• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಸ್ಲಿಂ ಆಟೋ ಡ್ರೈವರ್ ಮಗನಾದ ಆತ ಟೀಂ ಇಂಡಿಯಾ ಸೇರಿದ ಹಾಗೂ ರಾಷ್ಟ್ರಗೀತೆ ಮೊಳಗುತ್ತಲೇ ಕಣ್ಣೀರಿತ್ತ

TNN Correspondent Posted On November 5, 2017


  • Share On Facebook
  • Tweet It

 ನಾವಿಲ್ಲಿ ಚಿತ್ರಮಂದಿರದಲ್ಲಿ ರಾಷ್ಟ್ರಗೀತೆ  ಮೊಳಗಿದರೆ ಎದ್ದು ನಿಲ್ಲಬೇಕೋ, ಬೇಡವೋ ಎಂದು ಚಿಂತಿಸುತ್ತಿದ್ದರೆ, ನಾನು ನಿಲ್ಲಲ್ಲ, ಏಕೆ ನಿಲ್ಲಬೇಕು ಎಂದು ಕೆಲವರು ಬೊಬ್ಬೆ ಹಾಕುತ್ತಿದ್ದರೆ, ರಾಷ್ಟ್ರಗೀತೆ ಹಾಡಿಸೋಕೆ ಅದೇನು ಶಾಲೆಯೇ ಎಂದು ಎಲುಬಿಲ್ಲದ ನಾಲಗೆ ಹರಿಬಿಡುತ್ತಿದ್ದರೆ, ಅಲ್ಲೊಬ್ಬ 23ರ ಯುವಕ ಟೀಂ ಇಂಡಿಯಾ ಕ್ರಿಕೆಟ್ ತಂಡ ಸೇರಿದ್ದ.

ನಿನ್ನೆ ರಾಜ್ ಕೋಟ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಎರಡನೇ ಅಂತಾರಾಷ್ಟ್ರೀಯ ಟ್ವೆಂಟಿ ಟ್ವೆಂಟಿ ಪಂದ್ಯದ ಆರಂಭಕ್ಕೂ ಮುನ್ನ ಕೋಚ್ ರವಿಶಾಸ್ತ್ರಿ ಅವನಿಗೆ ಟೀಂ ಇಂಡಿಯಾದ ಕ್ಯಾಪ್ ಕೊಟ್ಟರು.

ನಂತರ, ಜನಗಣಮನ ಮೊಳಗುತ್ತಲೇ ಆತ ಭಾವನೆ ತಡೆದುಕೊಳ್ಳಲಾಗಲಿಲ್ಲ. ಕಣ್ಣಲ್ಲಿ ನೀರು ಜಿನುಗುತ್ತಿದ್ದವು.

ಆತನ ಹೆಸರು ಮೊಹಮ್ಮದ್ ಸಿರಾಜ್.

ಬಡ ಮುಸ್ಲಿಮ್ ಆಟೋ ಡ್ರೈವರನ ಮಗನಾದ ಸಿರಾಜ್ 2015ರಲ್ಲಿ ಪ್ರಥಮ ದರ್ಜೆ ಕ್ರಿಕೆಟಿಗೆ ಪದಾರ್ಪಣೆ ಮಾಡಿ, 2017ರಲ್ಲಿ ಐಪಿಎಲ್ ಗೂ ಕಾಲಿರಿಸಿದರು. ಆಗ ಬಂದ 2.4 ಕೋಟಿ ರೂ. ಕಂಡು ಖುಷಿಯಾದ ಈತ ಮೊದಲು ಅಪ್ಪ ಆಟೋ ಓಡಿಸುವುದನ್ನು ನಿಲ್ಲಿಸಿದ.

ಶನಿವಾರ ಆರಂಭವಾದ ಪಂದ್ಯದಲ್ಲಿ ಸಿರಾಜ್ ರಾಷ್ಟ್ರಗೀತೆ ಮೊಳಗುವಾಗ ಇದಕ್ಕಾಗಿಯೇ ಇಷ್ಟು ದಿನ ಶ್ರಮಿಸಿದೆ ಎಂಬ ಕಾರಣಕ್ಕಾಗಿಯೋ, ಕೊನೆಗೂ ಅಂತಾರಾಷ್ಟ್ರೀಯ ಪಂದ್ಯವೊಂದರ ಆರಂಭಕ್ಕೂ ಮೊದಲು ದೇಶಭಕ್ತಿ ಗೀತೆ ಕೇಳುವಂತಾಯಿತಲ್ಲ ಎಂಬ ಸಾರ್ಥಕ ಭಾವದಿಂದಲೋ, ದೇಶಕ್ಕಾಗಿ ಆಡುವ ಅವಕಾಶ ನನ್ನದಾಯಿತಲ್ಲ ಎಂಬ ಮನೋಭಾವನೆಯಿಂದಲೋ ಆತ ಸಿರಾಜ್ ಕಣ್ಣೀರಿಟ್ಟು ದೇಶದ ಮನಗೆದ್ದಿದ್ದಾನೆ.

ಈಗ ಸಿರಾಜ್ ರಾಷ್ಟ್ರಗೀತೆಗೆ ಕಣ್ಣೀರಟ್ಟ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಸಹ ವ್ಯಕ್ತವಾಗಿವೆ. ಸಿರಾಜ್ ದೇಶಭಕ್ತಿ ಹೀಗೆಯೇ ಇರಲಿ, ಆಶಿಶ್ ನೆಹ್ರಾ ಸ್ಥಾನವನ್ನು ಸಮರ್ಪಕವಾಗಿ ತುಂಬಿ ದೇಶಕ್ಕೆ ಕೀರ್ತಿ ತರಲಿ. ಹಾಗೆಯೇ ಗೆದ್ದಲು ಹಿಡಿದ ಮನಸ್ಸುಗಳಿಗೆ ಸಿರಾಜ್ ದೇಶಭಕ್ತಿ ಮಾದರಿಯಾಗಲಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search