• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭಾರತಕ್ಕಿದೆ ಭಯೋತ್ಪಾದನೆ ಎದುರಿಸುವ ತಾಕತ್ತು: ರಾಜನಾಥ್ ಸಿಂಗ್

TNN Correspondent Posted On November 2, 2017
0


0
Shares
  • Share On Facebook
  • Tweet It

ಹೈದರಾಬಾದ್: ಭಾರತದ ರಕ್ಷಣಾ ಇಲಾಖೆ ಜಾಗತಿಕ ಭಯೋತ್ಪಾದನೆಯನ್ನು ಎದುರಿಸುವ ತಾಕತ್ತನ್ನು ಹೊಂದಿದೆ. ಐಸಿಸ್ ಸಂಘಟನೆ ಭಾರತ ಪ್ರವೇಶ ತಡೆಯಲು ಮತ್ತು ಮೂಗುದಾರ ಹಾಕಲು ಭಾರತದ ಗುಪ್ತಚರ ಇಲಾಖೆ ಮತ್ತು ರಕ್ಷಣಾ ಇಲಾಖೆ ಕಾರ್ಯ ನಿರ್ವಹಿಸುತ್ತಿವೆ. ವಿಶ್ವಕ್ಕೆ ಮಾರಕವಾಗಿರುವ ಐಸಿಸ್ ನಂತಹ ಸಂಘಟನೆಗಳನ್ನು ಬಗ್ಗುಬಡಿಯುವ ಶಕ್ತಿ ಭಾರತಕ್ಕಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್ ನ ವಲ್ಲಭಬಾಯಿ ಪಟೇಲ್ ನ್ಯಾಷನಲ್ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಮುಂದಿನ ಐದು ವರ್ಷದಲ್ಲಿ ಭಾರತದಲ್ಲಿ ಭಯೋತ್ಪಾದನೆ ಮತ್ತು ಕೋಮುವಾದವನ್ನು ತಡೆಯಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರ, ನಕ್ಸಲಿಸಂ ತಡೆಗಟ್ಟುವ ಗುರಿ ಹೊಂದಬೇಕಿದೆ ಎಂದು ಹೇಳಿದರು.

ಪ್ರಸ್ತುತ ವಿಶ್ವ ಭಯೋತ್ಪಾದನೆಯ ಭೀತಿಯಲ್ಲಿದೆ. ಇನ್ನು ಐಸಿಸ್ ನಂತಹ ಸಂಘಟನೆಗಳು ಅಂತರ್ಜಾಲವನ್ನು ಬಳಸಿ ಉಗ್ರತ್ವವನ್ನು ಹರಡುತ್ತಿವೆ. ಅದು ಭಾರತಕ್ಕೆ ಕಾಲಿಡದಂತೆ ನೋಡಿಕೊಳ್ಳಬೇಕು. ನಮ್ಮ ಗುಪ್ತಚರ ಮತ್ತು ರಕ್ಷಣಾ ಸಂಸ್ಥೆಗಳು ದುಷ್ಟರಿಗೆ ತಕ್ಕ ಪ್ರತಿಕ್ರಿಯೆಯನ್ನು ನೀಡುತ್ತಿವೆ. ಯಾವುದೇ ಆತಂಕ ಪಡುವಂತಿಲ್ಲ. ಆದರೆ ಮುನ್ನಚ್ಚರಿಕೆಯಲ್ಲಿರಬೇಕು ಎಂದು ಎಚ್ಚರಿಕೆ ನೀಡಿದರು.

ಪೊಲೀಸ್ ಇಲಾಖೆ ರಕ್ಷಣೆಗೆ ಭಾರತ ಸರಕಾರ ಸದಾ ಸಿದ್ಧವಾಗಿದೆ. ಪೊಲೀಸ್ ಇಲಾಖೆ ಬಲವರ್ಧನೆಯನ್ನು ಮಾಡಲು ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಗ್ಗಟ್ಟಿನಿಂದ ಕೂಡಿ ಈ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕಿದೆ. ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸೋಣ ಎಂದು ಸಲಹೆ ನೀಡಿದರು.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search