• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಗೋಹತ್ಯೆ ನಿಷೇಧ ಅಧಿಸೂಚನೆ ಹೊರಡಿಸಿದರೂ, ರಫ್ತು ಮಾತ್ರ ನಿಲ್ಲುತ್ತಿಲ್ಲ

TNN Correspondent Posted On October 2, 2017
0


0
Shares
  • Share On Facebook
  • Tweet It

ಕಳೆದ ಮೇ 25ರಂದು ಕೇಂದ್ರ ಸರಕಾರ ಗೋ ಹತ್ಯೆ ನಿಷೇಧದ ಅಧಿಸೂಚನೆ ಹೊರಡಿಸುತ್ತಲೇ, ಗೋಮಾಂಸ ಸೇವಿಸದವರೂ ಇದು ಆಹಾರ ಸಂಸ್ಕೃತಿಯ ಹರಣ ಎಂದು ಬೊಬ್ಬಿರಿದರು. ನಮ್ಮಿಷ್ಟ, ನಾವು ಮನಸ್ಸಿಗೆ ಬಂದದ್ದನ್ನು ತಿನ್ನುತ್ತೇವೆ ಎಂದರು.

ಆದರೆ, ಕೇಂದ್ರ ಸರಕಾರ ಗೋಹತ್ಯೆ ನಿಷೇಧಿಸಿ ಕಾನೂನು ರೂಪಿಸಿದರೂ ಗೋ, ಎಮ್ಮೆಗಳ ರಫ್ತು ಮಾತ್ರ ನಿಲ್ಲುತ್ತಿಲ್ಲ. ಇಷ್ಟಾದರೂ ಯಾರೂ ಇದು ಕಾನೂನಿನ ಉಲ್ಲಂಘನೆ ಎನ್ನುತ್ತಿಲ್ಲ. ಗೋಹತ್ಯೆ ನಿಷೇಧದ ಅಧಿಸೂಚನೆಗೂ, ಗೋ ರಫ್ತಿಗೂ ಯಾವುದೇ ಅಡಚಣೆಯಾಗಿಲ್ಲ ಎಂದು ಹೇಳುತ್ತಿಲ್ಲ. ಎಲ್ಲರೂ ಮಗುಮ್ಮಾಗಿದ್ದಾರೆ.

ದೇಶದಲ್ಲಿ 2016-17ನೇ ಸಾಲಿನಲ್ಲಿ ಎಮ್ಮೆಯ ಮಾಂಸ ರಫ್ತಿನಲ್ಲಿ ಕುಸಿತ ಕಂಡಿರುವುದು ಎಲ್ಲರಿಗೂ ಗೊತ್ತು. ಮೊದಲಿದ್ದ 14.76 ಲಕ್ಷ ಟನ್ ಮಾಂಸದ ರಫ್ತು 13.31 ಲಕ್ಷ ಟನ್ನಿಗೆ ಇಳಿಕೆಯಾದ ಅಂಕಿ ಅಂಶ ಕಣ್ಣೆದುರೇ ಇವೆ.

ಆದರೆ ಉತ್ತರ ಬಂದರಿನ ಮೂಲಕ ಎಮ್ಮೆಯ ಮಾಂಸದ ರಫ್ತಿನಲ್ಲಿ ಮಾತ್ರ ಪ್ರಮಾಣ ಏರಿಕೆಯಾಗಿದೆ. ಮಹಾರಾಷ್ಟ್ರ, ಉತ್ತರ ಪ್ರದೇಶದ ಗಾಜಿಯಾಬಾದ್, ಸಹಸ್ನೂರ್, ಬಿಜನೂರ್, ನಾಗಾಲೆಂಡಿನ ಬರ್ಮಾ ಕ್ಯಾಂಪ್ ಮೂಲಕ ಎಮ್ಮೆ ಮಾಂಸದ ರಫ್ತಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲ, ಕಳೆದ ಏಪ್ರಿಲ್-ಜುಲೈ ಅವಧಿಯಲ್ಲಿ ಚೆನ್ನೈ ಮತ್ತು ಕಟ್ಟುಪಳ್ಳಿ ಬಂದರಿನಿಂದಲೇ ಸುಮಾರು 15,577 ಮೆಟ್ರಿಕ್ ಟನ್ ಎಮ್ಮೆ ಮಾಂಸ ರಫ್ತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಗೋಮಾಂಸ ಸಾಗಣೆ ಕುರಿತು ಕೇಂದ್ರ ಸರಕಾರವೇ ಹಲವು ನಿಬಂಧನೆ ಹೇರಿದ್ದರೂ ಇಷ್ಟೆಲ್ಲ ಅಕ್ರಮ ನಡೆಯಲು ಹೇಗೆ ಸಾಧ್ಯ? ಆಯಾ ರಾಜ್ಯ ಸರಕಾರಗಳು ಏನು ಮಾಡುತ್ತಿವೆ ಎಂಬ ಪ್ರಶ್ನೆ ಎದುರಾದರೂ, ಅಧಿಸೂಚನೆಯಿಂದ ಗೋಮಾಂಸ ರಫ್ತು ಹೆಚ್ಚಾಗಲು ಸ್ಥಳೀಯರ, ಕೆಲವು ಮೂಲಭೂತವಾದಿಗಳ ಕೃತ್ಯ ಎದ್ದು ಕಾಣುತ್ತಿದೆ. ಆದಾಗ್ಯೂ, ಕೇಂದ್ರ ಸರಕಾರದ ನಿರ್ಣಯ ವಿರೋಧಿಸಿಯಾದರೂ ಇಂಥವರು ಗೋಮಾಂಸ ಸಾಗಣೆ ಮಾಡುತ್ತಾರೆ. ಈ ಮಾತನ್ನು ಅಲ್ಲಗಳೆಯುವಂತಿಲ್ಲ.

-ಅನಿರುದ್ಧ್ ನಾಗೇಂದ್ರ, ಬೆಂಗಳೂರು

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search