• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಉಗ್ರರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಬೇರೆ ರೀತಿಯ ಉತ್ತರ: ಪಾಕಿಸ್ತಾನಕ್ಕೆ ಅಮೆರಿಕ ತಪರಾಕಿ

TNN Correspondent Posted On October 28, 2017
0


0
Shares
  • Share On Facebook
  • Tweet It

ವಾಷಿಂಗ್ಟನ್: ಭಾರತದಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಹೇಗೆ ಪಾಕಿಸ್ತಾನವನ್ನು ಬಗ್ಗುಬಡಿಯುತ್ತಿದ್ದಾರೋ, ಹಾಗೆಯೇ ಅಮರಿಕದಲ್ಲಿ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದ ಮೇಲೆ ಪಾಕಿಸ್ತಾನದ ವಿರುದ್ಧ ಹಲವು ಅಸ್ತ್ರ ಬಳಸುತ್ತಿದ್ದಾರೆ.

ಪಾಕಿಸ್ತಾನ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಈ ದಾರಿಯಲ್ಲಿ ಪಾಕಿಸ್ತಾನ ಎಡವಿದರೆ ಅಮೆರಿಕ ಬೇರೆಯದೇ ರೀತಿಯಲ್ಲಿ ಉತ್ತರಿಸಬೇಕಾಗುತ್ತದೆ ಎಂದು ಸರ್ಕಾರದ ಕಾರ್ಯದರ್ಶಿ ರೆಕ್ಸ್ ಟಿಲ್ಲರ್ ಸನ್ ಪಾಕಿಗೆ ಭಾರಿ ತಪರಾಕಿ ನೀಡಿದ್ದಾರೆ.

ಪಾಕಿಸ್ತಾನಕ್ಕೆ ಉಗ್ರರ ವಿರುದ್ಧ ಕ್ರಮ ಕೈಗೊಳ್ಳದೆ ಬೇರೆ ದಾರಿಯಿಲ್ಲ. ಅದು ಮೊದಲು ಉಗ್ರರ ಸ್ವರ್ಗ ಎಂಬ ಹಣೆಪಟ್ಟಿಯಿಂದ ಹೊರಬರಬೇಕು. ಉಗ್ರರನ್ನು ಸಾಕಿ-ಸಲಹುವುದನ್ನು ಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಉಗ್ರರನ್ನು ಪೋಷಣೆ ಮಾಡುವುದರಿಂದಲೇ ಕುಖ್ಯಾತಿಯಾಗಿರುವ ಪಾಕಿಸ್ತಾನ ಮೂಲತಃ ಸಾರ್ವಭೌಮತ್ವ ರಾಷ್ಟ್ರ. ಹಾಗಾಗಿ ನಾವು ಯಾವುದೇ ಬೇಡಿಕೆ ಇಡದೇ, ಭಯೋತ್ಪಾದನೆ ನಿಗ್ರಹಿಸಿ ಎಂದು ಹೇಳುತ್ತಿದ್ದೇವೆ. ಒಂದು ವೇಳೆ ಪಾಕಿಸ್ತಾನ ತನ್ನ ಚಾಳಿಯೇ ಮುಂದುವರಿಸಿದರೆ ಅಥವಾ ಉಗ್ರ ಪೋಷಣೆಯಲ್ಲಿ ಮುಂದುವರಿದರೆ ಯಾವ ತಂತ್ರ ಬಳಸಿ ಅದನ್ನು ತಡೆಯಬೇಕು ಎಂಬುದು ನಮಗೆ ಗೊತ್ತು ಎಂದಿದ್ದಾರೆ.

ನಾವು ಇದುವರೆಗೂ ಪಾಕಿಸ್ತಾನದ ಜತೆ ನಡೆಸಿದ ಮಾತುಕತೆಯಲ್ಲಿ ಪಾಕಿಸ್ತಾನದ್ದೇ ಶೇ.80ರಷ್ಟು ಮಾತು ಕೇಳಿದ್ದೇವೆ ಹಾಗೂ ನಾವು ಶೇ.20ರಷ್ಟು ಮಾತ್ರ ಮಾತನಾಡಿದ್ದೇವೆ. ಆದರೆ ಈಗ ಕಾಲ ಬದಲಾಗಿದೆ. ಪಾಕ್ ಪ್ರಧಾನಿ ಅಬ್ಬಾಸಿ ಜತೆ ನಾವು ಮಾತನಾಡಿದ್ದು, ಇನ್ನು ಮುಂದೆ ಪಾಕಿಸ್ತಾನ ಬರೀ ಬಾಯಿಮಾತಿನಲ್ಲೇ ಭಯೋತ್ಪಾದನೆ ನಿಗ್ರಹಿಸದೆ, ಕಾರ್ಯ ರೂಪಕ್ಕೆ ತರಬೇಕು ಎಂದು ಜಿನೀವಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರೆಕ್ಸ್ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search