• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಪ್ಪು ಹಣಕ್ಕೆ ಕಡಿವಾಣ ಹಾಕದೆ ಬಿಡಲ್ಲ: ಅರುಣ್ ಜೇಟ್ಲಿ

TNN Correspondent Posted On October 29, 2017
0


0
Shares
  • Share On Facebook
  • Tweet It

ನವದೆಹಲಿ: ಕೇಂದ್ರ ಸರ್ಕಾರದ ಕಪ್ಪು ಹಣದ ವಿರುದ್ಧದ ಹೋರಾಟಕ್ಕೆ ಹಲವು ವಿರೋಧ, ಟೀಕೆ, ಆಕ್ಷೇಪ, ಆರೋಪಗಳು ಕೇಳಿಬರುತ್ತಿದ್ದರೂ, ನಾವು ಕಪ್ಪು ಹಣಕ್ಕೆ ಕಡಿವಾಣ ಹಾಕದೆ ಬಿಡುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಗುಡುಗಿದ್ದಾರೆ.

ಕಾಳಧನಿಕರ ಹುಟ್ಟಡಗಿಸುವುದೇ ನಮ್ಮ ಉದ್ದೇಶವಾಗಿದೆ. ಈ ದಿಸೆಯಲ್ಲಿ ನಾವು ಜಾರಿಗೆ ತಂದ ಸುಧಾರಣಾ ಕ್ರಮಗಳು ಮುಂದಿನ ದಿನಗಳಲ್ಲಿ ಸಕಾರಾತ್ಮಕ ಪರಿಣಾಮ ಬೀರಲಿದ್ದು, ಜನರಿಗೆ ಒಳಿತಾಗಲಿದೆ ಎಂದು ತಿಳಿಸಿದ್ದಾರೆ.

ನೋಟು ನಿಷೇಧ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಯಂಥ ಮಹತ್ತರ ಯೋಜನೆ ಮೂಲಕ ಸರ್ಕಾರ ಕಪ್ಪು ಹಣ ತಡೆಯಲು ಯತ್ನಿಸುತ್ತಿದೆ. ಈ ಹಾದಿಯಲ್ಲಿ ಯಾವುದೇ ಸವಾಲು ಎದುರಾದರೂ ನಾವು ವಿಮುಖರಾಗುವುದಿಲ್ಲ. ಭಾರತದ ಆರ್ಥಿಕ ವ್ಯವಸ್ಥೆ ಕಸ ಸ್ವಚ್ಛಗೊಳಿಸದೇ ಬಿಡುವುದಿಲ್ಲ ಎಂದಿದ್ದಾರೆ.

ಪ್ರಸ್ತುತ ಭಾರತ ವಿಶ್ವದಲ್ಲೇ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಇದಕ್ಕೆ ಮತ್ತಷ್ಟು ವೇಗ ನೀಡಲು ಅಭಿವೃದ್ಧಿ, ಪಾರದರ್ಶಕ, ಮುಕ್ತ ಹಾಗೂ ಪ್ರಬಲ ಆರ್ಥಿಕ ವ್ಯವಸ್ಥೆ ಇರಬೇಕು ಎಂಬುದೇ ನಮ್ಮ ಆಶಯ. ಹಾಗಾಗಿಯೇ ನಾವು ಯಾವುದೇ ಕಾರಣಕ್ಕೂ ಕಪ್ಪು ಹಣ ಆಧಾರಿತ ಆರ್ಥಿಕ ವ್ಯವಸ್ಥೆ ನಿರ್ಮಾಣ ಹಾಗೂ ಅಸ್ತಿತ್ವ ಉಳಿಸುವುದಿಲ್ಲ ಎಂದು ಜೇಟ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಕೇಂದ್ರದ ನೋಟು ನಿಷೇಧ ಹಾಗೂ ಜಿಎಸ್ಟಿಯಿಂದ ದೇಶದ ಆರ್ಥಿಕ ವ್ಯವಸ್ಥೆ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತಿದೆ ಎಂಬ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಜೇಟ್ಲಿ ಹೇಳಿದ್ದಾರೆ.

 

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search