• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖಾದರ್ ವಿರುದ್ಧ ಚಿನ್ಮಯ್ ರೈ ಕಾನೂನು ಗೆಲುವು

ganesh kumar Posted On October 11, 2017
0


0
Shares
  • Share On Facebook
  • Tweet It

ಪುತ್ತೂರು ಪ್ರತಿ ಆರು ತಿಂಗಳಿಗೊಮ್ಮೆ ಸುದ್ದಿ ಮಾಡದೇ ಹೋದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏನೂ ಆಗುತ್ತಿಲ್ಲ ಎನ್ನುವ ಅನುಭವ ಹೊರಗಿನ ಪ್ರಪಂಚಕ್ಕೆ ಹೋಗುತ್ತದೆ ಎನ್ನುವುದು ಅಲ್ಲಿನ ಮಣ್ಣಿಗೆ ಗೊತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಲ್ಲಡ್ಕದ ನಂತರ ಅತೀ ಹೆಚ್ಚು ಸುದ್ದಿಯಲ್ಲಿರುವ ಊರು ಪುತ್ತೂರು. ಇತ್ತೀಚೆಗೆ ಪುತ್ತೂರು ಹೆಚ್ಚು ಸುದ್ದಿಯಲ್ಲಿದ್ದದ್ದು ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತರ ಭಾಷಣದ ವಿಷಯದಲ್ಲಿ. ಅವರು ಪುತ್ತೂರಿನ ಸಂಪ್ಯ ಠಾಣೆಯ ಪೊಲೀಸ್ ಸಬ್ ಇನ್ಸಪೆಕ್ಟರ್ ಖಾದರ್ ಮತ್ತು ಇತರ ಸಿಬ್ಬಂದಿಗಳ ವಿರುದ್ಧ ಅತ್ಯುಗ್ರ ಭಾಷಣ ಮಾಡಿದ ನಂತರ ಸಂಪ್ಯ ಎಸ್ ಐ ಖಾದರ್ ಅವರ ಹೆಸರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಧ್ವನಿಸಿತ್ತು.
ಅದೇ ಎಸ್ ಐ ಖಾದರ್ ಅವರು ಪುತ್ತೂರಿನ ವಕೀಲ ಮತ್ತು ಹಿಂದೂಪರ ನಿಲುವುಗಳನ್ನು ಹೊಂದಿರುವ ಮತ್ತು ಅಕ್ರಮ ಗೋಸಾಗಾಟದ ವಿಷಯದಲ್ಲಿ ಸಕ್ರಿಯವಾಗಿ ಗೋಕಳ್ಳರ ವಿರುದ್ಧ ಧ್ವನಿ ಎತ್ತುತ್ತಿದ್ದ ಚಿನ್ಮಯ್ ರೈ ವಿರುದ್ಧ ಐಪಿಸಿ 307 ಪ್ರಕರಣ ದಾಖಲಿಸಿದ್ದರು. ಅದನ್ನು ಚಿನ್ಮಯ್ ರೈ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ತನ್ನ ವಿರುದ್ಧ ದುರುದ್ದೇಶಪೂರಿತವಾಗಿ ಕೇಸ್ ದಾಖಲಿಸಲಾಗಿದೆ. ತಾನು ಅಕ್ರಮ ಗೋಸಾಗಾಟದ ವ್ಯಕ್ತಿಗಳ ವಿರುದ್ಧ ಹೋರಾಡುವುದನ್ನು ತಡೆಯುವ ಉದ್ದೇಶದಿಂದ ಹೀಗೆ ತನ್ನನ್ನು ಸುಳ್ಳು ಕೇಸಿ ಸಿಕ್ಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಅವರ ಪರ ವಕೀಲರಾದ ಅರುಣ್ ಶ್ಯಾಮ್ ವಾದಿಸಿದ್ದರು.
ಅರುಣ್ ಶ್ಯಾಮ್ ಅವರ ವಾದವನ್ನು ಪುರಸ್ಕರಿಸಿದ ಹೈಕೋರ್ಟ್ ದುರುದ್ದೇಶದಿಂದ ದಾಖಲಿಸಿದ್ದ ಐಪಿಸಿ 307 ಪ್ರಕರಣಕ್ಕೆ ತಡೆ ನೀಡಿದೆ. ಈ ಮೂಲಕ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಅರುಣ್ ಶ್ಯಾಮ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಹೈಕೋರ್ಟ್ ಗೋಹತ್ಯಾ ನಿಷೇಧ, ಜಾನುವಾರು ಹತ್ಯಾ ನಿಷೇಧ ಕಾನೂನುಗಳನ್ನು ಸರಿಯಾಗಿ ಪಾಲಿಸುವಂತೆ ಪ್ರತಿವಾದಿಗಳಿಗೆ ಆದೇಶ ಕೊಡಬೇಕೆಂದು ಚಿನ್ಮಯ್ ರೈ ನ್ಯಾಯಾಲಯವನ್ನು ವಿನಂತಿಸಿದ್ದಾರೆ. ಚಿನ್ಮಯ್ ರೈ ಹಿಂದೂ ಜಾಗರಣ ವೇದಿಕೆಯ ಮುಖಂಡರೂ ಆಗಿದ್ದಾರೆ.

0
Shares
  • Share On Facebook
  • Tweet It


Chinmay rai


Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
ganesh kumar July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
ganesh kumar July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search