• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಮತಾ ಬ್ಯಾನರ್ಜಿಯಿಂದ ಮತ್ತೊಂದು ಅಪಸವ್ಯ ಮೊಬೈಲ್ ನಂಬರ್ ಗೆ ಆಧಾರ ಲಿಂಕ್ ಮಾಡಲ್ಲ ಎಂದ ಬಂಗಾಳ ಸಿಎಂ

TNN Correspondent Posted On October 26, 2017
0


0
Shares
  • Share On Facebook
  • Tweet It

 

ಕೋಲ್ಕತ್ತಾ: ಕೇಂದ್ರ ಸರ್ಕಾರದ ನೋಟು ನಿಷೇಧವನ್ನು ವಿರೋಧಿಸಿ ಪಡೆ ಕಟ್ಟಿ ನಗಪಾಟಲಿಗೀಡಾಗಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ. ಪಶ್ಚಿಮ ಬಂಗಾಳದಲ್ಲಿ ದಸರಾ ಹಿನ್ನೆಲೆ ದುರ್ಗಾ ಪೂಜೆಗೆ ಅಡ್ಡಲಾಗಿ ನಿಂತು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಮಮತಾ. ಕೇಂದ್ರ ಸರ್ಕಾರದ ವಿರುದ್ಧ ಆಗಾಗ ಗುಟುರು ಹಾಕುವ ಮಮತಾ ಬ್ಯಾನರ್ಜಿ ಈ ಮತ್ತೊಂದು ಅಪಸವ್ಯ ತೆಗೆದಿದ್ದಾರೆ.

ಹೌದು, ಕೇಂದ್ರ ಸರ್ಕಾರ ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿರುವ ಆದೇಶ ಧಿಕ್ಕರಿಸಲು ಹೊರಟಿರುವ ಮಮತಾ ಬ್ಯಾನರ್ಜಿ, “ತನ್ನ ಮೊಬೈಲ್ ಸಂಪರ್ಕ ಕಡಿತಗೊಳಿಸಿದರೂ ಸರಿಯೇ, ಮೊಬೈಲ್ ನಂಬರ್ ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲ್ಲ” ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ.

ಸಾರ್ವಜನಿಕರ ಹಕ್ಕು ಹಾಗೂ ಖಾಸಗಿತನದ ವಿಷಯಗಳಲ್ಲಿ ಕೇಂದ್ರ ಸರ್ಕಾರ ವಿನಾಕಾರಣ ಮಧ್ಯಸ್ಥಿಕೆ ವಹಿಸುತ್ತಿದೆ. ಆಧಾರ್ ಸಂಖ್ಯೆ ಮೊಬೈಲ್ ನಂಬರಿಗೆ ಲಿಂಕ್ ಮಾಡುವ ಆದೇಶವೇ ಸರಿಯಿಲ್ಲ. ನಾನಂತೂ ಲಿಂಕ್ ಮಾಡಿಸುವುದಿಲ್ಲ ಎಂದಿದ್ದಾರೆ.

ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಪ್ರಶ್ನಿಸಿದವರ ವಿರುದ್ಧ ಆದಾಯ ತೆರಿಗೆ ಇಲಾಖೆ ಹಾಗೂ ಸಿಬಿಐ ಅಸ್ತ್ರ ಬಳಸಲಾಗುತ್ತಿದೆ ಎಂದು ಪಕ್ಷದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಆದರೆ ಕೇಂದ್ರ ಸರ್ಕಾರವನ್ನು ವಿರೋಧಿಸುವ ಭರದಲ್ಲಿ ಮಮತಾ ಬ್ಯಾನರ್ಜಿ ಇಂಥ ಉದ್ಧಟತನದ ಹೇಳಿಕೆ ನೀಡುವುದು ಎಷ್ಟರಮಟ್ಟಿಗೆ ಸಮಂಜಸ ಎನ್ನುವುದೇ ಪ್ರಶ್ನೆಯಾಗಿದೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search