• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪೊಲೀಸ್ ಪೇದೆ ಅಮಾನತು, ಇದು ಸರ್ವಾಧಿಕಾರವಲ್ಲವೇ ಸಿದ್ದರಾಮಯ್ಯನವರೇ?

TNN Correspondent Posted On November 3, 2017
0


0
Shares
  • Share On Facebook
  • Tweet It

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ಮಾತನಾಡುವ ಭರದಲ್ಲಿ ಅವರು ಸರ್ವಾಧಿಕಾರಿ ಎಂದು ವಿನಾಕಾರಣ ಟೀಕಿಸುತ್ತಾರೆ. ಆದರೆ ಅದೇ ಸಿದ್ದರಾಮಯ್ಯ ಅವರು, ಫೇಸ್ ಬುಕ್ ನಲ್ಲಿ ಬೆಳ್ತಂಡಿಯ ಪೊಲೀಸ್ ಪೇದೆಯೊಬ್ಬರು ತಮ್ಮನ್ನು ಛೇಡಿಸುವ ರೀತಿ ಪೋಸ್ಟ್ ಹಾಕಿದ್ದಕ್ಕೆ ಅಮಾನತುಗೊಳಿಸಿದ್ದಾರೆ.

ರಾಜ್ ಶಿವಪ್ಪ ಎಂಬ ಪೇದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಂಸ, ಮೀನು ತಿಂದು ಧರ್ಮಸ್ಥಳಕ್ಕೆ ತೆರಳಿದ್ದಾರೆ. ಆದರೆ ಅದೇ ನರೇಂದ್ರ ಮೋದಿ ಉಪವಾಸ ಇದ್ದು, ಸಂಸ್ಕಾರಭರಿತರಾಗಿ ಧರ್ಮಸ್ಥಳಕ್ಕೆ ತೆರಳಿದ್ದಾರೆ ಎಂಬರ್ಥದ ಎರಡು ಫೋಟೋಗಳನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ್ದರು.

ಆದರೆ ಇದನ್ನು ಸಹಿಸದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಪೇದೆಯನ್ನು ಅಮಾನತುಗೊಳಿಸಿದೆ.

ಇದೇ ಸಿಎಂ ಅಭಿವ್ಯಕ್ತಿ ಸ್ವಾತಂತ್ರ್ಯ, ಸರ್ವಾಧಿಕಾರದ ಬಗ್ಗೆ ಮಾತನಾಡುತ್ತಾರೆ. ಆದರೆ ಪೇದೆಯೊಬ್ಬರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಮಾತ್ರಕ್ಕೆ ಅಮಾನತುಗೊಳಿಸುವುದು ಸರ್ವಾಧಿಕಾರದ ಸಂಕೇತವಲ್ಲವೇ? ಪೇದೆಯನ್ನು ಅಮಾನತುಗೊಳಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವೇ ಅಲ್ಲವೇ?

ರಾಜ್ ಶಿವಪ್ಪ ಅವರು ಬಾಗಲಕೋಟೆಯವರಾಗಿದ್ದು, ಕರ್ನಾಟಕ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಅವರು 6 ವರ್ಷಗಳ ಹಿಂದೆ ಪೇದೆಯಾಗಿ ಆಯ್ಕೆಯಾಗಿದ್ದು, ಮಂಗಳೂರಿನ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search