• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಲಿ ಅತ್ಯಾಚಾರದ ಆರೋಪ, ಇಲ್ಲಿ ಕಾಂಗ್ರೆಸ್ ಉಸ್ತುವಾರಿ

TNN Correspondent Posted On October 12, 2017
0


0
Shares
  • Share On Facebook
  • Tweet It

>> ವೇಣುಗೋಪಾಲ್ ವಿರುದ್ಧ ಕೇರಳ ಸಿಎಂ ಪಿಣರಾಯಿ ಸರಕಾರ ಹೂಡಲಿದೆ ಭ್ರಷ್ಟಾಚಾರ ಮತ್ತು ಲೈಂಗಿಕ ದೌರ್ಜನ್ಯದ ಕೇಸು

>> ಬಹುಕೋಟಿ ಸೋಲಾರ್ ಹಗರಣದಲ್ಲಿ ಮಾಜಿ ಸಿಎಂ ಉಮ್ಮನ್ ಚಾಂಡಿ ಮತ್ತು 9 ಕಾಂಗ್ರೆಸ್ ಮುಖಂಡರ ವಿರುದ್ಧ ವಿಜಿಲೆನ್ಸ್ ತನಿಖೆ

ತಿರುವನಂತಪುರಂ : ಕೇರಳದ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಿಡದೆ ಕಾಡಿದ್ದ ಬಹುಕೋಟಿ ಭ್ರಷ್ಟಾಚಾರದ ಸೋಲಾರ್ ಹಗರಣದ ಭಾಗವಾದ ಕಾಂಗ್ರೆಸ್ ಮುಖಂಡರಿಂದ ನಿರಂತರ ಅತ್ಯಾಚಾರ ಆರೋಪ ಕರ್ನಾಟಕದಲ್ಲಿ ಮನೆಮಾಡಿರುವ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‍ಗೆ ಮತ್ತೆ ಕಾಡಲಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಸೋಲಾರ್ ಹಗರಣದಲ್ಲಿ ಮರುತನಿಖೆಗೆ ನಿವೃತ್ತ ನ್ಯಾ. ಜಿ.ಶಿವರಾಂ ನೇತೃತ್ವದ ಸಮಿತಿ ಶಿಫಾರಸು ಮಾಡಿದ್ದ ವರದಿ ಆಧರಿಸಿ ವಿಜಿಲೆನ್ಸ್ ತನಿಖೆಗೆ ಆದೇಶಿಸಲಿದ್ದಾರ. ಈ ಕುರಿತು ಸ್ವತಃ ಅವರೇ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ್ದಾರೆ. ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ, ಮಾಜಿ ಗೃಹ ಸಚಿವ ತಿರುವಾಂಕೂರು ರಾಧಾಕೃಷ್ಣನ್, ಮಾಜಿ ಇಂಧನ ಸಚಿವ ಆರ್ಯದಾನ್ ಮೊಹಮ್ಮದ್ ವಿರುದ್ಧ ಭ್ರಷ್ಟಾಚಾರ ಮತ್ತು ಲೈಂಗಿಕ ಕಿರುಕುಳದ ಪ್ರತ್ಯೇಕ ಪ್ರಕರಣಗಳನ್ನು ಸರಕಾರವೇ ದಾಖಲಿದುವುದಾಗಿ ಹೇಳಿದ್ದಾರೆ. ಒಟ್ಟು 10 ಕಾಂಗ್ರೆಸ್ ಮುಖಂಡರನ್ನು ಪಿಣರಾಯಿ ಸೋಲಾರ್ ಹಗರಣ ಎಂಬ ಒಂದೇ ಬಾಣದಿಂದ ರಾಜಕೀಯ ನಿವೃತ್ತಿಗೆ ದೂಡುತ್ತಿದ್ದಾರೆ.


ಸರಿತಾ ನಾಯರ್ ಯಾರು? : ಕೇರಳ ಸರ್ಕಾರದಿಂದ 0ಸೋಲಾರ್ ಉಪಕರಣಗಳ ಅಳವಡಿಕೆ ಗುತ್ತಿಗೆ ಪಡೆದ ಕಂಪನಿ ಮುಖ್ಯಸ್ಥೆ ಸರಿತಾ ನಾಯರ್. ಈಕೆಯನ್ನು ದೆಹಲಿಯ ತಮ್ಮ ಸಚಿವರ ನಿವಾಸದಲ್ಲಿ ವೇಣುಗೋಪಾಲ್ ಕರೆಸಿ, 2011ರಿಂದಲೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅಷ್ಟಲ್ಲದೇ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಹಗರಣದ ತನಿಖೆ ವೇಳೆ ಬಂಧಿತಳಾಗಿದ್ದಾಗ ಜೈಲಿನಲ್ಲಿ ಆತ್ಮಾವಲೋಕನಕ್ಕಾಗಿ ಬರೆದ ಪತ್ರದಲ್ಲಿ ಸರಿತಾ ಉಲ್ಲೇಖಿಸಿದ್ದರು. ಸಿಎಂ ಉಮ್ಮನ್ ಚಾಂಡಿ, ಮುಖ್ಯಮಂತ್ರಿ ಕಾರ್ಯಾಲಯದ ಸಹಾಯಕರು, ಗೃಹ ಸಚಿವ, ವೇಣುಗೋಪಾಲ್ ಸೇರಿದಂತೆ 10ಕ್ಕೂ ಹೆಚ್ಚು ಸಚಿವರು ಸರಿತಾ ಮೊಬೈಲ್ ನಿರಂತರ ಕರೆಮಾಡಿರುವ ವಿವರಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಿ ಸೋಲಾರ್ ಹಗರಣ ಸೆಕ್ಸ್ ರ್ಯಾಕೆಟ್ ಸ್ವರೂಪ ಪಡೆದಿತ್ತು. ತಮ್ಮನ್ನು ಬಳಸಿಕೊಂಡಿದ್ದಲ್ಲದೇ ಸೋಲಾರ್ ಹಗರಣವನ್ನು ತಮ್ಮ ತಲೆಗೆ ಕಟ್ಟಲು ಮುಖಂಡರು ಸಂಚು ಮಾಡಿದ್ದಾರೆ ಎಂದು ಸರಿತಾ ಆರೋಪಿಸಿದ್ದರು. ಸರಿತಾ ವಿರುದ್ಧ ವೇಣುಗೋಪಾಲ್ ಮಾನನಷ್ಟ ಮೊಕದ್ದಮೆ ಕೂಡ ಹೂಡಿದ್ದಾರೆ.

0
Shares
  • Share On Facebook
  • Tweet It


chandycmcongresskarnatakakeralakuttymodinairndaoomenpinarayipoliticiansrapesaritascamsexsolarteam solarupavenugopalvijayan


Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
You may also like
ಯುವ ಪತ್ರಕರ್ತೆರೆಯರಿಗಿಲ್ಲ ಇಲ್ಲಿಗೆ ತೆರೆಳಲು ಅವಕಾಶ… !! 50 ವರ್ಷದ ಮೇಲಿನ ಮಹಿಳಾ ಪೊಲೀಸರಿಗೆ ಮಾತ್ರ ಇಲ್ಲಿಗೆ ಎಂಟ್ರಿ..!!!
November 5, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search