದ್ದರು.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search