• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರವಿಂದ್ ಕೇಜ್ರಿವಾಲರನ್ನು ಭೇಟಿಯಾಗಲು ಸಮಯವಿಲ್ಲ ಎಂದ ಪಂಜಾಬ್ ಮುಖ್ಯಮಂತ್ರಿ!

TNN Correspondent Posted On November 15, 2017
0


0
Shares
  • Share On Facebook
  • Tweet It

ಚಂಡೀಗಡ: ದೆಹಲಿಯಲ್ಲಿ ವಾಯುಮಾಲಿನ್ಯದ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಘೋಷಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮಸ್ಯೆ ನಿವಾರಣೆಗೆ ಪ್ರಯತ್ನಿಸುತ್ತಿದ್ದು, ಈ ಕುರಿತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಭೇಟಿ ಮಾಡಲು ಪ್ರಸ್ತಾಪಿಸಿದ್ದರು.

ಆದರೆ ಇದಕ್ಕೆ ಸೊಪ್ಪು ಹಾಕದ ಅಮರಿಂದರ್ ಸಿಂಗ್, ಅರವಿಂದ್ ಕೇಜ್ರಿವಾಲರನ್ನು ಭೇಟಿಯಾಗುವಷ್ಟು ಸಮಯ ನನ್ನ ಬಳಿ ಇಲ್ಲ ಎಂದು ಛೇಡಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಪಂಜಾಬ್ ಮುಖ್ಯಮಂತ್ರಿ, ಅರವಿಂದ್ ಕೇಜ್ರಿವಾಲ್ ಅವರು ವಾಯುಮಾಲಿನ್ಯ ವಿಷಯದಲ್ಲೂ ರಾಜಕೀಯ ಬೆರೆಸಲು ಮುಂದಾಗಿದ್ದಾರೆ. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾದರೆ ಪಂಜಾಬಿನ ರೈತರು ಗದ್ದೆಯಲ್ಲಿ ಭತ್ತದ ತ್ಯಾಜ್ಯ ಸುಡಬಾರದು ಎನ್ನುತ್ತಾರೆ. ಹೀಗೆ ರಾಜಕೀಯ ಬೆರೆಸುತ್ತಿರುವ ಕಾರಣ ಹಾಗೂ ನನ್ನ ಬಳಿ ಅವರನ್ನು ಭೇಟಿಯಾಗಲು ಸಮಯವಿಲ್ಲದ ಕಾರಣ ಭೇಟಿಮಾಡಲಾಗುವುದಿಲ್ಲ ಎಂದು ಖಡಾಖಡಿಯಾಗಿ ಹೇಳಿದ್ದಾರೆ.

ದೆಹಲಿ ಹಾಗೂ ಪಂಜಾಬಿನಲ್ಲಿ ನಗರವಾಸಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಅದರಲ್ಲೂ ದೆಹಲಿಯಲ್ಲಿ ಸಾರಿಗೆ ವ್ಯವಸ್ಥೆಯ ಲೋಪದಿಂದ ವಾಯುಮಾಲಿನ್ಯ ಹೆಚ್ಚಾಗಿದೆ. ಆದರೆ ಇದನ್ನು ತಡೆಯುವಲ್ಲಿ ವಿಫಲವಾಗಿರುವ ಅರವಿಂದ ಕೇಜ್ರಿವಾಲ್ ವಿಷಯ ಬೇರೆಡೆ ವಾಲಿಸಲು ಭತ್ತ ಸುಡದಂತೆ ಹಾಗೂ ನಮ್ಮನ್ನು ಭೇಟಿ ಮಾಡುವಂತೆ ಪ್ರಸ್ತಾಪಿಸಿದ್ದಾರೆ ಎಂದು ಸಿಂಗ್ ಆರೋಪಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search