• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪರಿಸರ ರಕ್ಷಣೆಗೆ ಕೇಜ್ರಿವಾಲ್ ಸರ್ಕಾರ ಪಡೆದಿದ್ದು 787 ಕೋಟಿ ರುಪಾಯಿ, ಖರ್ಚು ಮಾಡಿದ್ದು ಬರೀ 93 ಲಕ್ಷ!

TNN Correspondent Posted On November 16, 2017
0


0
Shares
  • Share On Facebook
  • Tweet It

ದೆಹಲಿ: ಯಾವಾಗ ಹಸಿರು ನ್ಯಾಯಾಧಿಕರಣ ದೆಹಲಿಯಲ್ಲಿ ವಾಯುಮಾಲಿನ್ಯ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಘೋಷಣೆ ಮಾಡಿತೋ, ಅಲ್ಲಿಂದ ದಿಢೀರನೆ ಎಚ್ಚೆತ್ತುಕೊಂಡವರ ಹೆಸರು ಅರವಿಂದ್ ಕೇಜ್ರಿವಾಲ್.

ಹೌದು, ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಘೋಷಣೆಯಾದ ಬಳಿಕ ಕೇಜ್ರಿವಾಲ್, ಹರಿಯಾಣ, ಪಂಜಾಬ್ ಗಳಲ್ಲಿ ರೈತರು ಭತ್ತದ ತ್ಯಾಜ್ಯ ಸುಡಬಾರದು ಎಂದರು. ಎರಡೂ ರಾಜ್ಯಗಳ ಮುಖ್ಯಮಂತ್ರಿ ಜತೆ ಮಾತನಾಡುವೆ ಎಂದು ಪರಿಸರ ಕಾಳಜಿ ತೋರಿಸಿದರು.

ಆದರೆ, ದೆಹಲಿ ಸರ್ಕಾರ ಪರಿಸರ ರಕ್ಷಣೆಗೆ ಪ್ರಸಕ್ತ ವರ್ಷದಲ್ಲಿ ಜನರಿಂದ ಪಡೆದ ತೆರಿಗೆ ಹಣ 787 ಕೋಟಿ ರೂಪಾಯಿ. ಪರಿಸರ ರಕ್ಷಣೆಗೆ ಇಷ್ಟೆಲ್ಲ ಮಾತನಾಡುವ ಸರ್ಕಾರ ಖರ್ಚು ಮಾಡಿದ್ದು ಮಾತ್ರ ಬರೀ 93 ಲಕ್ಷ ರೂಪಾಯಿ ಎಂದರೆ ನಂಬಲೇಬೇಕು.

ಸಂಜೀವ್ ಜೈನ್ ಎಂಬ ಆರ್ ಟಿಐ ಕಾರ್ಯಕರ್ತ ಮಾಹಿತಿ ಹಕ್ಕು ಕಾಯಿದೆ ಅನ್ವಯ ಪಡೆದ ದಾಖಲೆ ಪ್ರಕಾರ, ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರ 2015ರಲ್ಲಿ 50 ಕೋಟಿ ರುಪಾಯಿ, 2016ರಲ್ಲಿ 387 ಹಾಗೂ ಪ್ರಸಕ್ತ ವರ್ಷದ ಜನವರಿಯಿಂದ ಸೆ.1ರವರೆಗೆ ಬರೋಬ್ಬರಿ 787 ಕೋಟಿ ರೂಪಾಯಿ ಪರಿಸರ ಶುಲ್ಕ ಸಂಗ್ರಹಿಸಿದೆ. ಆದರೆ ಅದರಲ್ಲಿ ಖರ್ಚು ಮಾಡಿದ್ದು ಮಾತ್ರ 93 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.

2007ರಲ್ಲಿ ಪರಿಸರ ರಕ್ಷಣೆಗೆ ಅಂದಿನ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಪರಿಸರ ಶುಲ್ಕ ತೆರಿಗೆ ಜಾರಿಗೊಳಿಸಿದ್ದರು. ಆದರೆ ಆಡಳಿತಕ್ಕೆ ಬಂದು ಮೂರು ವರ್ಷವಾದರೂ ಕೇಜ್ರಿವಾಲ್ ಸರ್ಕಾರ ತೆರಿಗೆ ಹಣ ಖರ್ಚು ಮಾಡದೇ ಬರೀ, ಮಾತಿನಲ್ಲೇ ಪರಿಸರ ರಕ್ಷಣೆ ಮಾಡುತ್ತಿರುವ ಪರಿಣಾಮವೇ ದೆಹಲಿಯಲ್ಲಿ ವಾಯುಮಾಲಿನ್ಯ ತುರ್ತು ಪರಿಸ್ಥಿತಿ ಎದುರಾಗಿದೆ ಎಂಬ ಮಾತು ಕೇಳಿಬರುತ್ತಿವೆ.

 

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search