• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ- ಭದ್ರತಾ ದೃಷ್ಟಿಯಿಂದ ಭಾನುವಾರ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶವಿರುವುದಿಲ್ಲ!

Tulunadu News Posted On October 26, 2017
0


0
Shares
  • Share On Facebook
  • Tweet It

ಪ್ರಧಾನಿಯಾದ ಬಳಿಕ ಮೋದಿ ಅವರು ಭಾನುವಾರ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.  ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಅಕ್ಟೋಬರ್ 28ರ ಶನಿವಾರದಿಂದ, ಅಕ್ಟೋಬರ್ 29ರವರೆಗೆ ಭಕ್ತಾದಿಗಳಿಗೆ ಮಂಜುನಾಥ ಸ್ವಾಮಿಯ ದರ್ಶನ ಸಾಧ್ಯವಿಲ್ಲ.

ಭದ್ರತೆಯ ದೃಷ್ಟಿಯಿಂದ ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಭಾನುವಾರ ಮಧ್ಯಾಹ್ನ 2 ಗಂಟೆಯವರೆಗೆ ಭಕ್ತಾದಿಗಳಿಗೆ ಕ್ಷೇತ್ರದ ಸ್ವಾಮಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಶ್ರೀಕ್ಷೇತ್ರ  ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಅಕ್ಟೋಬರ್ 29ರಂದು ಬೆಳಿಗ್ಗೆ 11.30ಕ್ಕೆ ಮೋದಿ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಉಜಿರೆಗೆ ತೆರಳಲಿರುವ ಮೋದಿ ಎಸ್‍ಡಿಎಂ ಮೈದಾನದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಬೃಹತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ.

ಮೋದಿ ಪ್ರವಾಸ ಹಿನ್ನೆಲೆಯಲ್ಲಿ ಭದ್ರತೆಗಾಗಿ ಹತ್ತು ಎಸ್‍ಪಿ ಶ್ರೇಣಿಯ ಅಧಿಕಾರಿಗಳು, ಡಿವೈಎಸ್‍ಪಿ, ಇನ್ಸ್‍ಪೆಕ್ಟರ್, ಪಿಎಸ್‍ಐ ಸೇರಿದಂತೆ 150 ಮಂದಿ ಅಧಿಕಾರಿಗಳು, ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ನಕ್ಸಲ್ ಚಟುವಟಿಕೆ ಇರೋ ಧರ್ಮಸ್ಥಳ, ಬೆಳ್ತಂಗಡಿ ಪರಿಸರದ ದಟ್ಟ ಕಾಡಲ್ಲಿ ನಕ್ಸಲ್ ನಿಗ್ರಹ ದಳದ 25 ತಂಡಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search