• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಬಹುತೇಕ ಮುಸ್ಲಿಮರ ವಿರೋಧವಿಲ್ಲ: ಶ್ರೀ ಶ್ರೀ ರವಿಶಂಕರ್ ಗುರೂಜಿ

TNN Correspondent Posted On November 16, 2017
0


0
Shares
  • Share On Facebook
  • Tweet It

ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಬಹುತೇಕ ಮುಸ್ಲಿಮರ ಬೆಂಬಲವಿದ್ದು, ವಿರೋಧಿಸುತ್ತಿಲ್ಲ ಎಂದು ಅಧ್ಯಾತ್ಮ ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿ ಹೇಳಿದ್ದಾರೆ.

ರಾಮಮಂದಿರ-ಬಾಬ್ರಿ ಮಸೀದಿ ನಿರ್ಮಾಣದ ಕುರಿತ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಭೇಟಿ ಮಾಡಲು ಉತ್ತರ ಪ್ರದೇಶಕ್ಕೆ ತೆರಳಿರುವ ಗುರೂಜಿ ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ್ದಾರೆ.

ಈ ಮಾತು ಕೆಲವು ಮುಸ್ಲಿಮರು ಒಪ್ಪುವುದಿಲ್ಲ ನಿಜ. ಆದರೆ ವಾಸ್ತವದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಅಯೋಧ್ಯೆಯ ಬಹತೇಕ ಮುಸ್ಲಿಮರು ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದಿದ್ದಾರೆ.

ಖಂಡಿತವಾಗಿಯೂ ವಿವಾದ ಬಗೆಹರಿಯದ ಕಾಲವಿತ್ತು. ಈಗಲೂ ಹಾಗೆಯೇ ಬಿಂಬಿಸಲಾಗುತ್ತಿದೆ. ಆದರೆ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಯುವಕರು ಹಾಗೂ ಮುಖಂಡರು ಮನಸ್ಸು ಮಾಡಿದರೆ ವಿವಾದವನ್ನು ಸರಳವಾಗಿ ಬಗೆಹರಿಸಬಹುದು ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಕಾರಾತ್ಮಕ ವಾತಾವರಣವಿದೆ. ಜನ ವಿವಾದದಿಂದ ಮುಕ್ತಿ ಹೊಂದಲು ಬಯಸುತ್ತಿದ್ದಾರೆ. ಆದರೆ ವಿವಾದ ಬಗೆಹರಿಸುವುದು ಅಷ್ಟು ಸರಳ ಅಲ್ಲ ಎಂಬುದೂ ಗೊತ್ತಿದೆ. ಆದರೆ, ಎಲ್ಲರೊಂದಿಗೂ ಮಾತನಾಡಲು ನನಗೆ ಅವಕಾಶ ನೀಡಲಿ. ಆದಷ್ಟು ಬೇಗ ಸಮಸ್ಯಗೆ ಇತಿಶ್ರೀ ಹಾಡುವೆ ಎಂದು ಗುರೂಜಿ ಹೇಳಿದ್ದಾರೆ.

ರಾಮಮಂದಿರ-ಬಾಬ್ರಿ ಮಸೀದಿ ವಿಚಾರದಲ್ಲಿ ಹಿಂದೂ ಮುಸ್ಲಿಮರ ನಡುವೆ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸುವುದಾಗಿ ರವಿಶಂಕರ್ ಗುರೂಜಿ ಹೇಳಿದ್ದಾಗ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬೇಡ ಎಂಬ ಮಾತನ್ನಾಡಿದ್ದರು. ಆದರೆ ಗುರೂಜಿ ಉತ್ತರಪ್ರದೇಶಕ್ಕೇ ತೆರಳಿದ್ದು, ವಿವಾದ ಬಗೆಹರಿಸಲು ಹಾಗೂ ರಾಮಮಂದಿರ ನಿರ್ಮಿಸಲು ಮುಸ್ಲಿಮರ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಸಕಾರಾತ್ಮಕ ಭಾವನೆ ಮೂಡಿಸಿದೆ. ಶೀಘ್ರವೇ ಅಯೋಧ್ಯೆಯಲ್ಲಿ ಶಾಂತಿಯುತವಾಗಿ ರಾಮಮಂದಿರ ನಿರ್ಮಾಣವಾಗಲಿ ಎಂಬುದೇ ಕೋಟ್ಯಂತರ ಹಿಂದೂಗಳ ಆಶಯವಾಗಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search