• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಕಟೀಲಿನಲ್ಲಿ ಎಂಥಾ ಲೋಕವಯ್ಯಾ ಚಿತ್ರದ ಸ್ಕ್ರಿಪ್ಟ್ ಗೆ ಪೂಜೆ

ganesh kumar Posted On October 21, 2017
0


0
Shares
  • Share On Facebook
  • Tweet It

ಹೊಸತನದ ಆವಿಷ್ಕಾರದಲ್ಲಿ ಸಿನೆಮಾವೊಂದನ್ನು ನಿರ್ಮಾಣ ಮಾಡಲು ಯೋಜಿಸಲಾಗಿದ್ದು ಪ್ರಸ್ತುತ ಸಮಾಜದಲ್ಲಿರುವ ಮೂಢನಂಬಿಕೆಗಳಿಂದ ಜನ ಹೇಗೆ ತಮ್ಮತನವನ್ನು ಕಳೆದುಕೊಂಡು ಬದಲಾಗುತ್ತಾರೆ ಎನ್ನುವುದು ಚಿತ್ರದ ತಿರುಳು ಎಂದು ಎಂಥಾ ಲೋಕವಯ್ಯಾ ಚಿತ್ರದ ನಿರ್ಮಾಪಕ ಮಂಗಲ್ಪಾಡಿ ನರೇಶ್ ಹೇಳಿದ್ದಾರೆ. ಚಿತ್ರ ಕನ್ನಡ ಭಾಷೆಯಲ್ಲಿ ಬರಲಿದ್ದು ಅದರೊಂದಿಗೆ ನಮ್ಮ ತುಳು ಮತ್ತು ಕೊಂಕಣಿ ಭಾಷೆಗಳನ್ನು ಸಂದರ್ಭಾನುಸಾರವಾಗಿ ಬಳಸಿ ಇಲ್ಲಿನ ಮಣ್ಣಿನ ಆಚಾರ, ವಿಚಾರಗಳು, ಸಂಸ್ಕೃತಿ ಮತ್ತು ಕರಾವಳಿಯ ವಿವಿಧ ಸಮಸ್ಯೆಗಳನ್ನು ಹೇಗೆ ಸುಲಲಿತವಾಗಿ ಪರಿಹರಿಸಬಹುದು ಎನ್ನುವುದನ್ನು ಹಾಸ್ಯದ ಮಿಶ್ರಣದೊಂದಿಗೆ ನವಿರಾದ ನಿರೂಪಣೆಯಲ್ಲಿ ಚಿತ್ರೀಕರಿಸಲು ನಿರ್ಧರಿಸಿದ್ದೇವೆ. ಸ್ಥಳೀಯ ಕಲಾವಿದರು ಹಾಗೂ ನಾಡಿನ ಖ್ಯಾತ ನಟರೊಂದಿಗೆ ಚಿತ್ರೀಕರಣ ನಡೆಸಲು ಯೋಜಿಸಿದ್ದು ಚಿತ್ರ ಸಂಪೂರ್ಣವಾಗಿ ಮಂಗಳೂರಿನ ಆಸುಪಾಸಿನಲ್ಲಿ ನಡೆಯಲಿದೆ. ಕಡ್ಲೆಕಾಯಿ ಫಿಲ್ಮ್ಸ್ ಆಡಂಬರಕ್ಕಿಂತ ವಸ್ತುನಿಷ್ಟ ಕಥೆಯನ್ನು ಚಿತ್ರವಾಗಿಸಲು ತೀರ್ಮಾನಿಸಿದ್ದು ಹೊಸ ನಿರ್ಧೇಶಕರ ಹೊಸ ಪ್ರಯತ್ನಗಳಿಗೆ ಬೆನ್ನೆಲುಬಾಗಿ ನಿಂತಿದೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಿತ್ರದ ಸ್ಕ್ರಿಪ್ಟ್ ಮತ್ತು ಕ್ಯಾಮೆರಾ ಗೆ ಪೂಜೆ ಸಲ್ಲಿಸಲಾಯಿತು. ಯುವ ಉದ್ಯಮಿ  ಮಂಗಲ್ಪಾಡಿ ನರೇಶ್ ಶೆಣೈ, ಬಹುಭಾಷಾ ನಟ ಗೋಪಿನಾಥ್, ಸಾಮಾಜಿಕ ಹೋರಾಟಗಾರ ಹನುಮಂತ ಕಾಮತ್ ಸಹಿತ ಚಿತ್ರದ ತಾಂತ್ರಿಕ ಬಳಗ ಭಾಗವಹಿಸಿದ್ದರು. ಒಂದು ಮೊಟ್ಟೆಯ ಕಥೆ ಚಿತ್ರದ ಸಹನಿರ್ದೇಶಕ ಸಿತೇಶ್ ಸಿ ಗೋವಿಂದ್ ಅವರು ಚಿತ್ರದ ನಿರ್ದೇಶಕರಾಗಿದ್ದಾರೆ. ಪೃರ್ಥಿ ಅಂಬರ್ ಚಿತ್ರದಲ್ಲಿ ಮುಖ್ಯವಾದ ಪಾತ್ರ ವಹಿಸಲಿದ್ದಾರೆ.

0
Shares
  • Share On Facebook
  • Tweet It


- Advertisement -
Entha LokavaiahKannada Movie


Trending Now
ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
ganesh kumar June 26, 2025
ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
ganesh kumar June 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
  • Popular Posts

    • 1
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 2
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 3
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • 4
      ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • 5
      ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search