• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಫತ್ವಾ ಹೊರಡಿಸಿದ ಉಲೂಮ್ ಸಂಸ್ಥೆಯನ್ನೇ ನಿಷೇಧಿಸಿ: ಮುಸ್ಲಿಂ ಮಹಿಳೆಯ ಆಗ್ರಹ

TNN Correspondent Posted On October 23, 2017
0


0
Shares
  • Share On Facebook
  • Tweet It

ಮುಸ್ಲಿಂ ಮಹಿಳೆಯೊಬ್ಬಳು ಹುಬ್ಬು ನೀಟಾಗಿ ಕತ್ತರಿಸಿದ ಫೋಟೋ ಫೇಸ್ ಬುಕ್ ಗೆ ಪೋಸ್ಟ್ ಮಾಡಿದರಾ? ಫತ್ವಾ.

ಮುಸ್ಲಿಂ ಮಹಿಳೆಯರು ದೀಪಾವಳಿಯಲ್ಲಿ ಆರತಿ ಬೆಳಗಿದರಾ? ಫತ್ವಾ.

ಮುಸ್ಲಿಂ ಮಹಿಳೆಯರು, ಪುರುಷರು ಜಾಲತಾಣದಲ್ಲಿ ಫೋಟೋ ಅಪ್ ಲೋಡ್ ಮಾಡುವುದು ಇಸ್ಲಾಂ ವಿರೋಧಿ…

ಹೀಗೆ ಪ್ರತಿಯೊಂದರಲ್ಲೂ ಹುಳುಕು ಹುಡುಕಿ, ಸುಖಾಸುಮ್ಮನೆ ಫತ್ವಾ ಹೊರಡಿಸುತ್ತಿದ್ದ ಉತ್ತರ ಪ್ರದೇಶದ ಇಸ್ಲಾಮಿಕ್ ಸಂಸ್ಥೆ ದರೂಲ್ ಉಲೂಮ್ ದಿಯೋಬಂದ್ ವಿರುದ್ಧ ಮುಸ್ಲಿಂ ಮಹಿಳೆಯೊಬ್ಬರು ಗುಡುಗಿದ್ದು, ದ್ವೇಷ ಹಾಗೂ ಹಾಸ್ಯಾಸ್ಪದವಾಗಿ ಫತ್ವಾ ಹೊರಡಿಸುವ ಈ ಸಂಸ್ಥೆಯನ್ನೇ ಮುಚ್ಚಿ ಎಂದಿದ್ದಾರೆ.

ನಜೀನ್ ಅನ್ಸಾರಿ ಎಂಬ ಮಹಿಳೆ ಈ ಕುರಿತು ಮಾತನಾಡಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇವರ ನೇತೃತ್ವದಲ್ಲೇ ದೀಪಾವಳಿ ದಿನ ಆರತಿ ಬೆಳಗಲಾಗಿತ್ತು. ಹಾಗಾಗಿ ಉಲೂಮ್ ಸಂಸ್ಥೆ ಇವರ ವಿರುದ್ಧ ಫತ್ವಾ ಹೊರಡಿಸಿತ್ತು.

ಸುಮ್ಮಸುಮ್ಮನೆ ಫತ್ವಾ ಹೊರಡಿಸಿದ ಸಂಸ್ಥೆ ವಿರುದ್ಧ ಕಿಡಿಕಾರಿರುವ ನಜೀನ್, “ಈ ಇಸ್ಲಾಮಿಕ್ ಸಂಸ್ಥೆಯ ಹಣಕಾಸು ವ್ಯವಹಾರ, ರಾಷ್ಟ್ರೀಯ ಹಿತಾಸಕ್ತಿಗಳ ವಿರುದ್ಧ ಭಾಗಿಯಾದ ಚಟುವಟಿಕೆಗಳ ವಿರುದ್ಧ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

ವೈಯಕ್ತಿಕ ವಿಚಾರಗಳ ಆಧಾರದ ಮೇಲೆ ಫತ್ವಾ ಹೊರಡಿಸುವ ಯಾವ ಹಕ್ಕೂ ಉಲೂಮ್ ದಿಯೋಬಂದ್ ಸಂಸ್ಥೆಗಿಲ್ಲ. ಯಾವ ಇಸ್ಲಾಂ, ಯಾವ ಅಲ್ಲಾನೂ ಈ ಹಕ್ಕು ನೀಡಿಲ್ಲ. ಅವರು ಬರೀ ಇಸ್ಲಾಂ ಕುರಿತ ಸಕಾರಾತ್ಮ ಅಂಶಗಳ ಕುರಿತು ಹೇಳುವ ಹಕ್ಕು ಹೊಂದಿದ್ದಾರೆಯೇ ಹೊರತು ಫತ್ವಾ ಹೊರಡಿಸುವಂತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಮುಸ್ಲಿಂ ಮಹಿಳೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ಹಾಗೂ ಇಸ್ಲಾಂ ಧರ್ಮದ ನಿಯಮ ಪಾಲಿಸುತ್ತೇನೆ. ಆದರೆ ಇಂಥ ಆಧಾರರಹಿತ ಫತ್ವಾಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಹೆದರುವುದಿಲ್ಲ ಎಂದಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search