• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದ ಸಾಲ ನೀಡುವ ಆಫರ್ ತಿರಸ್ಕರಿಸಿ ಮಿತ್ರನಿಗೇ ಟಾಂಗ್ ನೀಡಿದ ಪಾಕಿಸ್ತಾನ

TNN Correspondent Posted On November 17, 2017
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ಹಣಕಾಸು ನೆರವು, ಯೋಜನೆ ಹಾಗೂ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪಾಕಿಸ್ತಾನವನ್ನು ಬೆಂಬಲಿಸಿ ಸ್ನೇಹ ಗಳಿಸಿದ್ದ ಚೀನಾಕ್ಕೆ ಪಾಕಿಸ್ತಾನ ಟಾಂಗ್ ನೀಡಿದ್ದು, 14 ಶತಕೋಟಿ ಡಾಲರ್ ಹಣ ಸಾಲ ನೀಡುವುದಾಗಿ ಚೀನಾ ನೀಡಿದ ಆಫರ್ ಪಾಕಿಸ್ತಾನ ತಿರಸ್ಕರಿಸಿದೆ.

ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಮಹತ್ತರ ಯೋಜನೆ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಡೈಮರ್ ಭಾಷಾ ಅಣೆಕಟ್ಟು ನಿರ್ಮಿಸಲು 14 ಶತಕೋಟಿ ಡಾಲರ್ ಹಣ ನೀಡಲು ಚೀನಾ ಮುಂದೆ ಬಂದಿತ್ತು. ಆದರೆ ಸ್ವತಃ ಆಣೆಕಟ್ಟು ನಿರ್ಮಿಸುವ ಇಂಗಿತ ವ್ಯಕ್ತಪಡಿಸಿದ ಪಾಕಿಸ್ತಾನ, ಸ್ನೇಹಿತನಿಗೇ ಟಾಂಗ್ ನೀಡುವ ಮೂಲಕ ತನ್ನ ನರಿಬುದ್ಧಿ ಪ್ರದರ್ಶಿಸಿದೆ. ಇದರಿಂದ ಚೀನಾ ಪಾಡು ಬಾಲ ಸುಟ್ಟ ನರಿಯಂತಾಗಿದೆ.

ಈ ಪಾಕ್ ಆಕ್ರಮಿತ ಕಾಶ್ಮೀರ ವಿವಾದಿತ ಪ್ರದೇಶದಲ್ಲಿ ಯಾವುದೇ ಯೋಜನೆಗೆ ಸಾಲ ನೀಡಲು ಅಂತಾರಾಷ್ಟ್ರೀಯ ಸಂಸ್ಥೆ ಹಾಗೂ ಬ್ಯಾಂಕುಗಳು ಸಾಲ ನೀಡಲು ಒಪ್ಪಿಗೆ ಸೂಚಿಸುತ್ತಿಲ್ಲ. ಭಾರತವೂ ಏಷ್ಯನ್ ಅಭಿವೃದ್ಧಿ ಬ್ಯಾಂಕಿನಿಂದ ಸಾಲ ತೆಗೆದು ಡ್ಯಾಂ ನಿರ್ಮಿಸಲು ಮುಂದಾಗಿತ್ತಾದರೂ ಪ್ರಯತ್ನ ವಿಫಲವಾಗಿತ್ತು.

ಆದರೆ ಚೀನಾ, ಹಣದ ನೆರವಿನ ಮೂಲಕ ಪಾಕಿಸ್ತಾನವನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವ ದೃಷ್ಟಿಯಿಂದ 14 ಶತಕೋಟಿ ಡಾಲರ್ ನೀಡಲು ಮುಂದಾಗಿತ್ತು. ಆದರೆ 60 ಶತಕೋಟಿ ಡಾಲರ್ ವೆಚ್ಚದ ಸಿಪಿಇಸಿ ಯೋಜನೆಯಿಂದ ಡ್ಯಾಂ ಕಾಮಗಾರಿ ತಪ್ಪಿಸಲು ಪಾಕಿಸ್ತಾನ ಈ ಕುತಂತ್ರ ಬುದ್ಧಿ ಅನುಸರಿಸಿದೆ ಎಂದೇ ಹೇಳಲಾಗುತ್ತಿದೆ.

ಒಟ್ಟಿನಲ್ಲಿ ಚೀನಾದ ತಂತ್ರಕ್ಕೆ ಪಾಕಿಸ್ತಾನ ಕುತಂತ್ರದ ಅಸ್ತ್ರ ಬಳಸಿದ್ದು, ಪಾಕಿಸ್ತಾನ ಯಾವ ರಾಷ್ಟ್ರಕ್ಕೂ ನಿಷ್ಠೆಯಿಂದ ಇರಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದು ಚೀನಾಕ್ಕೂ ಒಂದು ಪಾಠವಾಗಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search