• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕಾಂಗ್ರೆಸ್ಸಿನ ಹೊಲಸು ಬಾಣಗಳನ್ನು ಎದುರಿಸಿ ನಿಲ್ತಾರಾ ವಜ್ರದೇಹಿ?

Tulunadu News Posted On October 30, 2017
0


0
Shares
  • Share On Facebook
  • Tweet It

ಮಂಗಳೂರಿನ ಹಿಂದೂತ್ವದ ಫೈರ್ ಬ್ರಾಂಡ್ ಸನ್ಯಾಸಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಕರಾವಳಿಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಚುನಾವಣೆಗೆ ನಿಲ್ಲುತ್ತಾರೆ ಎಂದು ಸುದ್ದಿಯಾಗುತ್ತಿದೆ. ಅದನ್ನು ಸ್ವಾಮೀಜಿ ಸ್ಪಷ್ಟವಾಗಿ ನಿರಾಕರಿಸಿಯೂ ಇಲ್ಲ, ಒಪ್ಪಿಕೊಂಡಿರುವುದು ಇಲ್ಲ. ಎಲ್ಲದಕ್ಕೂ ಸಮಯವೇ ಉತ್ತರ ನೀಡಲಿದೆ ಎಂದು ಪತ್ರಕತ್ತರು ಕೇಳಿದರೆ ಹೇಳುತ್ತಿದ್ದಾರೆ.
ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಆದ ಬಳಿಕ ಕರ್ನಾಟಕದಲ್ಲಿಯೂ ಅನೇಕ ಸಂತರಿಗೆ ರಾಜ್ಯವನ್ನು ರಾಜಕೀಯವಾಗಿ ಮುನ್ನಡೆಸಬೇಕೆಂಬ ಮಹತ್ವಾಕಾಂಕ್ಷೆ ಬಂದಿರುವುದು ಸುಳ್ಳಲ್ಲ. ಆದರೆ ರಾಜಕೀಯ ಮತ್ತು ಆಧ್ಯಾತ್ಮ ಎನ್ನುವುದು ಅಕ್ಷರಶ: ಬೇರೆ ಬೇರೆ. ಎರಡಕ್ಕೂ ಸಂಬಂಧ ಕಲ್ಪಿಸಲು ಸಾಧ್ಯವಿಲ್ಲ. ಆಧ್ಯಾತ್ಮ ಲೋಕದಲ್ಲಿರುವವರಿಗೆ ಬೇಕಾದ ಮನಸ್ಥಿತಿ, ಸ್ಥಿತಪ್ರಜ್ಞೆ, ಭಗವಂತನೆಡೆಗೆ ತುಡಿತ, ವ್ರತ, ಪೂಜೆ ಮತ್ತು ಪುನಸ್ಕಾರ ಮತ್ತು ಸಮಾಜದಲ್ಲಿ ತನ್ನವರು ದಾರಿ ತಪ್ಪಿದಾಗ ಭೋದಿಸುವ ತತ್ವಗಳು ರಾಜಕೀಯದಕ್ಕೆ ಹೋದ ಬಳಿಕ ಉಳಿಯಲು ಅಸಾಧ್ಯ. ಅಲ್ಲಿ ಒಮ್ಮೆ ಪ್ರವೇಶ ಮಾಡಿದರೆ ಅದು ಒಂದು ರೀತಿಯಲ್ಲಿ ಅಂಟು ಇದ್ದ ಹಾಗೆ. ನಂತರ ಅಧಿಕಾರ ಬಿಟ್ಟು ಇಳಿಯಲು ಮನಸ್ಸು ಬರುವುದಿಲ್ಲ. ಅಧಿಕಾರದಿಂದ ಇಳಿಯಬಾರದು ಎಂದಾದರೆ ಎಲ್ಲರನ್ನೂ ಸಂತೋಷವಾಗಿ ಇಡಬೇಕಾಗುತ್ತದೆ. ಎದುರಾಳಿ ಪಕ್ಷದವರು ಉರುಳಿಸುವ ದಾಳಕ್ಕೆ ತಿರುಗೇಟು ನೀಡಲು ವಾಮ ಮಾರ್ಗ ಅನುಸರಿಸುವ ಅಗತ್ಯ ಕೂಡ ಬರಬಹುದು. ಏಕಾಗ್ರತೆ ಉಳಿಯುವುದು ಕಷ್ಟಸಾಧ್ಯ. ಕಾರಣ ದಿನ ಬೆಳಗಾದರೆ ಜನರ ಸಮಸ್ಯೆ ಎದುರಿಸಬೇಕಾದ ಅನಿವಾರ್ಯತೆ. ಅದು ಬಿಟ್ಟರೆ ಜನರಿಂದ ದೂರ ಎನ್ನುವ ಆರೋಪ. ಸಂತರಾಗಿದ್ದಲ್ಲಿ ಗಂಟೆಗಟ್ಟಲೆ ಪೂಜೆ, ಪುನಸ್ಕಾರ, ಜಪ, ತಪ, ಶ್ಲೋಕ ಪಾರಾಯಣ ಮಾಡಲು ಸಮಯಾವಕಾಶವಿದೆ. ಅದೇ ರಾಜಕಾರಣಿಯಾದರೆ ಅದನ್ನು ಮಾಡಲು ಅಲ್ಲ, ಇದಕ್ಕೆ ಹೋಗಲು ಇಲ್ಲ. ಕೊನೆಗೆ ಒಬ್ಬ ಒಳ್ಳೆಯ ಸನ್ಯಾಸಿಯೂ ಆಗದೆ, ಒಳ್ಳೆಯ ರಾಜಕಾರಣಿಯೂ ಆಗದೆ ಉಳಿಯುವ ಅಪಾಯ ಇದೆ.
ಸನ್ಯಾಸಿಯಾಗಿದ್ದರೆ ಹಿಂದೂ ಧರ್ಮದವರಿಗೆ ಮಾರ್ಗದಶ್ಯಕರಾಗಿ ಈ ಧರ್ಮಕ್ಕೆ ನಿಷ್ಟರಾಗಿರಬಹುದು. ಅದೇ ಸನ್ಯಾಸಿ ರಾಜಕಾರಣಿಯಾದರೆ ಬೇರೆ ಧರ್ಮದವರನ್ನು ಹೀಯಾಳಿಸಿ ಮಾತನಾಡಲು ಆಗುತ್ತಾ? ವಜ್ರದೇಹಿ ಸ್ವಾಮೀಜಿಯವರಿಗೆ ರಾಜಕೀಯಕ್ಕೆ ಬರಲು ಯಾರ ಆಕ್ಷೇಪವೂ ಇರಲಿಕ್ಕಿಲ್ಲ. ಆದರೆ ಚುನಾವಣೆಯ ಸಂದರ್ಭದಲ್ಲಿ ಎದುರು ಪಕ್ಷದವರು ಬಿಡುವ ಬಾಣಗಳಿಗೆ ಉತ್ತರ ಕೊಡಲು ಎಲ್ಲದಕ್ಕೂ ಸಿದ್ಧರಾಗಿರಬೇಕಾಗುತ್ತದೆ. ಆಲ್ ದಿ ಬೆಸ್ಟ್ ಸ್ವಾಮೀಜಿ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search