• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಉಗ್ರವಾದ ಕುರಿತು ಲೇಖನ; ಕಮಲ್ ಹಾಸನ್ ವಿರುದ್ಧ ಮಾನನಷ್ಟ ಮೊಕದ್ದಮೆ

TNN Correspondent Posted On November 4, 2017
0


0
Shares
  • Share On Facebook
  • Tweet It

ಹಿಂದೂ ಉಗ್ರವಾದದ ಅಸ್ತಿತ್ವದ ಕುರಿತು ತಳ್ಳಿಹಾಕುವಂತಿಲ್ಲ ಎಂದು ಹೇಳಿಕೆ ನೀಡಿದ್ದ ಕಮಲ್ ಹಾಸನ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್ 500 (ಮಾನನಷ್ಟಕ್ಕೆ ಶಿಕ್ಷೆ ವಿಧಿಸುವುದು), 511, 298 (ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು), 295 ಎ (ಧಾರ್ಮಿಕ ಭಾವನೆ ಕೆರಳಿಸುವುದು) ಹಾಗೂ 505 (ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತುವುದು) ಅನ್ವಯ ಕಮಲ್ ಹಾಸನ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.

ಕಮ್ಲೇಶ್ ಚಂದ್ರ ತ್ರಿಪಾಠಿ ಎಂಬ ವಕೀಲ ಕಮಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದು, “ಹಿಂದೂ ಭಯೋತ್ಪಾದನೆ ಕುರಿತು ಕಮಲ್ ಹಾಸನ್ ಬಳಿ ಯಾವುದೇ ದಾಖಲೆಗಳಿದ್ದರೆ, ಅವುಗಳನ್ನು ಎನ್ಐಎ ಸೇರಿ ನಾನಾ ತನಿಖಾ ಸಂಸ್ಥೆಗಳಿಗೆ ಒದಗಿಸಲಿ. ಆದರೆ ಹೀಗೆ ಬೇಜವಾಬ್ದಾರಿಯುತವಾಗಿ ಮಾತನಾಡುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಹಿಡಿದ ಕನ್ನಡಿಯಾಗಿದೆ. ಅವರ ಮಾತುಗಳಿಗೆ ಸಂಪೂರ್ಣ ವಿರೋಧವಿದ್ದು, ತಕ್ಕ ಶಿಕ್ಷೆ ನೀಡಬೇಕು” ಎಂದು ಮೊಕದ್ದಮೆಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ದೂರು ಆಲಿಸಿರುವ ನ್ಯಾಯಾಲಯ, ಶನಿವಾರ ಈ ಕುರಿತು ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಆನಂದ ವಿಕಟನ್ ಎಂಬ ತಮಿಳು ವಾರಪತ್ರಿಕೆಗೆ ಲೇಖನ ಬರೆದಿದ್ದ ಕಮಲ್ ಹಾಸನ್, “ದೇಶದಲ್ಲಿ ಹಿಂದೂ ಉಗ್ರವಾದದ ಅಸ್ತಿತ್ವವನ್ನು ತಳಿಹಾಕುಂತಿಲ್ಲ” ಎಂದು ಉಲ್ಲೇಖಿಸಿದ್ದರು. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಆದಾಗ್ಯೂ ಕಮಲ್ ಪರ ಪ್ರಕಾಶ್ ರೈ ಬ್ಯಾಟಿಂಗ್ ಮಾಡಿದ್ದರು. ಈಗ ಪ್ರಕರಣ ವಿಚಾರಣೆ ಹಂತಕ್ಕೆ ಬಂದಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search